<p><strong>ರಾಯಚೂರು</strong>: ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ವೇತನ ಪಾವತಿಸಲು ನಿರ್ಲಕ್ಷ್ಯ ಧೋರಣೆ ಅನುಸರಿಸಬಾರದು. ಪ್ರತಿ ತಿಂಗಳು ವೇತನ ಪಾವತಿಸಿ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಸೂಚನೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ 15ನೇ ಹಣಕಾಸು ಯೋಜನೆಯ ಕ್ರಿಯಾಯೋಜನೆ ಸಿದ್ಧಪಡಿಸುವ ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿಯಿಂದ ವಸೂಲಿ ಮಾಡುವ ತೆರಿಗೆಯಲ್ಲಿ ಶೇ 40 ರಷ್ಟನ್ನು ವೇತನ ಪಾವತಿಗೆ ಬಳಕೆ ಮಾಡಿಕೊಳ್ಳಬೇಕು. ಇನ್ನುಳಿದ ತೆರಿಗೆಯನ್ನು ಅಭಿವೃದ್ಧಿಗೆ ಬಳಕೆ ಮಾಡಬೇಕಾಗುತ್ತದೆ. ಗ್ರಾಮಗಳಲ್ಲಿ ತೆರಿಗೆ ಸಂಗ್ರಹಿಸುವ ಬಿಲ್ ಕಲೆಕ್ಟರ್ಗಳಿಗೇ ವೇತನ ನೀಡದಿರುವುದು ಸರಿಯಾದ ಕ್ರಮವಲ್ಲ ಎಂದು ಹೇಳಿದರು.</p>.<p>ಸಿಬ್ಬಂದಿ ವೇತನ ಪಾವತಿ ಆಗದಿರುವ ಕುರಿತು ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಬಿಲ್ ಕಲೆಕ್ಟರ್, ವಾಟರ್ಮ್ಯಾನ್ ಹಾಗೂ ಇತರೆ ಸಿಬ್ಬಂದಿಗೆ ಸರಿಯಾಗಿ ವೇತನ ಕೊಡಿ ಎಂದು ತಿಳಿಸಿದರು.</p>.<p>ಒಂದು ವೇಳೆ, ವೇತನ ಪಾವತಿಸುವುದಕ್ಕೆ ವಿಳಂಬನೀತಿ ಅನುಸರಿಸುವುದು ಕಂಡುಬಂದರೆ; ಇದಕ್ಕೆ ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನೇ ಹೊಣೆಗಾರ ಮಾಡಲಾಗುವುದು. 15ನೇ ಹಣಕಾಸು ಯೋಜನೆಯಡಿ ಸಿಬ್ಬಂದಿ ವೇತನ ಪಾವತಿಗೆ ಸಂಬಂಧಿಸಿ ಕ್ರಿಯಾಯೋಜನೆ ಸಿದ್ಧಪಡಿಸಿ ವರದಿ ನೀಡಬೇಕು ಎಂದರು.</p>.<p>ಸ್ವಚ್ಛಭಾರತ್ ಮಿಷನ್ ಫಲಾನುಭವಿಗಳನ್ನು ಅರ್ಹ ಫಲಾನುಭವಿಗಳನ್ನು ಕೂಡಲೇ ಆಯ್ಕೆ ಮಾಡಬೇಕು. ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ದಿನಕ್ಕೆ 55 ಲೀಟರ್ ನೀರು ಸರಬರಾಜು ಮಾಡಬೇಕಿದ್ದು, ಫಲಾನುಭವಿಗಳ ಅಗತ್ಯ ದಾಖಲಾತಿಗಳನ್ನು ಎಂಐಎಸ್ ತಂತ್ರಾಂಶದಲ್ಲಿ ನಮೂದಿಸಬೇಕು. ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಯೋಜನಾ ನಿರ್ದೇಶಕ ಮಾಡೋಳಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ವೇತನ ಪಾವತಿಸಲು ನಿರ್ಲಕ್ಷ್ಯ ಧೋರಣೆ ಅನುಸರಿಸಬಾರದು. ಪ್ರತಿ ತಿಂಗಳು ವೇತನ ಪಾವತಿಸಿ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಸೂಚನೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ 15ನೇ ಹಣಕಾಸು ಯೋಜನೆಯ ಕ್ರಿಯಾಯೋಜನೆ ಸಿದ್ಧಪಡಿಸುವ ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿಯಿಂದ ವಸೂಲಿ ಮಾಡುವ ತೆರಿಗೆಯಲ್ಲಿ ಶೇ 40 ರಷ್ಟನ್ನು ವೇತನ ಪಾವತಿಗೆ ಬಳಕೆ ಮಾಡಿಕೊಳ್ಳಬೇಕು. ಇನ್ನುಳಿದ ತೆರಿಗೆಯನ್ನು ಅಭಿವೃದ್ಧಿಗೆ ಬಳಕೆ ಮಾಡಬೇಕಾಗುತ್ತದೆ. ಗ್ರಾಮಗಳಲ್ಲಿ ತೆರಿಗೆ ಸಂಗ್ರಹಿಸುವ ಬಿಲ್ ಕಲೆಕ್ಟರ್ಗಳಿಗೇ ವೇತನ ನೀಡದಿರುವುದು ಸರಿಯಾದ ಕ್ರಮವಲ್ಲ ಎಂದು ಹೇಳಿದರು.</p>.<p>ಸಿಬ್ಬಂದಿ ವೇತನ ಪಾವತಿ ಆಗದಿರುವ ಕುರಿತು ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಬಿಲ್ ಕಲೆಕ್ಟರ್, ವಾಟರ್ಮ್ಯಾನ್ ಹಾಗೂ ಇತರೆ ಸಿಬ್ಬಂದಿಗೆ ಸರಿಯಾಗಿ ವೇತನ ಕೊಡಿ ಎಂದು ತಿಳಿಸಿದರು.</p>.<p>ಒಂದು ವೇಳೆ, ವೇತನ ಪಾವತಿಸುವುದಕ್ಕೆ ವಿಳಂಬನೀತಿ ಅನುಸರಿಸುವುದು ಕಂಡುಬಂದರೆ; ಇದಕ್ಕೆ ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನೇ ಹೊಣೆಗಾರ ಮಾಡಲಾಗುವುದು. 15ನೇ ಹಣಕಾಸು ಯೋಜನೆಯಡಿ ಸಿಬ್ಬಂದಿ ವೇತನ ಪಾವತಿಗೆ ಸಂಬಂಧಿಸಿ ಕ್ರಿಯಾಯೋಜನೆ ಸಿದ್ಧಪಡಿಸಿ ವರದಿ ನೀಡಬೇಕು ಎಂದರು.</p>.<p>ಸ್ವಚ್ಛಭಾರತ್ ಮಿಷನ್ ಫಲಾನುಭವಿಗಳನ್ನು ಅರ್ಹ ಫಲಾನುಭವಿಗಳನ್ನು ಕೂಡಲೇ ಆಯ್ಕೆ ಮಾಡಬೇಕು. ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ದಿನಕ್ಕೆ 55 ಲೀಟರ್ ನೀರು ಸರಬರಾಜು ಮಾಡಬೇಕಿದ್ದು, ಫಲಾನುಭವಿಗಳ ಅಗತ್ಯ ದಾಖಲಾತಿಗಳನ್ನು ಎಂಐಎಸ್ ತಂತ್ರಾಂಶದಲ್ಲಿ ನಮೂದಿಸಬೇಕು. ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಯೋಜನಾ ನಿರ್ದೇಶಕ ಮಾಡೋಳಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>