ರಾಯಚೂರು: .ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ತೊಂಡಿಹಾಳ ಗ್ರಾಮದ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ದೇವದಾಸಿ ಅನಿಷ್ಟ ಪದ್ಧತಿ ಹೋಗಲಾಡಿಸಲು ಜನಜಾಗೃತಿ ಕಾರ್ಯಕ್ರಮ ನಡೆಯಿತು
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಮತ್ತು ದೇವದಾಸಿ ಪುನರ್ವಸತಿ ಯೋಜನೆ ಜಿಲ್ಲಾ ಘಟಕದವತಿಯಿಂದ ಆಯೋಜಿಸಲಾಗಿತ್ತು
.
ಬೀದಿ ನಾಟಕ, ಕರ ಪತ್ರ ವಿತರಣೆ, ಧ್ವನಿವರ್ಧಕ ಮೂಲಕ 1982 ದೇವದಾಸಿ ಸಮರ್ಪಣಾ ನಿಷೇಧ ಕಾಯ್ದೆ ಹಾಗೂ ತಿದ್ದುಪಡಿ ಕಾಯ್ದೆ 2009ರ ಪ್ರಕಾರ ಯಾವುದೇ ಹೆಣ್ಣು ಮಗುವಿಗೆ, ಮಹಿಳೆಗೆ ಮುತ್ತು ಕಟ್ಟಿ ದೇವದಾಸಿಯನ್ನಾಗಿ ಮಾಡುವುದು ಜಾಮೀನು ರಹಿತ ಅಪರಾಧ. ಪ್ರೋತ್ಸಾಹಿಸಿದವರಿಗೆ 2ರಿಂದ 5 ವರ್ಷ ಜೈಲು ಶಿಕ್ಷೆ, 2ರಿಂದ 10 ಸಾವಿರ ದಂಡ ವಿಧಿಸುವುದು ಸೇರಿದಂತೆ ಹಲವು ಸಂಗತಿಗಳ ಬಗ್ಗೆ ಮಾಹಿತಿ ನೀಡಲಾಯಿತು. ಜನಜಾಗೃತಿ ರ್ಯಾಲಿಯನ್ನೂ ನಡೆಸಲಾಯಿತು ಎಂದು ದೇವದಾಸಿ ಪುನರ್ವಸತಿ ಯೋಜನೆ ಯೋಜನಾಧಿಕಾರಿ ಗೋಪಾಲ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.