<p><strong>ರಾಯಚೂರು</strong>: ‘ಸಾರ್ವಜನಿಕರ ಎಲ್ಲ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆ ಯೋಜನೆ ಜಾರಿಗೊಳಿಸಿದೆ. ಕಂದಾಯ ಇಲಾಖೆ ಅಧಿಕಾರಿಗಳು ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ಒತ್ತು ನೀಡಬೇಕು’ ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ಸೂಚಿಸಿದರು. <br><br> ಇಲ್ಲಿಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.</p>.<p>‘ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು ಸಾರ್ವಜನಿಕರ ದಾಖಲೆಗಳನ್ನು ಸಂರಕ್ಷಿಸುವಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ನಿರ್ದೇಶನ ನೀಡಿದರು. <br><br>‘ದಾಖಲೆಗಳ ಡಿಜಿಟಲೀಕರಣದಿಂದ ಕುಳಿತಲ್ಲೇ ಬೆರಳ ತುದಿಯಲ್ಲಿ ಸಾರ್ವಜನಿಕರ ಆಕಾರ ಬಂದಿ, ಮ್ಯುಟೇಶನ್, ಪಹಣಿ ಸೇರಿದಂತೆ ಎಲ್ಲವನ್ನೂ ಪಡೆಯಲು ಸಾಧ್ಯವಾಗಲಿದೆ. ಆದ್ದರಿಂದ ಅಧಿಕಾರಿಗಳು ಕಾಳಜಿಯಿಂದ ಕೆಲಸ ಮಾಡಬೇಕು’ ಎಂದರು.</p>.<p>‘ಮಹತ್ವದ ದಾಖಲೆಗಳ ಸಂಗ್ರಹಗಾರದಲ್ಲಿ ಬೇಕಾ ಬಿಟ್ಟಿಯಾಗಿ ಅನುಪಯುಕ್ತ ಮತ್ತು ಅನಗತ್ಯ ವಸ್ತುಗಳನ್ನು ಇಡಬಾರದು. ಇದರಿಂದ ಆ ವಸ್ತುಗಳು ತುಕ್ಕು ಹಿಡಿದು ದಾಖಲೆಗಳು ಹಾಳಾಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ದಾಖಲೆಗಳನ್ನು ಸಂಗ್ರಹಿಸಿಡಲಾದ ಕೊಠಡಿಯಲ್ಲಿನ ಅನುಪಯುಕ್ತ ವಸ್ತುಗಳನ್ನು ತೆರವುಗೊ ಳಿಸಬೇಕು. ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಹಾಗೂ ಸೂಕ್ಷ್ಮವಾಗಿ ನಿರ್ವಹಣೆ ಮಾಡಬೇಕು’ ಎಂದು ನಿರ್ದೇಶನ ನೀಡಿದರು.</p>.<p>‘ಜನರ ದಾಖಲೆಗಳ ಸಂರಕ್ಷಣೆ ಪ್ರತಿಯೊಬ್ಬ ಅಧಿಕಾರಿಯ ಹೊಣೆಯಾಗಿದೆ. ಸಿಬ್ಬಂದಿ ಮೇಲೂ ಸರಿಯಾಗಿ ನಿಗಾ ಇಟ್ಟು ಕೆಲಸಗಳನ್ನು ಮಾಡಿಸಬೇಕು’ ಎಂದು ತಿಳಿಸಿದರು.<br><br>‘ಸರ್ಕಾರದಿಂದ ಯಾವ ಯಾವ ದಾಖಲೆಗಳಿಗೆ ಯಾವ ಯಾವ ಬಣ್ಣ ಬಳಸಬೇಕು ಎನ್ನುವ ಪಟ್ಟಿ ಸಿದ್ಧಪಡಿಸಲಾಗಿದೆ. ಅದರ ಅನ್ವಯ ಅಧಿಕಾರಿಗಳು ಪಟ್ಟಿಗಳನ್ನು ರಚಿಸಿಕೊಂಡು ದಾಖಲೀಕರಣ ಮಾಡಬೇಕು’ ಎಂದು ಹೇಳಿದರು.<br><br>‘ಜಿಲ್ಲಾಧಿಕಾರಿ ನ್ಯಾಯಾಲಯದ 68 ಪ್ರಕರಣಗಳ ಪೈಕಿ 61 ಬಾಕಿ ಇವೆ. ರಾಯಚೂರು ತಹಶೀಲ್ದಾರ್ ಅವರ ವ್ಯಾಪ್ತಿಯಲ್ಲಿ 77, ಲಿಂಗಸುಗೂರು ವ್ಯಾಪ್ತಿಯಲ್ಲಿ 53 ಸೇರಿದಂತೆ ವಿವಿಧ ತಾಲ್ಲೂಕು ವ್ಯಾಪ್ತಿಯಲ್ಲಿ ಬಾಕಿಯಿರುವ ವಿವಿಧ ಪ್ರಕರಣಗಳಿವೆ. ಇವುಗಳನ್ನು ಆದಷ್ಟು ಬೇಗ ವಿಲೇವಾರಿ ಮಾಡಬೇಕು’ ಎಂದು ಸೂಚಿಸಿದರು.</p>.<p>ಜಿಲ್ಲಾಧಿಕಾರಿ ನಿತೀಶ್ ಮಾತನಾಡಿ,‘90 ದಿನಗಳೊಳಗಿನ 109 ಪ್ರಕರಣಗಳಿವೆ. 60 ದಿನಗಳೊಳಗಿನ 219 ಪ್ರಕರಣಗಳು ಬಾಕಿ ಇವೆ. 30 ದಿನಗಳೊಳಗಿನ 118 ಪ್ರಕರಣ 90 ದಿನಗಳ ಮೇಲ್ಪಟ್ಟು 18 ಪ್ರಕರಣಗಳು ಬಾಕಿ ಉಳಿದುಕೊಂಡಿವೆ. ಶೀಘ್ರವೇ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.<br><br> ‘ಬಾಕಿ ಇರುವ ಪ್ರಕರಣಗಳ ವಿಚಾರಣೆ ಮಾಡಿ ಆದೇಶಿಸಲಾಗಿದೆ. ಆದರೆ, ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ ಕಾರಣ ಅವು ಮತ್ತೆ ಜಿಲ್ಲಾಧಿಕಾರಿ ನ್ಯಾಯಾಲಯಕ್ಕೆ ರಿಮೈಂಡರ್ ಆಗಿ ಬರುತ್ತವೆ. ಆದ್ದರಿಂದ ಅವುಗಳ ದಾಖಲಾದ ದಿನಾಂಕದಿಂದ ಬಾಕಿ ಇವೆ’ ಎಂದರು.<br><br> ವಿವಿಧ ತಾಲ್ಲೂಕುಗಳ ತಹಶೀಲ್ದಾರ್ಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಭೂಮಾಪನ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ‘ಸಾರ್ವಜನಿಕರ ಎಲ್ಲ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆ ಯೋಜನೆ ಜಾರಿಗೊಳಿಸಿದೆ. ಕಂದಾಯ ಇಲಾಖೆ ಅಧಿಕಾರಿಗಳು ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ಒತ್ತು ನೀಡಬೇಕು’ ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ಸೂಚಿಸಿದರು. <br><br> ಇಲ್ಲಿಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.</p>.<p>‘ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು ಸಾರ್ವಜನಿಕರ ದಾಖಲೆಗಳನ್ನು ಸಂರಕ್ಷಿಸುವಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ನಿರ್ದೇಶನ ನೀಡಿದರು. <br><br>‘ದಾಖಲೆಗಳ ಡಿಜಿಟಲೀಕರಣದಿಂದ ಕುಳಿತಲ್ಲೇ ಬೆರಳ ತುದಿಯಲ್ಲಿ ಸಾರ್ವಜನಿಕರ ಆಕಾರ ಬಂದಿ, ಮ್ಯುಟೇಶನ್, ಪಹಣಿ ಸೇರಿದಂತೆ ಎಲ್ಲವನ್ನೂ ಪಡೆಯಲು ಸಾಧ್ಯವಾಗಲಿದೆ. ಆದ್ದರಿಂದ ಅಧಿಕಾರಿಗಳು ಕಾಳಜಿಯಿಂದ ಕೆಲಸ ಮಾಡಬೇಕು’ ಎಂದರು.</p>.<p>‘ಮಹತ್ವದ ದಾಖಲೆಗಳ ಸಂಗ್ರಹಗಾರದಲ್ಲಿ ಬೇಕಾ ಬಿಟ್ಟಿಯಾಗಿ ಅನುಪಯುಕ್ತ ಮತ್ತು ಅನಗತ್ಯ ವಸ್ತುಗಳನ್ನು ಇಡಬಾರದು. ಇದರಿಂದ ಆ ವಸ್ತುಗಳು ತುಕ್ಕು ಹಿಡಿದು ದಾಖಲೆಗಳು ಹಾಳಾಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ದಾಖಲೆಗಳನ್ನು ಸಂಗ್ರಹಿಸಿಡಲಾದ ಕೊಠಡಿಯಲ್ಲಿನ ಅನುಪಯುಕ್ತ ವಸ್ತುಗಳನ್ನು ತೆರವುಗೊ ಳಿಸಬೇಕು. ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಹಾಗೂ ಸೂಕ್ಷ್ಮವಾಗಿ ನಿರ್ವಹಣೆ ಮಾಡಬೇಕು’ ಎಂದು ನಿರ್ದೇಶನ ನೀಡಿದರು.</p>.<p>‘ಜನರ ದಾಖಲೆಗಳ ಸಂರಕ್ಷಣೆ ಪ್ರತಿಯೊಬ್ಬ ಅಧಿಕಾರಿಯ ಹೊಣೆಯಾಗಿದೆ. ಸಿಬ್ಬಂದಿ ಮೇಲೂ ಸರಿಯಾಗಿ ನಿಗಾ ಇಟ್ಟು ಕೆಲಸಗಳನ್ನು ಮಾಡಿಸಬೇಕು’ ಎಂದು ತಿಳಿಸಿದರು.<br><br>‘ಸರ್ಕಾರದಿಂದ ಯಾವ ಯಾವ ದಾಖಲೆಗಳಿಗೆ ಯಾವ ಯಾವ ಬಣ್ಣ ಬಳಸಬೇಕು ಎನ್ನುವ ಪಟ್ಟಿ ಸಿದ್ಧಪಡಿಸಲಾಗಿದೆ. ಅದರ ಅನ್ವಯ ಅಧಿಕಾರಿಗಳು ಪಟ್ಟಿಗಳನ್ನು ರಚಿಸಿಕೊಂಡು ದಾಖಲೀಕರಣ ಮಾಡಬೇಕು’ ಎಂದು ಹೇಳಿದರು.<br><br>‘ಜಿಲ್ಲಾಧಿಕಾರಿ ನ್ಯಾಯಾಲಯದ 68 ಪ್ರಕರಣಗಳ ಪೈಕಿ 61 ಬಾಕಿ ಇವೆ. ರಾಯಚೂರು ತಹಶೀಲ್ದಾರ್ ಅವರ ವ್ಯಾಪ್ತಿಯಲ್ಲಿ 77, ಲಿಂಗಸುಗೂರು ವ್ಯಾಪ್ತಿಯಲ್ಲಿ 53 ಸೇರಿದಂತೆ ವಿವಿಧ ತಾಲ್ಲೂಕು ವ್ಯಾಪ್ತಿಯಲ್ಲಿ ಬಾಕಿಯಿರುವ ವಿವಿಧ ಪ್ರಕರಣಗಳಿವೆ. ಇವುಗಳನ್ನು ಆದಷ್ಟು ಬೇಗ ವಿಲೇವಾರಿ ಮಾಡಬೇಕು’ ಎಂದು ಸೂಚಿಸಿದರು.</p>.<p>ಜಿಲ್ಲಾಧಿಕಾರಿ ನಿತೀಶ್ ಮಾತನಾಡಿ,‘90 ದಿನಗಳೊಳಗಿನ 109 ಪ್ರಕರಣಗಳಿವೆ. 60 ದಿನಗಳೊಳಗಿನ 219 ಪ್ರಕರಣಗಳು ಬಾಕಿ ಇವೆ. 30 ದಿನಗಳೊಳಗಿನ 118 ಪ್ರಕರಣ 90 ದಿನಗಳ ಮೇಲ್ಪಟ್ಟು 18 ಪ್ರಕರಣಗಳು ಬಾಕಿ ಉಳಿದುಕೊಂಡಿವೆ. ಶೀಘ್ರವೇ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.<br><br> ‘ಬಾಕಿ ಇರುವ ಪ್ರಕರಣಗಳ ವಿಚಾರಣೆ ಮಾಡಿ ಆದೇಶಿಸಲಾಗಿದೆ. ಆದರೆ, ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ ಕಾರಣ ಅವು ಮತ್ತೆ ಜಿಲ್ಲಾಧಿಕಾರಿ ನ್ಯಾಯಾಲಯಕ್ಕೆ ರಿಮೈಂಡರ್ ಆಗಿ ಬರುತ್ತವೆ. ಆದ್ದರಿಂದ ಅವುಗಳ ದಾಖಲಾದ ದಿನಾಂಕದಿಂದ ಬಾಕಿ ಇವೆ’ ಎಂದರು.<br><br> ವಿವಿಧ ತಾಲ್ಲೂಕುಗಳ ತಹಶೀಲ್ದಾರ್ಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಭೂಮಾಪನ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>