<p>ಗಂಗಾವತಿ: ನಗರಸಭೆಯ ವ್ಯಾಪ್ತಿಯ 16ನೇ ವಾರ್ಡ್ ದೊಡ್ಡಿ ಲೇಔಟ್ನ ಮುಖ್ಯರಸ್ತೆಗೆ ಕಾಂಕ್ರಿಟ್ ಹಾಕಬೇಕು ಮತ್ತು ವಾರ್ಡ್ 20ರಲ್ಲಿನ ರಸ್ತೆಯನ್ನು ವಿಸ್ತರಣೆ ಮಾಡಬೇಕೆಂದು ಒತ್ತಾಯಿಸಿ ವಾರ್ಡಿನ ನಿವಾಸಿಗಳು ನಗರಸಭೆಗೆ ಬುಧವಾರ ಮುತ್ತಿಗೆ ಹಾಕಿದರು.<br /> <br /> ಬಿಜೆಪಿ ರೈತ ಮೋರ್ಚಾದ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ. ಖಾದರಸಾಬ ನೇತೃತ್ವದಲ್ಲಿ ಸೀತಾ ಆಂಜನೇಯ ದೇವಸ್ಥಾನದಿಂದ ಮೆರವಣಿಗೆ ಹೊರಟ ವಾರ್ಡಿನ ನಿವಾಸಿಗಳು ನಗರಸಭೆಗೆ ಆಗಮಿಸಿ ಮುತ್ತಿಗೆ ಹಾಕಿದರು.<br /> <br /> “ಹಲವು ಬಾರಿ ಸಮಸ್ಯೆಗಳ ತೀವ್ರತೆ ಬಗ್ಗೆ ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಆದರೆ ಪೌರಾಯುಕ್ತರುಗಳ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕ ಸಮಸ್ಯೆ ಇತ್ಯರ್ಥವಾಗುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದರು.<br /> <br /> ಈ ಬಗ್ಗೆ ಪ್ರಾದೇಶಿಕ ಆಯುಕ್ತರ ಗಮನ ಸೆಳೆಯಲಾಗಿತ್ತು. ತಕ್ಷಣ ಕ್ರಮ ಕೈಗೊಳ್ಳುವಂತೆ ಪೌರಾಯುಕ್ತರಿಗೆ ಪ್ರಾದೇಶಿಕ ಆಯುಕ್ತರು ಸೂಚಿಸಿದ್ದರು. ನಿಗದಿತ ಅವಧಿಯೊಳಗೆ ಸೂಕ್ತ ದಾಖಲಾತಿಗಳನ್ನು ಆಯುಕ್ತರಿಗೆ ಸಲ್ಲಿಸಲು ಪೌರಾಯುಕ್ತರು ವಿಫಲರಾಗಿದ್ದಾರೆ ಎಂದು ದೂರಿದರು.<br /> <br /> ಕೂಡಲೇ ಸಂಬಂಧಿಪಟ್ಟ ಅಧಿಕಾರಿಗಳು ಸಮಸ್ಯೆಗೆ ಆದ್ಯತೆ ನೀಡದಿದ್ದಲ್ಲಿ, ಸಾರ್ವಜನಿಕರ ಸಹಭಾಗಿತ್ವದಲ್ಲಿ ರೈತ ಸಂಘಟನೆಯು ಹಂತಹಂತವಾಗಿ ಉಗ್ರ ಹೋರಾಟ ಮಾಡುತ್ತದೆ ಎಂದು ಎಚ್ಚರಿಸುವ ಪತ್ರವನ್ನು ಪೌರಾಯುಕ್ತ ಬಿ.ಡಿ. ಬಸವರಾಜಪ್ಪ ಅವರಿಗೆ ಸಲ್ಲಿಸಲಾಯಿತು.<br /> <br /> ದೊಡ್ಡಿ ಲೇಔಟ್ ನಿವಾಸಿಗಳಾದ ಹುಸೇನಸಾಬ, ದುರುಗಪ್ಪ, ಮನಿಯಾರ ನಬೀಸಾಬ, ವಿ. ಶಾಬುದ್ದೀನ್, ಎಂ. ಮಹೆಬೂಬ ಇತರರು ನೇತೃತ್ವ ವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗಾವತಿ: ನಗರಸಭೆಯ ವ್ಯಾಪ್ತಿಯ 16ನೇ ವಾರ್ಡ್ ದೊಡ್ಡಿ ಲೇಔಟ್ನ ಮುಖ್ಯರಸ್ತೆಗೆ ಕಾಂಕ್ರಿಟ್ ಹಾಕಬೇಕು ಮತ್ತು ವಾರ್ಡ್ 20ರಲ್ಲಿನ ರಸ್ತೆಯನ್ನು ವಿಸ್ತರಣೆ ಮಾಡಬೇಕೆಂದು ಒತ್ತಾಯಿಸಿ ವಾರ್ಡಿನ ನಿವಾಸಿಗಳು ನಗರಸಭೆಗೆ ಬುಧವಾರ ಮುತ್ತಿಗೆ ಹಾಕಿದರು.<br /> <br /> ಬಿಜೆಪಿ ರೈತ ಮೋರ್ಚಾದ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ. ಖಾದರಸಾಬ ನೇತೃತ್ವದಲ್ಲಿ ಸೀತಾ ಆಂಜನೇಯ ದೇವಸ್ಥಾನದಿಂದ ಮೆರವಣಿಗೆ ಹೊರಟ ವಾರ್ಡಿನ ನಿವಾಸಿಗಳು ನಗರಸಭೆಗೆ ಆಗಮಿಸಿ ಮುತ್ತಿಗೆ ಹಾಕಿದರು.<br /> <br /> “ಹಲವು ಬಾರಿ ಸಮಸ್ಯೆಗಳ ತೀವ್ರತೆ ಬಗ್ಗೆ ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಆದರೆ ಪೌರಾಯುಕ್ತರುಗಳ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕ ಸಮಸ್ಯೆ ಇತ್ಯರ್ಥವಾಗುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದರು.<br /> <br /> ಈ ಬಗ್ಗೆ ಪ್ರಾದೇಶಿಕ ಆಯುಕ್ತರ ಗಮನ ಸೆಳೆಯಲಾಗಿತ್ತು. ತಕ್ಷಣ ಕ್ರಮ ಕೈಗೊಳ್ಳುವಂತೆ ಪೌರಾಯುಕ್ತರಿಗೆ ಪ್ರಾದೇಶಿಕ ಆಯುಕ್ತರು ಸೂಚಿಸಿದ್ದರು. ನಿಗದಿತ ಅವಧಿಯೊಳಗೆ ಸೂಕ್ತ ದಾಖಲಾತಿಗಳನ್ನು ಆಯುಕ್ತರಿಗೆ ಸಲ್ಲಿಸಲು ಪೌರಾಯುಕ್ತರು ವಿಫಲರಾಗಿದ್ದಾರೆ ಎಂದು ದೂರಿದರು.<br /> <br /> ಕೂಡಲೇ ಸಂಬಂಧಿಪಟ್ಟ ಅಧಿಕಾರಿಗಳು ಸಮಸ್ಯೆಗೆ ಆದ್ಯತೆ ನೀಡದಿದ್ದಲ್ಲಿ, ಸಾರ್ವಜನಿಕರ ಸಹಭಾಗಿತ್ವದಲ್ಲಿ ರೈತ ಸಂಘಟನೆಯು ಹಂತಹಂತವಾಗಿ ಉಗ್ರ ಹೋರಾಟ ಮಾಡುತ್ತದೆ ಎಂದು ಎಚ್ಚರಿಸುವ ಪತ್ರವನ್ನು ಪೌರಾಯುಕ್ತ ಬಿ.ಡಿ. ಬಸವರಾಜಪ್ಪ ಅವರಿಗೆ ಸಲ್ಲಿಸಲಾಯಿತು.<br /> <br /> ದೊಡ್ಡಿ ಲೇಔಟ್ ನಿವಾಸಿಗಳಾದ ಹುಸೇನಸಾಬ, ದುರುಗಪ್ಪ, ಮನಿಯಾರ ನಬೀಸಾಬ, ವಿ. ಶಾಬುದ್ದೀನ್, ಎಂ. ಮಹೆಬೂಬ ಇತರರು ನೇತೃತ್ವ ವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>