<p>ರಾಯಚೂರು: ಉದ್ಯೋಗ ಖಾತರಿ ಸಂಬಂಧಿಸಿದಂತೆ ಕೂಲಿಕಾರ ಬೇಡಿಕೆಗಳಿಗೆ ಅನುಗುಣವಾಗಿ ಅರ್ಜಿಗಳನ್ನು ಸ್ವೀಕರಿಸುವಲ್ಲಿ ನಿರ್ಲಕ್ಷ್ಯವಹಿಸಿಬಾರದು. ಕೂಲಿಕಾರರಿಗೆ ಕೆಲಸ ನೀಡಬೇಕು. ಈ ಬಗ್ಗೆ ಗಮನಹರಿಸದೇ ಇರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉದ್ಯೋಗ ಖಾತರಿ ಯೋಜನೆ ಆಯುಕ್ತ ಮೌನೀಶ ಮುದ್ಗೀಲ್ ಹೇಳಿದರು.<br /> <br /> ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಮಾಂಗೋ ಅಭಿಯಾನ ಯೋಜನೆ ಅಡಿ ಜಿಲ್ಲೆಯಲ್ಲಿ 50 ಸಾವಿರ ಕುಟುಂಬಗಳಿಗೆ ಉದ್ಯೋಗ ಕಲ್ಪಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.<br /> <br /> ಜಿಲ್ಲೆಯಲ್ಲಿ ಈಗಾಗಲೇ 5 ಸಾವಿರ ಕುಟುಂಬಗಳಿಂದ ಅರ್ಜಿ ಸಲ್ಲಿಸಲಾಗಿದೆ. ಈ ಯೋಜನೆ ಅಡಿ ಉದ್ಯೋಗ ನೀಡದೇ ಇದ್ದರೆ, ಉಚಿತ ಕರೆ (ಟೋಲ್ ಫ್ರೀ) ಕೇಂದ್ರಕ್ಕೆ ದೂರು ನೀಡಿದರೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಹೇಳಿದರು.<br /> <br /> ಯಾವ ಗ್ರಾಮ ಪಂಚಾಯಿತಿ ಕಡಿಮೆ ಪ್ರಮಾಣದಲ್ಲಿ ಅರ್ಜಿ ಸ್ವೀಕರಿಸಿರುವುದಿಲ್ಲ ಅಂಥ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕರ್ತವ್ಯ ಲೋಪವೆಂದು ಪರಿಗಣಿಸಲಾಗುತ್ತದೆ. ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಕೂಲಿಕಾರರಿಗೆ ಕೆಲಸ ನೀಡುವ ಹಾಗೂ ಅರ್ಜಿಗಳ ಸ್ವೀಕರಿಸದೇ ಇರುವುದು, ಜಾಬ್ ಕಾರ್ಡ್ ವಿತರಣೆ ಸೇರಿದಂತೆ ಲೋಪದೋಷಗಳಿವೆ. ಈ ಲೋಪದೋಷಗಳ ಬಗ್ಗೆ ಗಮನಹರಿಸಲಾಗುತ್ತದೆ ಎಂದು ತಿಳಿಸಿದರು.<br /> <br /> ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮರ್ಪಕ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ಕೂಲಿಕಾರ್ಮಿಕರ ಸಂಘಟನೆ ಸಹಾಯ ಪಡೆಯಲಾಗಿದೆ. ಅರ್ಜಿ ಸ್ವೀಕರಿಸಲು ನಿರಾಕರಣೆ ಸಂಬಂಧಿಸಿದಂತೆ ಸಹಾಯವಾಣಿ ಮೂಲಕ ತಿಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.<br /> <br /> ಉದ್ಯೋಗ ಖಾತರಿ ಯೋಜನೆ ಅಡಿ ಕೂಲಿ ವೇತನ ಪಾವತಿಯಲ್ಲಿ ವಿಳಂಭವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರ ಮಟ್ಟದಲ್ಲಿ ಚಿಂತನೆ ನಡೆಸಲಾಗುತ್ತದೆ. ಕೂಲಿ ದರವನ್ನು ₨1,74ಕ್ಕೆ ನಿಗದಿಪಡಿಸಲಾಗಿದೆ. ಉದ್ಯೋಗ ಅರಿಸಿ ಗುಳೆ ಹೋಗುವವರನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.<br /> <br /> ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಅನುದಾನ ಶೇ 6ರಷ್ಟು ಮಾತ್ರ ಇತರ ವೆಚ್ಚಗಳಿಗೆ ಖರ್ಚು ಮಾಡಬೇಕು ಎಂಬ ಸರ್ಕಾರದ ಆದೇಶವಿದೆ. ಈ ಹಿನ್ನೆಲೆಯಲ್ಲಿ ಈ ಕಾಮಗಾರಿ ಪರಿಶೀಲನೆಯನ್ನು 37 ಎಂಜಿನಿಯರ್ಗಳ ಮೂಲಕ ನಡೆಸಲಾಗುತ್ತಿದೆ ಎಂದು ತಿಳಿಸಿದರು.<br /> <br /> ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಅಂಗನವಾಡಿ, ಗ್ರಾಮ ಪಂಚಾಯಿತಿ ಕಚೇರಿ ಕರವಸೂಲಿಗಾರ, ಪ್ರೇರಕರು ಮನೆಗಳಿಗೆ ತೆರಳಿ ಜಾಗೃತಿ ಮೂಡಿಸುವುದು ಹಾಗೂ ಅರ್ಜಿ ಪಡೆಯುವ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.<br /> <br /> ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಮುದ್ದುಮೋಹನ, ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಯೋಜನಾಧಿಕಾರಿ ಶರಣಬಸವ ಹಾಗೂ ಇತರ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಉದ್ಯೋಗ ಖಾತರಿ ಸಂಬಂಧಿಸಿದಂತೆ ಕೂಲಿಕಾರ ಬೇಡಿಕೆಗಳಿಗೆ ಅನುಗುಣವಾಗಿ ಅರ್ಜಿಗಳನ್ನು ಸ್ವೀಕರಿಸುವಲ್ಲಿ ನಿರ್ಲಕ್ಷ್ಯವಹಿಸಿಬಾರದು. ಕೂಲಿಕಾರರಿಗೆ ಕೆಲಸ ನೀಡಬೇಕು. ಈ ಬಗ್ಗೆ ಗಮನಹರಿಸದೇ ಇರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉದ್ಯೋಗ ಖಾತರಿ ಯೋಜನೆ ಆಯುಕ್ತ ಮೌನೀಶ ಮುದ್ಗೀಲ್ ಹೇಳಿದರು.<br /> <br /> ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಮಾಂಗೋ ಅಭಿಯಾನ ಯೋಜನೆ ಅಡಿ ಜಿಲ್ಲೆಯಲ್ಲಿ 50 ಸಾವಿರ ಕುಟುಂಬಗಳಿಗೆ ಉದ್ಯೋಗ ಕಲ್ಪಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.<br /> <br /> ಜಿಲ್ಲೆಯಲ್ಲಿ ಈಗಾಗಲೇ 5 ಸಾವಿರ ಕುಟುಂಬಗಳಿಂದ ಅರ್ಜಿ ಸಲ್ಲಿಸಲಾಗಿದೆ. ಈ ಯೋಜನೆ ಅಡಿ ಉದ್ಯೋಗ ನೀಡದೇ ಇದ್ದರೆ, ಉಚಿತ ಕರೆ (ಟೋಲ್ ಫ್ರೀ) ಕೇಂದ್ರಕ್ಕೆ ದೂರು ನೀಡಿದರೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಹೇಳಿದರು.<br /> <br /> ಯಾವ ಗ್ರಾಮ ಪಂಚಾಯಿತಿ ಕಡಿಮೆ ಪ್ರಮಾಣದಲ್ಲಿ ಅರ್ಜಿ ಸ್ವೀಕರಿಸಿರುವುದಿಲ್ಲ ಅಂಥ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕರ್ತವ್ಯ ಲೋಪವೆಂದು ಪರಿಗಣಿಸಲಾಗುತ್ತದೆ. ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಕೂಲಿಕಾರರಿಗೆ ಕೆಲಸ ನೀಡುವ ಹಾಗೂ ಅರ್ಜಿಗಳ ಸ್ವೀಕರಿಸದೇ ಇರುವುದು, ಜಾಬ್ ಕಾರ್ಡ್ ವಿತರಣೆ ಸೇರಿದಂತೆ ಲೋಪದೋಷಗಳಿವೆ. ಈ ಲೋಪದೋಷಗಳ ಬಗ್ಗೆ ಗಮನಹರಿಸಲಾಗುತ್ತದೆ ಎಂದು ತಿಳಿಸಿದರು.<br /> <br /> ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮರ್ಪಕ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ಕೂಲಿಕಾರ್ಮಿಕರ ಸಂಘಟನೆ ಸಹಾಯ ಪಡೆಯಲಾಗಿದೆ. ಅರ್ಜಿ ಸ್ವೀಕರಿಸಲು ನಿರಾಕರಣೆ ಸಂಬಂಧಿಸಿದಂತೆ ಸಹಾಯವಾಣಿ ಮೂಲಕ ತಿಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.<br /> <br /> ಉದ್ಯೋಗ ಖಾತರಿ ಯೋಜನೆ ಅಡಿ ಕೂಲಿ ವೇತನ ಪಾವತಿಯಲ್ಲಿ ವಿಳಂಭವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರ ಮಟ್ಟದಲ್ಲಿ ಚಿಂತನೆ ನಡೆಸಲಾಗುತ್ತದೆ. ಕೂಲಿ ದರವನ್ನು ₨1,74ಕ್ಕೆ ನಿಗದಿಪಡಿಸಲಾಗಿದೆ. ಉದ್ಯೋಗ ಅರಿಸಿ ಗುಳೆ ಹೋಗುವವರನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.<br /> <br /> ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಅನುದಾನ ಶೇ 6ರಷ್ಟು ಮಾತ್ರ ಇತರ ವೆಚ್ಚಗಳಿಗೆ ಖರ್ಚು ಮಾಡಬೇಕು ಎಂಬ ಸರ್ಕಾರದ ಆದೇಶವಿದೆ. ಈ ಹಿನ್ನೆಲೆಯಲ್ಲಿ ಈ ಕಾಮಗಾರಿ ಪರಿಶೀಲನೆಯನ್ನು 37 ಎಂಜಿನಿಯರ್ಗಳ ಮೂಲಕ ನಡೆಸಲಾಗುತ್ತಿದೆ ಎಂದು ತಿಳಿಸಿದರು.<br /> <br /> ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಅಂಗನವಾಡಿ, ಗ್ರಾಮ ಪಂಚಾಯಿತಿ ಕಚೇರಿ ಕರವಸೂಲಿಗಾರ, ಪ್ರೇರಕರು ಮನೆಗಳಿಗೆ ತೆರಳಿ ಜಾಗೃತಿ ಮೂಡಿಸುವುದು ಹಾಗೂ ಅರ್ಜಿ ಪಡೆಯುವ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.<br /> <br /> ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಮುದ್ದುಮೋಹನ, ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಯೋಜನಾಧಿಕಾರಿ ಶರಣಬಸವ ಹಾಗೂ ಇತರ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>