<p><strong>ರಾಯಚೂರು: </strong> ಕಾನೂನು ಬಾಹಿರ ಹಾಗೂ ಸರ್ವಾಧಿಕಾರ ಧೋರಣೆ ಅನುಸರಿಸುತ್ತಿರುವ ನಗರಸಭೆ ಪೌರಾಯುಕ್ತರ ತಿಪ್ಪೇಶ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ತಿಮ್ಮಾರೆಡ್ಡಿ ಅವರು ಒತ್ತಾಯಿಸಿದ್ದಾರೆ.<br /> <br /> ಮಂಗಳವಾರ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು, ಕಾನೂನಿನ ಚೌಕಟ್ಟಿನಲ್ಲಿ 2011 ಫೆಬ್ರುವರಿ ತಿಂಗಳಲ್ಲಿ ಸ್ಥಾಯಿ ಸಮಿತಿಯು ರಚನೆಗೊಂಡಿತು. ಸಮಿತಿಯು ತನ್ನ ಕಾರ್ಯಕಲಾಪಗಳನ್ನು ನಿರ್ವಹಿಸಲು ಬದ್ಧವಾಗಿರುತ್ತದೆ. <br /> <br /> ಆದರೆ, ಸ್ಥಾಯಿ ಸಮಿತಿಯ ಅಧ್ಯಕ್ಷರನ್ನು ಪರಿಗಣಿಸದೇ ಸರ್ವಾಧಿಕಾರ ಧೋರಣೆಯಿಂದ ನಗರಸಭೆಯ ಹಣವನ್ನು ದುರುಪಯೋಗ ಮಾಡಿದ್ದು, ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಆಪಾದಿಸಿದ್ದಾರೆ.<br /> <br /> ಸಮಿತಿ ರಚನೆಗೊಂಡ ನಂತರ ಕಾನೂನಿನ ಪ್ರಕಾರ ಕನಿಷ್ಠ 15ದಿನಗಳವರೆಗೆ ಒಂದು ಬಾರಿ ಹಾಗೂ ಅವಶ್ಯಕತೆಗಳ ಅನುಸಾರವಾಗಿ ಸಭೆ ಕರೆಯುವ ನಿಯಮ ಇದೆ. ಸಮಿತಿ ರಚನೆಗೊಂಡ ಮೇಲೆ ಒಂದು ಸಭೆಯನ್ನು ಮಾತ್ರ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.<br /> <br /> ಸ್ಥಾಯಿ ಸಮಿತಿ ಸಭೆ ಕರೆಯದೇ ತಮ್ಮಿಷ್ಟಕ್ಕೆ ಬಂದಂತೆ ಖರ್ಚು ವೆಚ್ಚಗಳನ್ನು ಪಾವತಿಸಿ ಕಾನೂನಿನ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಅಲ್ಲದೇ ತಮ್ಮ ದುರಾಡಳಿತವನ್ನೂ ಮುಂದುವರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.<br /> <br /> ಪೌರಾಯುಕ್ತರ ವಿರುದ್ಧ ಕ್ರಮ ಜರುಗಿಸಬೇಕು, ಸ್ಥಾಯಿ ಸಮಿತಿಯ ಕಾರ್ಯನಿರ್ವಹಣೆಯ ಬಗ್ಗೆ ನಗರಸಭೆ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು, ಈ ಬಗ್ಗೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.<br /> <br /> ಮನವಿ ಸಲ್ಲಿಸುವ ಸಂದರ್ಭದಲ್ಲಿ ಜೆಡಿಎಸ್ ಪಕ್ಷ ಜಿಲ್ಲಾಧ್ಯಕ್ಷ ಶೇಖ ರಿಜ್ವಾನ್, ಜಿಲ್ಲಾ ವಕ್ತಾರ ಎಂ.ವಿರೂಪಾಕ್ಷಿ, ನಗರಸಭೆ ಸದಸ್ಯ ಎಂ.ಪವನಕುಮಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಶಿವಶಂಕರ ವಕೀಲ, ರಾಯಕುಂಪಿ ಕೃಷ್ಣಮೂರ್ತಿ, ಶಂಶಾಲಂ, ಅಮ್ಜದ್, ಅಶೋಕ, ಬಿ.ಪಿ ಬಳಿಗಾರ, ಪ್ರಸಾದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong> ಕಾನೂನು ಬಾಹಿರ ಹಾಗೂ ಸರ್ವಾಧಿಕಾರ ಧೋರಣೆ ಅನುಸರಿಸುತ್ತಿರುವ ನಗರಸಭೆ ಪೌರಾಯುಕ್ತರ ತಿಪ್ಪೇಶ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ತಿಮ್ಮಾರೆಡ್ಡಿ ಅವರು ಒತ್ತಾಯಿಸಿದ್ದಾರೆ.<br /> <br /> ಮಂಗಳವಾರ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು, ಕಾನೂನಿನ ಚೌಕಟ್ಟಿನಲ್ಲಿ 2011 ಫೆಬ್ರುವರಿ ತಿಂಗಳಲ್ಲಿ ಸ್ಥಾಯಿ ಸಮಿತಿಯು ರಚನೆಗೊಂಡಿತು. ಸಮಿತಿಯು ತನ್ನ ಕಾರ್ಯಕಲಾಪಗಳನ್ನು ನಿರ್ವಹಿಸಲು ಬದ್ಧವಾಗಿರುತ್ತದೆ. <br /> <br /> ಆದರೆ, ಸ್ಥಾಯಿ ಸಮಿತಿಯ ಅಧ್ಯಕ್ಷರನ್ನು ಪರಿಗಣಿಸದೇ ಸರ್ವಾಧಿಕಾರ ಧೋರಣೆಯಿಂದ ನಗರಸಭೆಯ ಹಣವನ್ನು ದುರುಪಯೋಗ ಮಾಡಿದ್ದು, ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಆಪಾದಿಸಿದ್ದಾರೆ.<br /> <br /> ಸಮಿತಿ ರಚನೆಗೊಂಡ ನಂತರ ಕಾನೂನಿನ ಪ್ರಕಾರ ಕನಿಷ್ಠ 15ದಿನಗಳವರೆಗೆ ಒಂದು ಬಾರಿ ಹಾಗೂ ಅವಶ್ಯಕತೆಗಳ ಅನುಸಾರವಾಗಿ ಸಭೆ ಕರೆಯುವ ನಿಯಮ ಇದೆ. ಸಮಿತಿ ರಚನೆಗೊಂಡ ಮೇಲೆ ಒಂದು ಸಭೆಯನ್ನು ಮಾತ್ರ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.<br /> <br /> ಸ್ಥಾಯಿ ಸಮಿತಿ ಸಭೆ ಕರೆಯದೇ ತಮ್ಮಿಷ್ಟಕ್ಕೆ ಬಂದಂತೆ ಖರ್ಚು ವೆಚ್ಚಗಳನ್ನು ಪಾವತಿಸಿ ಕಾನೂನಿನ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಅಲ್ಲದೇ ತಮ್ಮ ದುರಾಡಳಿತವನ್ನೂ ಮುಂದುವರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.<br /> <br /> ಪೌರಾಯುಕ್ತರ ವಿರುದ್ಧ ಕ್ರಮ ಜರುಗಿಸಬೇಕು, ಸ್ಥಾಯಿ ಸಮಿತಿಯ ಕಾರ್ಯನಿರ್ವಹಣೆಯ ಬಗ್ಗೆ ನಗರಸಭೆ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು, ಈ ಬಗ್ಗೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.<br /> <br /> ಮನವಿ ಸಲ್ಲಿಸುವ ಸಂದರ್ಭದಲ್ಲಿ ಜೆಡಿಎಸ್ ಪಕ್ಷ ಜಿಲ್ಲಾಧ್ಯಕ್ಷ ಶೇಖ ರಿಜ್ವಾನ್, ಜಿಲ್ಲಾ ವಕ್ತಾರ ಎಂ.ವಿರೂಪಾಕ್ಷಿ, ನಗರಸಭೆ ಸದಸ್ಯ ಎಂ.ಪವನಕುಮಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಶಿವಶಂಕರ ವಕೀಲ, ರಾಯಕುಂಪಿ ಕೃಷ್ಣಮೂರ್ತಿ, ಶಂಶಾಲಂ, ಅಮ್ಜದ್, ಅಶೋಕ, ಬಿ.ಪಿ ಬಳಿಗಾರ, ಪ್ರಸಾದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>