<p>ರಾಯಚೂರು: ಜನತಾ ನ್ಯಾಯಾಲಯ, ಕಾನೂನು ನೆರವು-ಅರಿವು ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಿ ಸ್ಥಳದಲ್ಲಿಯೇ ವ್ಯಾಜ್ಯ ಪರಿಹರಿಸುವ ದಿಶೆಯಲ್ಲಿ `ಕಾನೂನು ರಥ' ಹೊರಡುತ್ತಿದೆ. ಸಂಚಾರ ಸುರಕ್ಷತೆ ನಿಯಮಗಳ ಬಗ್ಗೆ ಸಾರಿಗೆ ಅಧಿಕಾರಿ ಮತ್ತು ಸಂಚಾರ ಪೊಲೀಸರು ಜಾಥಾ ಸಂದರ್ಭದಲ್ಲಿ ಜನತೆಗೆ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಆರ್.ಜೆ ಸತೀಶಸಿಂಗ್ ಹೇಳಿದರು.<br /> <br /> ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಎಲ್ಲ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಜನತಾ ನ್ಯಾಯಾಲಯ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಿ ವ್ಯಾಜ್ಯ ಪರಿಹರಿಸುವ ದಿಶೆಯಲ್ಲಿ ಹಮ್ಮಿಕೊಂಡ `ಕಾನೂನು ರಥಕ್ಕೆ' ಹಸಿರು ನಿಶಾನೆ ತೋರಿ ಮಾತನಾಡಿದರು.<br /> <br /> ನ್ಯಾಯಾಧೀಶರು, ವಕೀಲರು ಈ ಕಾನೂನು ರಥದ ಸಂಚಾರಿ ನ್ಯಾಯಾಲಯದಲ್ಲಿ ಇರುತ್ತಾರೆ. ವ್ಯಾಜ್ಯ ಪರಿಹರಿಸಲಾಗುತ್ತದೆ. ಕಕ್ಷಿದಾರರು ಈ ಸೇವೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಮಹಮ್ಮದ್ ಮುಜಾಹಿದುಲ್ಲಾ, ನ್ಯಾಯಾಧೀಶರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಜನತಾ ನ್ಯಾಯಾಲಯ, ಕಾನೂನು ನೆರವು-ಅರಿವು ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಿ ಸ್ಥಳದಲ್ಲಿಯೇ ವ್ಯಾಜ್ಯ ಪರಿಹರಿಸುವ ದಿಶೆಯಲ್ಲಿ `ಕಾನೂನು ರಥ' ಹೊರಡುತ್ತಿದೆ. ಸಂಚಾರ ಸುರಕ್ಷತೆ ನಿಯಮಗಳ ಬಗ್ಗೆ ಸಾರಿಗೆ ಅಧಿಕಾರಿ ಮತ್ತು ಸಂಚಾರ ಪೊಲೀಸರು ಜಾಥಾ ಸಂದರ್ಭದಲ್ಲಿ ಜನತೆಗೆ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಆರ್.ಜೆ ಸತೀಶಸಿಂಗ್ ಹೇಳಿದರು.<br /> <br /> ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಎಲ್ಲ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಜನತಾ ನ್ಯಾಯಾಲಯ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಿ ವ್ಯಾಜ್ಯ ಪರಿಹರಿಸುವ ದಿಶೆಯಲ್ಲಿ ಹಮ್ಮಿಕೊಂಡ `ಕಾನೂನು ರಥಕ್ಕೆ' ಹಸಿರು ನಿಶಾನೆ ತೋರಿ ಮಾತನಾಡಿದರು.<br /> <br /> ನ್ಯಾಯಾಧೀಶರು, ವಕೀಲರು ಈ ಕಾನೂನು ರಥದ ಸಂಚಾರಿ ನ್ಯಾಯಾಲಯದಲ್ಲಿ ಇರುತ್ತಾರೆ. ವ್ಯಾಜ್ಯ ಪರಿಹರಿಸಲಾಗುತ್ತದೆ. ಕಕ್ಷಿದಾರರು ಈ ಸೇವೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಮಹಮ್ಮದ್ ಮುಜಾಹಿದುಲ್ಲಾ, ನ್ಯಾಯಾಧೀಶರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>