ಪ್ರತಿಭಟನೆ: ಅಪಾರ ನಷ್ಟದಿಂದ ಆಕ್ರೋಶಗೊಂಡ ರೈತರು ಎಪಿಎಂಸಿ ಗೇಟ್ ಬಂದ್ ಮಾಡಿ ಪ್ರತಿಭಟನೆಗೆ ಮುಂದಾದರು. ರೈತ ಸಂಘಟನೆಗಳ ಮುಖಂಡರು ಸ್ಥಳಕ್ಕೆ ಧಾವಿಸಿದ್ದರಿಂದ ಪ್ರತಿಭಟನೆ ಕೆಲ ಹೊತ್ತು ಮುಂದುವರಿಯಿತು. ಆನಂತರ ಎಪಿಎಂಸಿ ಕಾರ್ಯದರ್ಶಿ ರಘುಪತಿ ಭಟ್ ಅವರು ಬಂದು ರೈತರ ಅಹವಾಲು ಆಲಿಸಿದರು. ವಿಷಯವನ್ನು ಸರ್ಕಾರದ ಗಮನಕ್ಕೆ ತರುವುದಾಗಿ ತಿಳಿಸಿದ್ದರಿಂದ ರೈತರು ಪ್ರತಿಭಟನೆ ಕೈಬಿಟ್ಟರು. ರಾಯಚೂರು ಜಿಲ್ಲೆ ಸೇರಿದಂತೆ ನೆರೆಯ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಂದ ಬಂದಿದ್ದ ರೈತರು ಈರುಳ್ಳಿಯನ್ನು ಮಾರಾಟ ಮಾಡುವುದಕ್ಕೆ ಕಾದು ಕುಳಿತಿದ್ದರು.