ವಿಜಯಪುರ: ಜಿಲ್ಲೆಯ ತಿಕೋಟಾ, ನಾಲತವಾಡ ಪಟ್ಟಣದಲ್ಲಿ ಭಾನುವಾರ ಮಧ್ಯಾಹ್ನ ಅರ್ಧ ತಾಸಿಗೂ ಅಧಿಕ ಹೊತ್ತು ಮಳೆ ಸುರಿಯಿತು. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಇದ್ದು, ಗುಡುಗು, ಸಿಡಿಲು ಆರಂಭವಾಗಿದೆ.
ತಿಕೋಟಾ ವ್ಯಾಪ್ತಿಯಲ್ಲಿ ಕೊಯ್ಲಿಗೆ ಬಂದಿರುವ ದ್ರಾಕ್ಷಿ ಬೆಳೆಗೆ ಮಳೆಯಿಂದ ಸಮಸ್ಯೆಯಾಗಿದ್ದು, ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ.
ಈ ಸಮಯದಲ್ಲಿ ದ್ರಾಕ್ಷಿ ಕಟಾವು ಮಾಡಿಒಣದ್ರಾಕ್ಷಿ ಸಿದ್ದಪಡುಸುವ ಕಾರ್ಯ ಭರದಿಂದ ನಡೆದಿದ್ದು, ಮಳೆಯಿಂದ ಆ ಒಣದ್ರಾಕ್ಷಿ ತೊಯ್ದರೇ ಅದು ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಯಾಗಿ ರೈತನಿಗೆ ನಷ್ಟವಾಗು ಸಾಧ್ಯತೆ ಇದೆ.