<p>ಯಲಬುರ್ಗಾ: ತಾಲ್ಲೂಕಿನ ಬಂಡಿ ಗ್ರಾಮದ ಸಂಪರ್ಕ (ಯಲಬುರ್ಗಾ-ಬಂಡಿ)ರಸ್ತೆ ಮಧ್ಯೆದಲ್ಲಿ ಎರಡು ಮೂರು ಕಡೆ ಕಾಣಿಸಿಕೊಂಡಿರುವ ತಗ್ಗು ದಿನ್ನೆಗಳು ಭಾರಿ ಅಪಾಯವನ್ನು ಆಹ್ವಾನಿಸುವಂತಿದೆ.<br /> <br /> ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಅವುಗಳ ದುರಸ್ತಿಗೆ ಮುಂದಾಗಬೇಕು ಎಂದು ಬಂಡಿ, ತುಮ್ಮರಗುಂದಿ ಹಾಗೂ ಯಲಬುರ್ಗಾ ನಾಗರಿಕರು ಆಗ್ರಹಿಸಿದ್ದಾರೆ.<br /> <br /> ಸದ್ರಿ ರಸ್ತೆಯ ಕೆಲವು ಕಡೆ ರಸ್ತೆ ಉತ್ತಮವಾಗಿದ್ದು, ಮತ್ತೆ ಕೆಲವು ಕಡೆ ಸಂಪೂರ್ಣ ಹದೆಗೆಟ್ಟಿದೆ. <br /> ಸಾಕಷ್ಟು ಪ್ರಮಾಣದಲ್ಲಿ ಗ್ರಾನೈಟ್ ಕಲ್ಲುಸಾಗಣೆ ವಾಹನಗಳು ಇದೇ ಮಾರ್ಗವಾಗಿ ಹಾದು ಹೋಗುತ್ತಿರುವುದರಿಂದ ರಸ್ತೆ ಸಂಪೂರ್ಣ ಹಾಳಾಗಿದೆ. ಮೇಲಾಗಿ ಮೂರ್ನಾಲ್ಕು ಕಡೆಗಳಲ್ಲಿ ಭಾರಿ ಗಾತ್ರದ ತಗ್ಗುಗಳಿದ್ದು ಆಗಾಗ ವಾಹನ ಸಂಚಾರರಿಗೆ ಅಪಾಯ ತಂದೊಡ್ಡಿವೆ. <br /> <br /> ಅದರಲ್ಲೂ ತಗ್ಗು ಪ್ರದೇಶದಲ್ಲಿರುವ ಈ ದುರಾವಸ್ಥೆಯು ರಾತ್ರಿ ಸಮಯದಲ್ಲಿ ಸುಲಭವಾಗಿ ಕಣ್ಣಿಗೆ ಗೋಚರಿಸದೇ ಇರುವ ಕಾರಣ ವಾಹನಗಳು ಮುಗ್ಗಿರಿಸಿ ಬಿದ್ದು ಸವಾರರು ಆಸ್ಪತ್ರೆ ಸೇರಿದ ಉದಾಹರಣೆಗಳು ಸಾಕಷ್ಟಿವೆ. <br /> <br /> ಈ ಬಗ್ಗೆ ಈ ಭಾಗದ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಇನ್ನೂವರೆಗೂ ಯಾವುದೇ ಪ್ರಯೋಜನವಾಗಿಲ್ಲ, ಹೆಸರಿಗೆ ಮಾತ್ರ ಸದಸ್ಯರಾದಂತಿರುವುದರಿಂದ ಈ ಭಾಗದ ಜನರ ಕಷ್ಟ ಕಾರ್ಪಣ್ಯಗಳನ್ನು ಕೇಳುವವರಿಲ್ಲದಂತಾಗಿದೆ ಎಂದು ಬಂಡಿ ಗ್ರಾಮದ ಶರಣಬಸವರಾಜ ಬೇಸರ ವ್ಯಕ್ತಪಡಿಸಿದ್ದಾರೆ. <br /> <br /> ಪಟ್ಟಣದಿಂದ ಬಂಡಿ ವೃತ್ತದ ವರೆಗೆ ರಸ್ತೆ ಸುಧಾರಣೆಗಾಗಿ ವರ್ಷದಲ್ಲಿ ಮೂರ್ನಾಲ್ಕು ಸಲ ಅನುದಾನ ಬಿಡುಗಡೆಯಾಗಿದೆ. ಅಲ್ಲದೇ ದುರಸ್ತಿ ಕಾರ್ಯ ನಡೆದಿದೆಯಾದರೂ ತಿಂಗಳೊಳಗೆ ಕಿತ್ತುಹೋಗಿದೆ. <br /> <br /> ಹೀಗೆ ಕಾಟಾಚಾರದಲ್ಲಿ ಕಳಪೆಯಾಗಿ ನಿರ್ಮಿಸಿದ್ದರ ಪರಿಣಾಮ ರಸ್ತೆ ಸಂಪೂರ್ಣ ಹಾಳಾಗುತ್ತಿದೆ. ಸದ್ರಿ ರಸ್ತೆಯ ದುರಸ್ತಿಗೊಳಿಸುವಂತೆ ಆಗಾಗ ವಿವಿಧ ಸಂಘ ಸಂಸ್ಥೆಗಳು ಪ್ರತಿಭಟನೆ ಮಾಡಿದ್ದರೂ ಎಚ್ಚರಗೊಳ್ಳದೇ ಇರುವುದರಿಂದ ಮುಂದಿನ ದಿನಗಳಲ್ಲಿ ದುರಸ್ತಿಗೆ ಆಗ್ರಹಿಸಿ ಉಗ್ರ ಹೋರಾಟ ಮಾಡಬೇಕಾಗುತ್ತದೆ. <br /> <br /> ಹೆಚ್ಚಿನ ಆಪಾಯಗಳು ಆಗುವ ಮುನ್ನ ಸಂಬಂಧಪಟ್ಟವರು ಹಾಳಾದ ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕಳಕಪ್ಪ ಹೂಗಾರ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲಬುರ್ಗಾ: ತಾಲ್ಲೂಕಿನ ಬಂಡಿ ಗ್ರಾಮದ ಸಂಪರ್ಕ (ಯಲಬುರ್ಗಾ-ಬಂಡಿ)ರಸ್ತೆ ಮಧ್ಯೆದಲ್ಲಿ ಎರಡು ಮೂರು ಕಡೆ ಕಾಣಿಸಿಕೊಂಡಿರುವ ತಗ್ಗು ದಿನ್ನೆಗಳು ಭಾರಿ ಅಪಾಯವನ್ನು ಆಹ್ವಾನಿಸುವಂತಿದೆ.<br /> <br /> ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಅವುಗಳ ದುರಸ್ತಿಗೆ ಮುಂದಾಗಬೇಕು ಎಂದು ಬಂಡಿ, ತುಮ್ಮರಗುಂದಿ ಹಾಗೂ ಯಲಬುರ್ಗಾ ನಾಗರಿಕರು ಆಗ್ರಹಿಸಿದ್ದಾರೆ.<br /> <br /> ಸದ್ರಿ ರಸ್ತೆಯ ಕೆಲವು ಕಡೆ ರಸ್ತೆ ಉತ್ತಮವಾಗಿದ್ದು, ಮತ್ತೆ ಕೆಲವು ಕಡೆ ಸಂಪೂರ್ಣ ಹದೆಗೆಟ್ಟಿದೆ. <br /> ಸಾಕಷ್ಟು ಪ್ರಮಾಣದಲ್ಲಿ ಗ್ರಾನೈಟ್ ಕಲ್ಲುಸಾಗಣೆ ವಾಹನಗಳು ಇದೇ ಮಾರ್ಗವಾಗಿ ಹಾದು ಹೋಗುತ್ತಿರುವುದರಿಂದ ರಸ್ತೆ ಸಂಪೂರ್ಣ ಹಾಳಾಗಿದೆ. ಮೇಲಾಗಿ ಮೂರ್ನಾಲ್ಕು ಕಡೆಗಳಲ್ಲಿ ಭಾರಿ ಗಾತ್ರದ ತಗ್ಗುಗಳಿದ್ದು ಆಗಾಗ ವಾಹನ ಸಂಚಾರರಿಗೆ ಅಪಾಯ ತಂದೊಡ್ಡಿವೆ. <br /> <br /> ಅದರಲ್ಲೂ ತಗ್ಗು ಪ್ರದೇಶದಲ್ಲಿರುವ ಈ ದುರಾವಸ್ಥೆಯು ರಾತ್ರಿ ಸಮಯದಲ್ಲಿ ಸುಲಭವಾಗಿ ಕಣ್ಣಿಗೆ ಗೋಚರಿಸದೇ ಇರುವ ಕಾರಣ ವಾಹನಗಳು ಮುಗ್ಗಿರಿಸಿ ಬಿದ್ದು ಸವಾರರು ಆಸ್ಪತ್ರೆ ಸೇರಿದ ಉದಾಹರಣೆಗಳು ಸಾಕಷ್ಟಿವೆ. <br /> <br /> ಈ ಬಗ್ಗೆ ಈ ಭಾಗದ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಇನ್ನೂವರೆಗೂ ಯಾವುದೇ ಪ್ರಯೋಜನವಾಗಿಲ್ಲ, ಹೆಸರಿಗೆ ಮಾತ್ರ ಸದಸ್ಯರಾದಂತಿರುವುದರಿಂದ ಈ ಭಾಗದ ಜನರ ಕಷ್ಟ ಕಾರ್ಪಣ್ಯಗಳನ್ನು ಕೇಳುವವರಿಲ್ಲದಂತಾಗಿದೆ ಎಂದು ಬಂಡಿ ಗ್ರಾಮದ ಶರಣಬಸವರಾಜ ಬೇಸರ ವ್ಯಕ್ತಪಡಿಸಿದ್ದಾರೆ. <br /> <br /> ಪಟ್ಟಣದಿಂದ ಬಂಡಿ ವೃತ್ತದ ವರೆಗೆ ರಸ್ತೆ ಸುಧಾರಣೆಗಾಗಿ ವರ್ಷದಲ್ಲಿ ಮೂರ್ನಾಲ್ಕು ಸಲ ಅನುದಾನ ಬಿಡುಗಡೆಯಾಗಿದೆ. ಅಲ್ಲದೇ ದುರಸ್ತಿ ಕಾರ್ಯ ನಡೆದಿದೆಯಾದರೂ ತಿಂಗಳೊಳಗೆ ಕಿತ್ತುಹೋಗಿದೆ. <br /> <br /> ಹೀಗೆ ಕಾಟಾಚಾರದಲ್ಲಿ ಕಳಪೆಯಾಗಿ ನಿರ್ಮಿಸಿದ್ದರ ಪರಿಣಾಮ ರಸ್ತೆ ಸಂಪೂರ್ಣ ಹಾಳಾಗುತ್ತಿದೆ. ಸದ್ರಿ ರಸ್ತೆಯ ದುರಸ್ತಿಗೊಳಿಸುವಂತೆ ಆಗಾಗ ವಿವಿಧ ಸಂಘ ಸಂಸ್ಥೆಗಳು ಪ್ರತಿಭಟನೆ ಮಾಡಿದ್ದರೂ ಎಚ್ಚರಗೊಳ್ಳದೇ ಇರುವುದರಿಂದ ಮುಂದಿನ ದಿನಗಳಲ್ಲಿ ದುರಸ್ತಿಗೆ ಆಗ್ರಹಿಸಿ ಉಗ್ರ ಹೋರಾಟ ಮಾಡಬೇಕಾಗುತ್ತದೆ. <br /> <br /> ಹೆಚ್ಚಿನ ಆಪಾಯಗಳು ಆಗುವ ಮುನ್ನ ಸಂಬಂಧಪಟ್ಟವರು ಹಾಳಾದ ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕಳಕಪ್ಪ ಹೂಗಾರ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>