<p><strong>ರಾಯಚೂರು:</strong> ಚಾಲುಕ್ಯ ಕರಿಯರ್ ಆಕಾಡೆಮಿಯವತಿಯಿಂದ ಕರ್ನಾಟಕ ಆಡಳಿತ ಸೇವೆ(ಕೆಎಎಸ್) ಪೂರ್ವಬಾವಿ ಪರೀಕ್ಷೆಯ ಸಿದ್ಧತೆ ಹಿನ್ನೆಲೆಯಲ್ಲಿ ನವೆಂಬರ್ 18ರಿಂದ ಎರಡು ತಿಂಗಳು ಉಚಿತ ತರಬೇತಿ ನೀಡಲಾಗುವುದು ಎಂದು ಚಾಲುಕ್ಯ ಆಕಾಡೆಮಿಯ ನಿರ್ದೇಶಕ ಸಂಗಮೇಶ ಮಂಗಾನವರ ಹೇಳಿದರು.<br /> <br /> ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಏಳು ವರ್ಷದಿಂದಲೂ ನಗರದಲ್ಲಿ ಉಚಿತ ತರಬೇತಿಯನ್ನು ಆಕಾಡೆಮಿಯಿಂದ ನೀಡಲಾಗಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೂ ಉಚಿತ ತರಬೇತಿ ನೀಡಲು ಮುಂದಾಗಿದೆ ಎಂದು ತಿಳಿಸಿದರು.<br /> <br /> ಚಾಲುಕ್ಯ ಆಕಾಡೆಮಿಯಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ಪಡೆದುಕೊಳ್ಳುವ ನಿಟ್ಟಿನಲ್ಲಿ ಅನುಕೂಲ ಮಾಡಿಕೊಟ್ಟಿದೆ. ಈ ಪ್ರದೇಶದ ವಿದ್ಯಾರ್ಥಿಗಳು ಬೇರೆ ಕಡೆಗೆ ಹೋಗಿ ತರಬೇತಿ ಪಡೆಯಲು ಸುಮಾರು 20ರಿಂದ 30 ಸಾವಿರ ರೂಪಾಯಿಗಳವರೆಗೆ ಹಣ ವೆಚ್ಚವಾಗುತ್ತದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಇಷ್ಟೊಂದು ಹಣ ಭರಿಸಲು ಸಾಧ್ಯ ಆಗುವುದಿಲ್ಲ ಎಂದು ಹೇಳಿದರು.<br /> <br /> ಹಣ ವೆಚ್ಚದ ಮಾಡಲು ಆಗದೇ ಬಡ ವಿದ್ಯಾರ್ಥಿಗಳು ಅವಕಾಶಗಳಿಂದ ವಂಚಿತರಾಗಬಾರದು ಎಂಬ ಉದ್ದೇಶದ ಹಿನೆಲೆಯಲ್ಲಿ ಆಕಾಡೆಮಿ ಎರಡು ತಿಂಗಳ ಉಚಿತ ತರಬೇತಿ ನೀಡಲಾಗುವುದು. ಪ್ರತಿ ದಿನ 4ರಿಂದ 5 ಗಂಟೆಗಳವರೆಗೆ ತರಬೇತಿ ನಡೆಯಲಿದೆ ಎಂದು ತಿಳಿಸಿದರು.<br /> <br /> ಪದವಿ ಉತ್ತೀರ್ಣರಾದ ಹಾಗೂ ಪದವಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ತರಬೇತಿ ಪಡೆಯಬಹುದಾಗಿದೆ. ಈ ತರಬೇತಿಗೆ ರಾಜ್ಯದ ವಿವಿಧ ಭಾಗಗಳಿಂದ ಅನುಭವಿ ಉಪನ್ಯಾಸಕರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಲಿದ್ದಾರೆ.</p>.<p>ಎರಡು ಬ್ಯಾಚ್ಗಳನ್ನು ನಡೆಸಲಾಗುತ್ತಿದ್ದು, ಒಂದು ಬ್ಯಾಚ್ನಲ್ಲಿ 400 ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಉದ್ದೇಶವನ್ನು ಹೊಂದಲಾಗಿದೆ ಎಂದು ವಿವರಿಸಿದರು. ಹೈದರಾಬಾದ್ ಕರ್ನಾಟಕ ಪ್ರದೇಶದ ಸ್ಪರ್ಧಾರ್ಥಿಗಳು ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು. ಇದೇ 18ರಂದು ತರಬೇತಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ.</p>.<p>ಜಿಲ್ಲಾಧಿಕಾರಿ ಎಂ.ವಿ ಸಾವಿತ್ರಿ ಅವರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದೆ. ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 98805-89551 ಅಥವಾ 99861-07089 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಮನವಿ ಮಾಡಿದರು. ಚಾಲುಕ್ಯ ಆಕಾಡೆಮಿಯ ಉಪನಿರ್ದೇಶಕರಾದ ಮಾಧವಿ ಎಸ್ ಮಂಗಾನವರ,ಸಂಪನ್ಮೂಲ ವ್ಯಕ್ತಿ ಪಾರ್ಶ್ವನಾಥ ಪಾಲಬಾವಿ. ಉಪನ್ಯಾಸಕ ವಿರುಪನಗೌಡ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಚಾಲುಕ್ಯ ಕರಿಯರ್ ಆಕಾಡೆಮಿಯವತಿಯಿಂದ ಕರ್ನಾಟಕ ಆಡಳಿತ ಸೇವೆ(ಕೆಎಎಸ್) ಪೂರ್ವಬಾವಿ ಪರೀಕ್ಷೆಯ ಸಿದ್ಧತೆ ಹಿನ್ನೆಲೆಯಲ್ಲಿ ನವೆಂಬರ್ 18ರಿಂದ ಎರಡು ತಿಂಗಳು ಉಚಿತ ತರಬೇತಿ ನೀಡಲಾಗುವುದು ಎಂದು ಚಾಲುಕ್ಯ ಆಕಾಡೆಮಿಯ ನಿರ್ದೇಶಕ ಸಂಗಮೇಶ ಮಂಗಾನವರ ಹೇಳಿದರು.<br /> <br /> ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಏಳು ವರ್ಷದಿಂದಲೂ ನಗರದಲ್ಲಿ ಉಚಿತ ತರಬೇತಿಯನ್ನು ಆಕಾಡೆಮಿಯಿಂದ ನೀಡಲಾಗಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೂ ಉಚಿತ ತರಬೇತಿ ನೀಡಲು ಮುಂದಾಗಿದೆ ಎಂದು ತಿಳಿಸಿದರು.<br /> <br /> ಚಾಲುಕ್ಯ ಆಕಾಡೆಮಿಯಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ಪಡೆದುಕೊಳ್ಳುವ ನಿಟ್ಟಿನಲ್ಲಿ ಅನುಕೂಲ ಮಾಡಿಕೊಟ್ಟಿದೆ. ಈ ಪ್ರದೇಶದ ವಿದ್ಯಾರ್ಥಿಗಳು ಬೇರೆ ಕಡೆಗೆ ಹೋಗಿ ತರಬೇತಿ ಪಡೆಯಲು ಸುಮಾರು 20ರಿಂದ 30 ಸಾವಿರ ರೂಪಾಯಿಗಳವರೆಗೆ ಹಣ ವೆಚ್ಚವಾಗುತ್ತದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಇಷ್ಟೊಂದು ಹಣ ಭರಿಸಲು ಸಾಧ್ಯ ಆಗುವುದಿಲ್ಲ ಎಂದು ಹೇಳಿದರು.<br /> <br /> ಹಣ ವೆಚ್ಚದ ಮಾಡಲು ಆಗದೇ ಬಡ ವಿದ್ಯಾರ್ಥಿಗಳು ಅವಕಾಶಗಳಿಂದ ವಂಚಿತರಾಗಬಾರದು ಎಂಬ ಉದ್ದೇಶದ ಹಿನೆಲೆಯಲ್ಲಿ ಆಕಾಡೆಮಿ ಎರಡು ತಿಂಗಳ ಉಚಿತ ತರಬೇತಿ ನೀಡಲಾಗುವುದು. ಪ್ರತಿ ದಿನ 4ರಿಂದ 5 ಗಂಟೆಗಳವರೆಗೆ ತರಬೇತಿ ನಡೆಯಲಿದೆ ಎಂದು ತಿಳಿಸಿದರು.<br /> <br /> ಪದವಿ ಉತ್ತೀರ್ಣರಾದ ಹಾಗೂ ಪದವಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ತರಬೇತಿ ಪಡೆಯಬಹುದಾಗಿದೆ. ಈ ತರಬೇತಿಗೆ ರಾಜ್ಯದ ವಿವಿಧ ಭಾಗಗಳಿಂದ ಅನುಭವಿ ಉಪನ್ಯಾಸಕರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಲಿದ್ದಾರೆ.</p>.<p>ಎರಡು ಬ್ಯಾಚ್ಗಳನ್ನು ನಡೆಸಲಾಗುತ್ತಿದ್ದು, ಒಂದು ಬ್ಯಾಚ್ನಲ್ಲಿ 400 ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಉದ್ದೇಶವನ್ನು ಹೊಂದಲಾಗಿದೆ ಎಂದು ವಿವರಿಸಿದರು. ಹೈದರಾಬಾದ್ ಕರ್ನಾಟಕ ಪ್ರದೇಶದ ಸ್ಪರ್ಧಾರ್ಥಿಗಳು ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು. ಇದೇ 18ರಂದು ತರಬೇತಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ.</p>.<p>ಜಿಲ್ಲಾಧಿಕಾರಿ ಎಂ.ವಿ ಸಾವಿತ್ರಿ ಅವರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದೆ. ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 98805-89551 ಅಥವಾ 99861-07089 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಮನವಿ ಮಾಡಿದರು. ಚಾಲುಕ್ಯ ಆಕಾಡೆಮಿಯ ಉಪನಿರ್ದೇಶಕರಾದ ಮಾಧವಿ ಎಸ್ ಮಂಗಾನವರ,ಸಂಪನ್ಮೂಲ ವ್ಯಕ್ತಿ ಪಾರ್ಶ್ವನಾಥ ಪಾಲಬಾವಿ. ಉಪನ್ಯಾಸಕ ವಿರುಪನಗೌಡ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>