ಸರ್ಕಾರ ತೆಗೆದುಕೊಂಡಿರುವ ಸಧ್ಯದ ನಿರ್ಣಯ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಹಿತ ಕಾಪಾಡುವ ನಿರ್ಣಯವಾಗಿ ಹೊರಹೊಮ್ಮಿದೆ. ಸಿಇಟಿ ಪರೀಕ್ಷೆ ಮೂಲಕ ಪ್ರವೇಶ ದೊರಕಬೇಕು. ಶೇ 75:25ರ ಅನುಪಾತದಲ್ಲಿ ಸೀಟುಗಳ ಹಂಚಿಕೆ ಆಗಬೇಕು. ಸರ್ಕಾರಿ ಕಾಲೇಜುಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು. ಹೊಸ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜು ಮಂಜೂರು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಗಮನ ಸೆಳೆದಿದ್ದಾರೆ.
ಎಸ್ಎಫ್ಐ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಶಾಂತ. ವಿದ್ಯಾರ್ಥಿ ಮುಖಂಡರಾದ ರಮೇಶ, ಉದಯಕುಮಾರ, ಶಿವಕುಮಾರ, ರಾಜು, ಆರೂಫ್ ಮತ್ತಿತರರು ಪಾಲ್ಗೊಂಡಿದ್ದರು.