ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾತೃಪೂರ್ಣ ಯೋಜನೆಗೆ ಚಾಲನೆ

ಗರ್ಭಿಣಿಯರು, ಬಾಣಂತಿಯರಿಗೆ ಮಧ್ಯಾಹ್ನ ಪೌಷ್ಟಿಕ ಆಹಾರ ವಿತರಣೆ
Last Updated 3 ಫೆಬ್ರುವರಿ 2017, 6:04 IST
ಅಕ್ಷರ ಗಾತ್ರ

ಕವಿತಾಳ: ಗರ್ಭಿಣಿ ಮತ್ತು ಬಾಣಂತಿ­ಯರಲ್ಲಿ ರಕ್ತಹೀನತೆ ಕಡಿಮೆ ಮಾಡಿ ಆರೋಗ್ಯ ಕಾಪಾಡಲು ರಾಜ್ಯ ಸರ್ಕಾರ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಆರಂಭಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾ­ಖೆಯ ಮೇಲ್ವಿಚಾರಕಿ ಲಕ್ಷ್ಮಿ ಹೇಳಿದರು.

ಪಟ್ಟಣದ ಅಂಗನವಾಡಿ ಕೇಂದ್ರ­ದಲ್ಲಿ ಬಾಣಂತಿ ಮತ್ತು ಗರ್ಭಿಣಿಯರಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ರಾಜ್ಯ ಸರ್ಕಾರದ ನೂತನ ‘ಮಾತೃಪೂರ್ಣ ಯೋಜನೆಗೆ’ ಗುರು ವಾರ ಚಾಲನೆ ನೀಡಿ ಮಾತನಾಡಿದರು.

ಬಾಣಂತಿ ಮತ್ತು ಗರ್ಭಿಣಿಯರಿಗೆ ಇದುವರೆಗೆ ಆಹಾರ ಧಾನ್ಯಗಳನ್ನು ನೀಡಲಾಗುತ್ತಿತ್ತು. ಕುಟುಂಬದ ಇತರ ಸದಸ್ಯರು ಆಹಾರಧಾನ್ಯಗಳನ್ನು ಬಳಕೆ ಮಾಡುವುದರಿಂದ ಫಲಾನುಭವಿಗಳಿಗೆ ಅಗತ್ಯ ಪೌಷ್ಟಿಕ ಆಹಾರದ ಕೊರತೆಯಾ­ಗುತ್ತಿದೆ. ಅಂಗನವಾಡಿಗಳಲ್ಲಿ ಪ್ರತಿದಿನ ಬಿಸಿಯೂಟ ನೀಡಲಾಗುತ್ತದೆ ಎಂದರು.

ಮೊಟ್ಟೆ, ಮೊಳಕೆ ಕಾಳು, ಬೇಯಿಸಿದ ತರಕಾರಿ, ಅನ್ನ, ಸಾಂಬಾರು ಮತ್ತು ಹಾಲು ನೀಡಲಾಗುತ್ತಿದ್ದು, ಊಟದ ಸಮಯಕ್ಕೆ ಕೇಂದ್ರಕ್ಕೆ ಬಂದು ಊಟ ಮಾಡಲು ಮನವಿ ಮಾಡಿದರು.

‘ಹಲವು ಅಂಗನವಾಡಿ ಕೇಂದ್ರ ಗಳಿಗೆ ಸ್ವಂತ ಕಟ್ಟಡವಿಲ್ಲ. ಇಕ್ಕಟ್ಟಾದ ಜಾಗದಲ್ಲಿ ಕೂರಿಸಲಾಗುತ್ತಿದೆ. ಮಕ್ಕ ಳನ್ನು ಸಂಬಾಳಿಸಿ ಸ್ವಚ್ಛತೆ ಕಾಪಾಡಿಕೊಳ್ಳುವಲ್ಲಿ ಹೆಣಗುತ್ತಿರುವ ಕಾರ್ಯಕರ್ತೆಯರಿಗೆ ಬಾಣಂತಿ ಮತ್ತು ಗರ್ಭಿಣಿಯರಿಗೆ ಬಿಸಿಯೂಟ ನೀಡು ವುದು ಹೊರೆಯಾಗಲಿದೆ. ಇದೊಂದು ಅರ್ಥಹೀನ ಯೋಜನೆ. ಆಹಾರ ಧಾನ್ಯಗಳನ್ನು ನೀಡುವುದು ಉತ್ತಮ’ ಎಂದು ಪಟ್ಟಣ ಪಂಚಾಯಿತಿ ಸದಸ್ಯರಾದ ಎಡಿಎಂ ಅಕ್ಬರ್‌, ಮೌನೇಶ ನಾಯಕ ಮತ್ತು ಮುಖಂಡರಾದ ಶಶಿಧರ ಭಾವಿಕಟ್ಟಿ ಮತ್ತು ವಿರೂಪಾಕ್ಷಿ ಹಡಪದ ಆಗ್ರಹಿಸಿದರು. ನಿರ್ಮಲ, ಜಾನಕಿಬಾಯಿ, ಹುಸೇನಮ್ಮ, ಶಶಿಕಲಾ, ಕಮಲಾಬಾಯಿ, ಹುಚ್ಚಮ್ಮ, ಕಮಲಮ್ಮ, ಗಂಗಮ್ಮ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT