ತೀನ್ ಕಂದಿಲ್ನಿಂದ ಪೂರ್ಣಿಮಾ ಚಿತ್ರಮಂದಿರದವರೆಗೆ ಶವಯಾತ್ರೆ ನಡೆಸಲಾಯಿತು. ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ಬಗ್ಗೆ ಸತ್ಯರಾಜ್ ಅವರು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಪ್ರತಿಭಟನಾಕಾರರು ಖಂಡಿಸಿದರು. ಸತ್ಯರಾಜ್ ಅವರು ಬಹಿರಂಗ ಕ್ಷಮೆ ಯಾಚಿಸುವವರೆಗೆ ರಾಜ್ಯದಲ್ಲಿ ಬಾಹುಬಲಿ–2 ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಜಿಲ್ಲಾ ಘಟಕ ಅಧ್ಯಕ್ಷ ಅಶೋಕ ಕುಮಾರ ಜೈನ್, ಗೋವಿಂದರಾಜ್, ಕೆ.ಕಿಶನರಾವ್, ಆಸೀಫ್, ಆನಂದ ಸ್ವಾಮಿ, ಶ್ರೀನಿವಾಸ, ಮಲ್ಲಿಕಾರ್ಜುನ ಇದ್ದರು.