<p>ಕವಿತಾಳ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೈತರಿಗೆ ಗುರುವಾರ ರಸ ಗೊಬ್ಬರ ವಿತರಿಸಲಾಯಿತು.<br /> <br /> ರಸ ಗೊಬ್ಬರ ಕೊರತೆಯಿಂದ ಕಂಗೆಟ್ಟ ರೈತರು, ಗೊಬ್ಬರ ವಿತರಣೆ ಮಾಹಿತಿ ತಿಳಿಯುತ್ತಲೇ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಕೆಲ ಕಾಲ ನೂಕುನುಗ್ಗಲು ಉಂಟಾಯಿತು.<br /> <br /> ಪೊಲೀಸ್ ಬಂದೋಬಸ್ತ್ನಲ್ಲಿ ಗೊಬ್ಬರ ವಿತರಣೆ ನಡೆಯಿತು. ಕವಿತಾಳ ಸೇರಿದಂತೆ ಹಣಗಿ, ಹುಸೇನಪುರ, ಸೈದಾಪುರ ಮತ್ತು ಕ್ಯಾಂಪ್ಗಳು ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವ್ಯಾಪ್ತಿಗೊಳಪಟ್ಟಿದ್ದು, ರೈತರ ಬೇಡಿಕೆಯಷ್ಟು ಗೊಬ್ಬರ ಲಭ್ಯವಾಗುತ್ತಿಲ್ಲ. <br /> <br /> 20 ಕ್ವಿಂಟಲ್ ಯೂರಿಯಾ, 25 ಕ್ವಿಂಟಲ್ ಡಿಎಪಿ ಮತ್ತು 10 ಕ್ವಿಂಟಲ್ 20-20 ಸರಬರಾಜಾಗಿದ್ದು, ಇನ್ನೂ 100 ಕ್ವಿಂಟಲ್ ಯೂರಿಯಾ, 50 ಕ್ವಿಂಟಲ್ ಡಿಎಪಿ ಮತ್ತು 20-20 ರಸ ಗೊಬ್ಬರ ಬೇಡಿಕೆ ಇದೆ. ಸಂಘದ ಅಧ್ಯಕ್ಷ ವೀರಾರಡ್ಡೆಪ್ಪ ಭಾವಿಕಟ್ಟಿ ತಿಳಿಸಿದ್ದಾರೆ.<br /> <br /> ವಿವಿಧ ಬೆಳೆಗಳು ಬೆಳವಣಿಗೆ ಹಂತದಲ್ಲಿದ್ದು, ಈ ಸಮಯಕ್ಕೆ ರಸ ಗೊಬ್ಬರ ಅಗತ್ಯವಿದೆ ಎಂದು ರೈತರು ಹೇಳುತ್ತಾರೆ. ಆದರೆ, ಗೊಬ್ಬರದ ಕೊರತೆಯಿಲ್ಲ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಹೇಳುತ್ತಿರುವಾಗಲೇ ಸಬ್ಸಿಡಿ ದರದಲ್ಲಿ ಗೊಬ್ಬರ ಪಡೆಯಲು ಹರಸಾಹಸ ಪಡುವಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕವಿತಾಳ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೈತರಿಗೆ ಗುರುವಾರ ರಸ ಗೊಬ್ಬರ ವಿತರಿಸಲಾಯಿತು.<br /> <br /> ರಸ ಗೊಬ್ಬರ ಕೊರತೆಯಿಂದ ಕಂಗೆಟ್ಟ ರೈತರು, ಗೊಬ್ಬರ ವಿತರಣೆ ಮಾಹಿತಿ ತಿಳಿಯುತ್ತಲೇ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಕೆಲ ಕಾಲ ನೂಕುನುಗ್ಗಲು ಉಂಟಾಯಿತು.<br /> <br /> ಪೊಲೀಸ್ ಬಂದೋಬಸ್ತ್ನಲ್ಲಿ ಗೊಬ್ಬರ ವಿತರಣೆ ನಡೆಯಿತು. ಕವಿತಾಳ ಸೇರಿದಂತೆ ಹಣಗಿ, ಹುಸೇನಪುರ, ಸೈದಾಪುರ ಮತ್ತು ಕ್ಯಾಂಪ್ಗಳು ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವ್ಯಾಪ್ತಿಗೊಳಪಟ್ಟಿದ್ದು, ರೈತರ ಬೇಡಿಕೆಯಷ್ಟು ಗೊಬ್ಬರ ಲಭ್ಯವಾಗುತ್ತಿಲ್ಲ. <br /> <br /> 20 ಕ್ವಿಂಟಲ್ ಯೂರಿಯಾ, 25 ಕ್ವಿಂಟಲ್ ಡಿಎಪಿ ಮತ್ತು 10 ಕ್ವಿಂಟಲ್ 20-20 ಸರಬರಾಜಾಗಿದ್ದು, ಇನ್ನೂ 100 ಕ್ವಿಂಟಲ್ ಯೂರಿಯಾ, 50 ಕ್ವಿಂಟಲ್ ಡಿಎಪಿ ಮತ್ತು 20-20 ರಸ ಗೊಬ್ಬರ ಬೇಡಿಕೆ ಇದೆ. ಸಂಘದ ಅಧ್ಯಕ್ಷ ವೀರಾರಡ್ಡೆಪ್ಪ ಭಾವಿಕಟ್ಟಿ ತಿಳಿಸಿದ್ದಾರೆ.<br /> <br /> ವಿವಿಧ ಬೆಳೆಗಳು ಬೆಳವಣಿಗೆ ಹಂತದಲ್ಲಿದ್ದು, ಈ ಸಮಯಕ್ಕೆ ರಸ ಗೊಬ್ಬರ ಅಗತ್ಯವಿದೆ ಎಂದು ರೈತರು ಹೇಳುತ್ತಾರೆ. ಆದರೆ, ಗೊಬ್ಬರದ ಕೊರತೆಯಿಲ್ಲ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಹೇಳುತ್ತಿರುವಾಗಲೇ ಸಬ್ಸಿಡಿ ದರದಲ್ಲಿ ಗೊಬ್ಬರ ಪಡೆಯಲು ಹರಸಾಹಸ ಪಡುವಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>