<p><strong>ರಾಯಚೂರು: </strong>ನಗರದ ಸೆಂಟ್ಮೇರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ನಡೆಯುತ್ತಿರುವ ಡೊನೇಶನ್ ಹಾವಳಿ ತಡೆಗಟ್ಟಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಡಾ.ಬಿ.ಆರ್ ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಎದುರು ಧರಣಿ ನಡೆಸಿದರು.<br /> <br /> ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶ ಸಂದರ್ಭದಲ್ಲಿ ಡೊನೇಶನ್ ಹಾವಳಿಯಿಂದ ಕಾನೂನುಗಳನ್ನು ಉಲ್ಲಂಘನೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.<br /> ಸೆಂಟ್ಮೇರಿ ಶಾಲೆಯಲ್ಲಿ ಶ್ರೀಮಂತ ಹಾಗೂ ಅಧಿಕಾರಿಗಳ ಮಕ್ಕಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುತ್ತಿದೆ. <br /> <br /> ಬಡತನ ರೇಖೆಗಿಂತ ಕೆಳಗಿರುವ ಬಡ ಕುಟುಂಬದ ಮಕ್ಕಳಿಗೆ ಈ ಶಾಲೆಯಲ್ಲಿ ಪ್ರವೇಶವನ್ನು ನಿರಾಕರಿಸಲಾಗುತ್ತಿದೆ. ಈ ಬಗ್ಗೆ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂದು ಆಪಾದಿಸಿದರು.<br /> <br /> ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ ಡೊನೇಶನ್ ಹಾವಳಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು, ಡೋನೆಶನ್ ಪಡೆಯುತ್ತಿರುವ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.<br /> ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೇ ಇದ್ದರೆ ಮುಂದಿನ ದಿನಗಳಲ್ಲಿ ಹಲವು ಸಂಘಟನೆಗಳೊಂದಿಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಯುವಕ ಸಂಘದ ಅಧ್ಯಕ್ಷ ಆರ್.ಅಶೋಕ ಕುಮಾರ ಅವರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದ್ದಾರೆ.<br /> <br /> ರಾಮಣ್ಣ, ಹುಸೇನ್ಬಾಷಾ, ಸೂಗಪ್ಪ, ವಿರೇಶ, ಗೋಪಾಲ,ಚಂದ್ರು, ನಟರಾಜ, ಇಸ್ಮಾಯಿಲ್, ಚಿಂತಾಲ ಮಣಿ, ಸತ್ಯನಾರಾಯಣ, ನಾಗೇಶ, ಆಜಾಮ್,ಮನು, ಶಿವಶಂಕರ, ವೀರೇಶ, ಅನಿಲ್,ಅಕ್ಬರ್ ಅಲಿ, ರಹೀಮ್, ಖಾಜಾ, ಹರ್ಷಾ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ನಗರದ ಸೆಂಟ್ಮೇರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ನಡೆಯುತ್ತಿರುವ ಡೊನೇಶನ್ ಹಾವಳಿ ತಡೆಗಟ್ಟಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಡಾ.ಬಿ.ಆರ್ ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಎದುರು ಧರಣಿ ನಡೆಸಿದರು.<br /> <br /> ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶ ಸಂದರ್ಭದಲ್ಲಿ ಡೊನೇಶನ್ ಹಾವಳಿಯಿಂದ ಕಾನೂನುಗಳನ್ನು ಉಲ್ಲಂಘನೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.<br /> ಸೆಂಟ್ಮೇರಿ ಶಾಲೆಯಲ್ಲಿ ಶ್ರೀಮಂತ ಹಾಗೂ ಅಧಿಕಾರಿಗಳ ಮಕ್ಕಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುತ್ತಿದೆ. <br /> <br /> ಬಡತನ ರೇಖೆಗಿಂತ ಕೆಳಗಿರುವ ಬಡ ಕುಟುಂಬದ ಮಕ್ಕಳಿಗೆ ಈ ಶಾಲೆಯಲ್ಲಿ ಪ್ರವೇಶವನ್ನು ನಿರಾಕರಿಸಲಾಗುತ್ತಿದೆ. ಈ ಬಗ್ಗೆ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂದು ಆಪಾದಿಸಿದರು.<br /> <br /> ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ ಡೊನೇಶನ್ ಹಾವಳಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು, ಡೋನೆಶನ್ ಪಡೆಯುತ್ತಿರುವ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.<br /> ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೇ ಇದ್ದರೆ ಮುಂದಿನ ದಿನಗಳಲ್ಲಿ ಹಲವು ಸಂಘಟನೆಗಳೊಂದಿಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಯುವಕ ಸಂಘದ ಅಧ್ಯಕ್ಷ ಆರ್.ಅಶೋಕ ಕುಮಾರ ಅವರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದ್ದಾರೆ.<br /> <br /> ರಾಮಣ್ಣ, ಹುಸೇನ್ಬಾಷಾ, ಸೂಗಪ್ಪ, ವಿರೇಶ, ಗೋಪಾಲ,ಚಂದ್ರು, ನಟರಾಜ, ಇಸ್ಮಾಯಿಲ್, ಚಿಂತಾಲ ಮಣಿ, ಸತ್ಯನಾರಾಯಣ, ನಾಗೇಶ, ಆಜಾಮ್,ಮನು, ಶಿವಶಂಕರ, ವೀರೇಶ, ಅನಿಲ್,ಅಕ್ಬರ್ ಅಲಿ, ರಹೀಮ್, ಖಾಜಾ, ಹರ್ಷಾ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>