‘ಜೂನ್ ತಿಂಗಳಲ್ಲಿ ಉತ್ತಮ ಮಳೆಯಾಗಿದ್ದರಿಂದ ಬಿತ್ತನೆ ನಿರೀಕ್ಷೆಗೂ ಮೀರಿ ನಡೆದಿದೆ. ಆದರೆ, ಈಗ ಮಳೆ ಇಲ್ಲದೆ ಬೆಳೆಗಳು ಬಾಡಿವೆ. ರೈತರು ಕೈಯಲ್ಲಿದ್ದ ಹಣವನ್ನು ಗೊಬ್ಬರ, ಬಿತ್ತನೆ ಬೀಜಕ್ಕಾಗಿ ಸುರಿದು ಕಂಗಾಲಾಗಿದ್ದಾರೆ. ಶೇಂಗಾ, ತೊಗರಿ, ಹತ್ತಿ ಒಣಗಿವೆ. ಈ ವರ್ಷವೂ ಬರತಪ್ಪಿದ್ದಲ್ಲ ಎಂಬ ಚಿಂತೆ ಕಾಡುತ್ತಿದೆ’ ಎಂದು ರೈತ
ಹನುಮೇಶ ಹೇಳಿದರು.