<p><strong style="font-size: 26px;">ರಾಯಚೂರು:</strong><span style="font-size: 26px;"> ತುಂಗಭದ್ರಾ ಎಡದಂಡೆ ಕಾಲುವೆ ಆಧುನೀಕರಣ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡ ಹಾಗೂ ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ಹಠಾತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.</span><br /> <br /> ತಾಲ್ಲೂಕಿನ ರಾಂಪುರ ಗ್ರಾಮದ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆ ಆಧುನೀಕರಣ ಕಾಮಗಾರಿ ಆರಂಭಗೊಂಡಿದ್ದು, ರೈತ ಸಂಘಟನೆ ಮುಖಂಡರು ಕಾಮಗಾರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಭೇಟಿ ನೀಡಿ ಪರಿಶೀಲಿಸಿದರು.<br /> <br /> ಸ್ಥಳದಲ್ಲಿಯೇ ಜಲಸಂಪನ್ಮೂಲ ಖಾತೆ ಸಚಿವರೊಂದಿಗೆ ಮಾತನಾಡಿ ಸಮರ್ಪಕ ರೀತಿ ಕಾಮಗಾರಿ ನಡೆಯದಿರುವ ಬಗ್ಗೆ ಹೇಳಿದರು.<br /> ಅಸಮರ್ಪಕ ಕಾಮಗಾರಿ: ತುಂಗಭದ್ರಾ ಎಡದಂಡೆ ಕಾಲುವೆ ಸುಮಾರು 6 ಲಕ್ಷ ಹೆಕ್ಟೇರ್ ಜಮೀನಿಗೆ ನೀರು ಉಣಿಸುವ ಕಾಲುವೆ. ಈ ಭಾಗದ ರೈತರ ಜೀವಾಳವೇ ಆಗಿದೆ. ಈ ಕಾಲುವೆ ಆಧುನೀಕರಣಕ್ಕೆ 420 ಕೋಟಿ ಮಂಜೂರು ಮಾಡಿದ್ದು ಕಾಮಗಾರಿ ನಡೆದಿದೆ. ಆದರೆ, ಇಲ್ಲಿ ನಡೆದಿರುವ ಕಾಮಗಾರಿ ಅಸಮರ್ಪಕವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಕಾಲುವೆ ಆಧುನೀಕರಣ ಕಾಮಗಾರಿ ಪದೇ ಪದೇ ಮಾಡುವಂಥದ್ದಲ್ಲ. ಕಾಮಗಾರಿ ನಡೆಯುವ ಸ್ಥಳದಲ್ಲಿ ಎಂಜಿನಿಯರ್ಗಳು ಕಡ್ಡಾಯವಾಗಿ ಇರಬೇಕು. ಸರ್ಕಾರದ ಅಧಿಕಾರಿಗಳು ಕಾಮಗಾರಿ ಪ್ರತಿ ಹಂತ ಗುಣಮಟ್ಟ ಪರೀಕ್ಷಿಸಬೇಕು. ಇದ್ಯಾವುದು ಆಗುತ್ತಿಲ್ಲ.<br /> <br /> ಎಂಜಿನಿಯರ್ಗಳೇ ಇಲ್ಲಿ ಕಾಣುತ್ತಿಲ್ಲ. ಕಾಂಕ್ರೀಟ್ 4 ಇಂಚು ದಪ್ಪ ಹಾಕಬೇಕು. ಮೂರುವರೆ ಇಂಚು ಹಾಕಲಾಗುತ್ತಿದೆ. ಒಣ ಮಣ್ಣು ಹಾಕಿ ಅದರ ಮೇಲೆ ಕಾಂಕ್ರೀಟ್ ಮಾಡುತ್ತಿರ್ದುವುದು ಅವೈಜ್ಞಾನಿಕ ಪದ್ಧತಿ. ಮಣ್ಣಿಗೆ ನೀರು ಹೊಯ್ಯಬೇಕು. ಅದು ಗಟ್ಟಿಯಾದ ಬಳಿಕ ಮೇಲೆ ಕಾಂಕ್ರೀಟ್ ಹಾಕಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong style="font-size: 26px;">ರಾಯಚೂರು:</strong><span style="font-size: 26px;"> ತುಂಗಭದ್ರಾ ಎಡದಂಡೆ ಕಾಲುವೆ ಆಧುನೀಕರಣ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡ ಹಾಗೂ ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ಹಠಾತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.</span><br /> <br /> ತಾಲ್ಲೂಕಿನ ರಾಂಪುರ ಗ್ರಾಮದ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆ ಆಧುನೀಕರಣ ಕಾಮಗಾರಿ ಆರಂಭಗೊಂಡಿದ್ದು, ರೈತ ಸಂಘಟನೆ ಮುಖಂಡರು ಕಾಮಗಾರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಭೇಟಿ ನೀಡಿ ಪರಿಶೀಲಿಸಿದರು.<br /> <br /> ಸ್ಥಳದಲ್ಲಿಯೇ ಜಲಸಂಪನ್ಮೂಲ ಖಾತೆ ಸಚಿವರೊಂದಿಗೆ ಮಾತನಾಡಿ ಸಮರ್ಪಕ ರೀತಿ ಕಾಮಗಾರಿ ನಡೆಯದಿರುವ ಬಗ್ಗೆ ಹೇಳಿದರು.<br /> ಅಸಮರ್ಪಕ ಕಾಮಗಾರಿ: ತುಂಗಭದ್ರಾ ಎಡದಂಡೆ ಕಾಲುವೆ ಸುಮಾರು 6 ಲಕ್ಷ ಹೆಕ್ಟೇರ್ ಜಮೀನಿಗೆ ನೀರು ಉಣಿಸುವ ಕಾಲುವೆ. ಈ ಭಾಗದ ರೈತರ ಜೀವಾಳವೇ ಆಗಿದೆ. ಈ ಕಾಲುವೆ ಆಧುನೀಕರಣಕ್ಕೆ 420 ಕೋಟಿ ಮಂಜೂರು ಮಾಡಿದ್ದು ಕಾಮಗಾರಿ ನಡೆದಿದೆ. ಆದರೆ, ಇಲ್ಲಿ ನಡೆದಿರುವ ಕಾಮಗಾರಿ ಅಸಮರ್ಪಕವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಕಾಲುವೆ ಆಧುನೀಕರಣ ಕಾಮಗಾರಿ ಪದೇ ಪದೇ ಮಾಡುವಂಥದ್ದಲ್ಲ. ಕಾಮಗಾರಿ ನಡೆಯುವ ಸ್ಥಳದಲ್ಲಿ ಎಂಜಿನಿಯರ್ಗಳು ಕಡ್ಡಾಯವಾಗಿ ಇರಬೇಕು. ಸರ್ಕಾರದ ಅಧಿಕಾರಿಗಳು ಕಾಮಗಾರಿ ಪ್ರತಿ ಹಂತ ಗುಣಮಟ್ಟ ಪರೀಕ್ಷಿಸಬೇಕು. ಇದ್ಯಾವುದು ಆಗುತ್ತಿಲ್ಲ.<br /> <br /> ಎಂಜಿನಿಯರ್ಗಳೇ ಇಲ್ಲಿ ಕಾಣುತ್ತಿಲ್ಲ. ಕಾಂಕ್ರೀಟ್ 4 ಇಂಚು ದಪ್ಪ ಹಾಕಬೇಕು. ಮೂರುವರೆ ಇಂಚು ಹಾಕಲಾಗುತ್ತಿದೆ. ಒಣ ಮಣ್ಣು ಹಾಕಿ ಅದರ ಮೇಲೆ ಕಾಂಕ್ರೀಟ್ ಮಾಡುತ್ತಿರ್ದುವುದು ಅವೈಜ್ಞಾನಿಕ ಪದ್ಧತಿ. ಮಣ್ಣಿಗೆ ನೀರು ಹೊಯ್ಯಬೇಕು. ಅದು ಗಟ್ಟಿಯಾದ ಬಳಿಕ ಮೇಲೆ ಕಾಂಕ್ರೀಟ್ ಹಾಕಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>