‘ಸೇತುವೆಯು ಈಗಾಗಲೇ ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಕುಸಿದು ಬೀಳುವ ಸಾಧ್ಯತೆಯಿದೆ. ನೂತನ ಸೇತುವೆ ನಿರ್ಮಾಣ ಮಾಡುವುದಾಗಿ ಭರವಸೆ ನೀಡುತ್ತಾ ಬರಲಾಗುತ್ತಿದೆ. ಆದರೆ, 10 ವರ್ಷಗಳು ಕಳೆಯುತ್ತಾ ಬಂದರೂ ಈ ಬಗ್ಗೆ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಕಾಳಜಿ ವಹಿಸಿಲ್ಲ’ ಎಂದು ಗ್ರಾಮದ ಲಿಂಗಪ್ಪ, ರಾಜಾಸಾಬ ಆರೋಪಿಸಿದರು.