<p><strong>ಹಟ್ಟಿ ಚಿನ್ನದ ಗಣಿ:</strong> ಹಟ್ಟಿ ಗಣಿ ಕ್ಯಾಂಪಿನಲ್ಲಿ ಅಧಿಸೂಚಿತ ಪ್ರದೇಶ ಸಮಿತಿ ವತಿಯಿಂದ 9ಲಕ್ಷ ಖರ್ಚು ಮಾಡಿ ನಿರ್ಮಿಸಿದ ಮಾಂಸ ಮತ್ತು ಮೀನಿನ ಮಾರುಕಟ್ಟೆ ಕಟ್ಟಡ ಕಳೆದ 2 ವರ್ಷಗಳಿಂದ ಉದ್ಘಾಟನೆಗೊಳ್ಳದೆ ನಿರುಪಯುಕ್ತವಾಗಿದೆ.<br /> <br /> 2007ರಲ್ಲಿ ಚಿನ್ನದ ಗಣಿ ಕಾರ್ಮಿಕರು ವಾಸಿಸುವ ಕ್ಯಾಂಪಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಎಸ್ಎಫ್ಸಿ ಅನುದಾನದಲ್ಲಿ ಲಕ್ಷಗಟ್ಟಲೆ ಹಣ ಬಿಡುಗಡೆ ಮಾಡಿದೆ. ಅವುಗಲ್ಲಿ ಒಂದಾದ 9 ಲಕ್ಷದ ಮಾಂಸ ಮತ್ತು ಮೀನು ಮಾರುಕಟ್ಟೆ. ಆರಂಭದಲ್ಲಿ ಕಟ್ಟಡ ಕೆಲಸ ಭರದಿಂದ ನಡೆಯಿತು. <br /> <br /> ನಂತರ ನಿಧಾನಗೊಂಡು ಬಳಿಕ ಸ್ಥಗಿತಗೊಂಡಿತ್ತು. ಹೀಗಾಗಿ ಈ ಕಾಮಗಾರಿ ಪೂರ್ಣಗೊಳ್ಳಲು 5 ವರ್ಷಗಳು ಹಿಡಿದವು. ಗುತ್ತಿಗೆದಾರರು ಹಾಗೂ ಅಧಿಸೂಚಿತ ಪ್ರದೇಶ ಸಮಿತಿಯ ಮುಖ್ಯಅಧಿಕಾರಿ ಅನುದಾನ ಬಿಡುಗಡೆಯಾಗಿಲ್ಲ. ಬಿಲ್ ಪಾಸ್ ಆಗಿಲ್ಲ.<br /> <br /> ಹೀಗೆ ಬೇರೆ ಬೇರೆ ಕಾರಣಗಳು ಹೇಳಿ ಕಾಲ ಹರಣ ಮಾಡಿಕೊಂಡು ಬರುತ್ತಿದ್ದರು. 2012 ಡಿಸೆಂಬರ್ನಲ್ಲಿ ಉದ್ಘಾಟನೆ ಗೊಳಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು.<br /> <br /> ಈಗ ಈ ಭರವಸೆಕೂಡ ಹುಸಿಯಾಗಿದೆ. ಇದಕ್ಕೆ ಅಳವಡಿಸಿದ ಕಬ್ಬಿಣದ ಸಾಮಗ್ರಿಗಳು ಕಳ್ಳರ ಪಾಲಾಗುತ್ತಿವೆ ಎಂದು ಕಾರ್ಮಿಕರು ದೂರಿದ್ದಾರೆ. ಸಂಬಂಧಪಟ್ಟವರು ಕೂಡಲೇ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ:</strong> ಹಟ್ಟಿ ಗಣಿ ಕ್ಯಾಂಪಿನಲ್ಲಿ ಅಧಿಸೂಚಿತ ಪ್ರದೇಶ ಸಮಿತಿ ವತಿಯಿಂದ 9ಲಕ್ಷ ಖರ್ಚು ಮಾಡಿ ನಿರ್ಮಿಸಿದ ಮಾಂಸ ಮತ್ತು ಮೀನಿನ ಮಾರುಕಟ್ಟೆ ಕಟ್ಟಡ ಕಳೆದ 2 ವರ್ಷಗಳಿಂದ ಉದ್ಘಾಟನೆಗೊಳ್ಳದೆ ನಿರುಪಯುಕ್ತವಾಗಿದೆ.<br /> <br /> 2007ರಲ್ಲಿ ಚಿನ್ನದ ಗಣಿ ಕಾರ್ಮಿಕರು ವಾಸಿಸುವ ಕ್ಯಾಂಪಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಎಸ್ಎಫ್ಸಿ ಅನುದಾನದಲ್ಲಿ ಲಕ್ಷಗಟ್ಟಲೆ ಹಣ ಬಿಡುಗಡೆ ಮಾಡಿದೆ. ಅವುಗಲ್ಲಿ ಒಂದಾದ 9 ಲಕ್ಷದ ಮಾಂಸ ಮತ್ತು ಮೀನು ಮಾರುಕಟ್ಟೆ. ಆರಂಭದಲ್ಲಿ ಕಟ್ಟಡ ಕೆಲಸ ಭರದಿಂದ ನಡೆಯಿತು. <br /> <br /> ನಂತರ ನಿಧಾನಗೊಂಡು ಬಳಿಕ ಸ್ಥಗಿತಗೊಂಡಿತ್ತು. ಹೀಗಾಗಿ ಈ ಕಾಮಗಾರಿ ಪೂರ್ಣಗೊಳ್ಳಲು 5 ವರ್ಷಗಳು ಹಿಡಿದವು. ಗುತ್ತಿಗೆದಾರರು ಹಾಗೂ ಅಧಿಸೂಚಿತ ಪ್ರದೇಶ ಸಮಿತಿಯ ಮುಖ್ಯಅಧಿಕಾರಿ ಅನುದಾನ ಬಿಡುಗಡೆಯಾಗಿಲ್ಲ. ಬಿಲ್ ಪಾಸ್ ಆಗಿಲ್ಲ.<br /> <br /> ಹೀಗೆ ಬೇರೆ ಬೇರೆ ಕಾರಣಗಳು ಹೇಳಿ ಕಾಲ ಹರಣ ಮಾಡಿಕೊಂಡು ಬರುತ್ತಿದ್ದರು. 2012 ಡಿಸೆಂಬರ್ನಲ್ಲಿ ಉದ್ಘಾಟನೆ ಗೊಳಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು.<br /> <br /> ಈಗ ಈ ಭರವಸೆಕೂಡ ಹುಸಿಯಾಗಿದೆ. ಇದಕ್ಕೆ ಅಳವಡಿಸಿದ ಕಬ್ಬಿಣದ ಸಾಮಗ್ರಿಗಳು ಕಳ್ಳರ ಪಾಲಾಗುತ್ತಿವೆ ಎಂದು ಕಾರ್ಮಿಕರು ದೂರಿದ್ದಾರೆ. ಸಂಬಂಧಪಟ್ಟವರು ಕೂಡಲೇ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>