<p><strong>ತೀರ್ಥಹಳ್ಳಿ</strong>: ಕೊರೊನಾ ವೈರಸ್ ಹರಡುವ ಭೀತಿಯ ನಡುವೆ ಅಕ್ರಮ ಚಟುವಟಿಕೆ ತಾಲ್ಲೂಕಿನಲ್ಲಿ ಗರಿಗೆದರಿವೆ. ಜನರನ್ನು ಮನೆಯಲ್ಲಿ ಕಟ್ಟಿಹಾಕುವ ಪ್ರಯತ್ನವನ್ನು ತಾಲ್ಲೂಕು ಆಡಳಿತ ನಡೆಸುತ್ತಿದ್ದರೆ ಇನ್ನೊಂದೆಡೆ ಅಕ್ರಮ ಮರಳು ಸಂಗ್ರಹ, ಸಾಗಣೆ, ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದೆ.</p>.<p>ತಾಲ್ಲೂಕಿನ ತುಂಗಾ, ಮಾಲತಿ, ಕುಂಟೇಹೊಳೆ, ಗೋಪಿನಾಥಹಳ್ಳ ಸೇರಿ ಅನೇಕ ಭಾಗಗಳಲ್ಲಿ ಸ್ಥಳೀಯವಾಗಿ ಲಭ್ಯ ಇರುವ ಮರಳನ್ನು ಸಣ್ಣ ಪುಟ್ಟ ವಾಹನಗಳ ಮೂಲಕ ಸಾಗಣೆ ಮಾಡಲಾಗುತ್ತಿದೆ. ಕೆಲ ದಂಧೆಕೋರರು ನದಿ, ತೊರೆಗಳಲ್ಲಿ ಸಿಗುವ ಮರಳನ್ನು ದೋಚಿ ಸಂಗ್ರಹಿಸಿಡುವ ಕೆಲಸದಲ್ಲಿ ನಿರತರಾಗಿದ್ದಾರೆ.</p>.<p>ಅಕ್ರಮ ಮದ್ಯ ಮಾರಾಟ: ಜನರ ಪ್ರಾಣಕ್ಕೆ ಕುತ್ತು ತರುತ್ತಿರುವ ಕಳಪೆ ದರ್ಜೆಯ ಅಕ್ರಮ ಮದ್ಯ ಮಾರಾಟ ಯಾವುದೇ ಅಡತಡೆ ಇಲ್ಲದೇ ತಾಲ್ಲೂಕಿನಲ್ಲಿ ನಿರಾತಂಕವಾಗಿ ನಡೆಯುತ್ತಿದೆ. ಕಳಪೆ ದರ್ಜೆಯ ಮದ್ಯ ಸೇವಿಸಿ ಹಲವರು ಜೀವ ತೆತ್ತಿದ್ದಾರೆ.</p>.<p>ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿರುವ ಕುರಿತು ಖಚಿತ ಮಾಹಿತಿ ಇದ್ದರೂ ಸಂಬಂಧಪಟ್ಟ ಇಲಾಖೆಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ. ಪೂರೈಕೆ, ಮಾರಾಟವನ್ನು ತಡೆಯಲು ಅಬಕಾರಿ, ಪೊಲೀಸ್ ಇಲಾಖೆಗೆ ಸಾಧ್ಯವಾಗದೇ ಇರುವುದು ಸಾರ್ವಜನಿಕರಲ್ಲಿ ವ್ಯಾಪಕ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.</p>.<p>ಹಳ್ಳಿಗಳಲ್ಲಿ ಕೆಲ ಆಯ್ದ ಮನೆಗಳು, ದಿನಸಿ ಅಂಗಡಿ, ಸಣ್ಣ ಪುಟ್ಟ ಹೋಟೆಲ್, ಗೂಡಂಗಡಿ, ನೆರಳೇ ಇಲ್ಲದ ನಿಗದಿತ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿದೆ. ₹ 30 ಮುಖ ಬೆಲೆಯ 90 ಮಿಲಿಯ 1 ಮದ್ಯದ ಸ್ಯಾಚೆಟ್ ಹಳ್ಳಿಗಳಲ್ಲಿ ₹ 70ರಿಂದ 80ರ ಬೆಲೆಗೆ ಗುರುವಾರ ರಾತ್ರಿ ಮಾರಾಟವಾಗಿದೆ. ದಲಿತ ಕೇರಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ನಡೆಸಲಾಗುತ್ತಿದೆ.</p>.<p>ಪರವಾನಗಿ ಪಡೆದ ವೈನ್ ಷಾಪ್, ಬಾರ್, ರೆಸ್ಟೋರೆಂಟ್ನ ಕೆಲ ಮಾಲೀಕರು ಅಕ್ರಮ ಮದ್ಯ ಪೂರೈಕೆ ಮಾಡುವುದನ್ನು ಹಳ್ಳಿಗಳಿಗೆ ವಿಸ್ತರಿಸಿಕೊಂಡಿದ್ದಾರೆ. ನಿರ್ದಿಷ್ಟ ಭಾಗಕ್ಕೆ ತಮ್ಮ ಕಡೆಯವರು ಮಾತ್ರ ಸರಬರಾಜು ಮಾಡಬೇಕು ಎಂಬ ಅಘೋಷಿತ ಒಪ್ಪಂದವನ್ನೂ ಮಾಡಿಕೊಂಡಿದ್ದಾರೆ.</p>.<p>ಅಕ್ರಮ ಮದ್ಯದ ಮೊಬೈಲ್ ಸರ್ವಿಸ್: ಕೆಲ ಪರಿಣತ ದಂಧೆಕೋರರು ಹಳ್ಳಿಗಳಿಗೆ ಸುಲಭವಾಗಿ ಬೈಕು, ಕಾರಿನ ಮೂಲಕ ಅಕ್ರಮ ಮದ್ಯ ಸರಬರಾಜು ಮಾಡುತ್ತಿದ್ದಾರೆ. ದಂಧೆಕೋರರಿಗೆ ಅಬಕಾರಿ, ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಬಂದಿ ಶಾಮೀಲಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.</p>.<p>ವೃದ್ಧರು ಕಡಿಮೆ ಬೆಲೆಯ ಅಕ್ರಮ ಮದ್ಯ ಸೇವಿಸುತ್ತಿರುವುದರ ಪ್ರಭಾವಕ್ಕೆ ಒಳಗಾದ ಯುವ ಸಮೂಹ ಕೂಡ ಮದ್ಯದ ಚಟ ಅಂಟಿಸಿಕೊಳ್ಳುವಂತಾಗಿದೆ. ಅನೇಕ ಕುಟುಂಬದಲ್ಲಿ ಹಿರಿಯರು ಕುಡಿತದ ಚಟಕ್ಕೆ ದಾಸರಾಗಿ ಹಾಸಿಗೆ ಹಿಡಿದಿದ್ದಾರೆ.</p>.<p>ಹಳ್ಳಿಯಿಂದ ಪೇಟೆಗೆ ಹೋಗುವುದಕ್ಕೆ ಹಣ ಖರ್ಚಾಗುತ್ತದೆ. ಬಸ್ಸಿನ ವ್ಯವಸ್ಥೆ ಇಲ್ಲ. ಅದಕ್ಕಾಗಿ ಸ್ಥಳೀಯವಾಗಿ ಸಿಗುವ ಮದ್ಯವನ್ನು ಹೆಚ್ಚು ಬೆಲೆ ಕೊಟ್ಟಾದರೂ ಕೊಂಡು ಸೇವಿಸುವುದಾಗಿ ಹೆಸರು ಹೇಳಲಿಚ್ಛಿಸದವರೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ</strong>: ಕೊರೊನಾ ವೈರಸ್ ಹರಡುವ ಭೀತಿಯ ನಡುವೆ ಅಕ್ರಮ ಚಟುವಟಿಕೆ ತಾಲ್ಲೂಕಿನಲ್ಲಿ ಗರಿಗೆದರಿವೆ. ಜನರನ್ನು ಮನೆಯಲ್ಲಿ ಕಟ್ಟಿಹಾಕುವ ಪ್ರಯತ್ನವನ್ನು ತಾಲ್ಲೂಕು ಆಡಳಿತ ನಡೆಸುತ್ತಿದ್ದರೆ ಇನ್ನೊಂದೆಡೆ ಅಕ್ರಮ ಮರಳು ಸಂಗ್ರಹ, ಸಾಗಣೆ, ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದೆ.</p>.<p>ತಾಲ್ಲೂಕಿನ ತುಂಗಾ, ಮಾಲತಿ, ಕುಂಟೇಹೊಳೆ, ಗೋಪಿನಾಥಹಳ್ಳ ಸೇರಿ ಅನೇಕ ಭಾಗಗಳಲ್ಲಿ ಸ್ಥಳೀಯವಾಗಿ ಲಭ್ಯ ಇರುವ ಮರಳನ್ನು ಸಣ್ಣ ಪುಟ್ಟ ವಾಹನಗಳ ಮೂಲಕ ಸಾಗಣೆ ಮಾಡಲಾಗುತ್ತಿದೆ. ಕೆಲ ದಂಧೆಕೋರರು ನದಿ, ತೊರೆಗಳಲ್ಲಿ ಸಿಗುವ ಮರಳನ್ನು ದೋಚಿ ಸಂಗ್ರಹಿಸಿಡುವ ಕೆಲಸದಲ್ಲಿ ನಿರತರಾಗಿದ್ದಾರೆ.</p>.<p>ಅಕ್ರಮ ಮದ್ಯ ಮಾರಾಟ: ಜನರ ಪ್ರಾಣಕ್ಕೆ ಕುತ್ತು ತರುತ್ತಿರುವ ಕಳಪೆ ದರ್ಜೆಯ ಅಕ್ರಮ ಮದ್ಯ ಮಾರಾಟ ಯಾವುದೇ ಅಡತಡೆ ಇಲ್ಲದೇ ತಾಲ್ಲೂಕಿನಲ್ಲಿ ನಿರಾತಂಕವಾಗಿ ನಡೆಯುತ್ತಿದೆ. ಕಳಪೆ ದರ್ಜೆಯ ಮದ್ಯ ಸೇವಿಸಿ ಹಲವರು ಜೀವ ತೆತ್ತಿದ್ದಾರೆ.</p>.<p>ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿರುವ ಕುರಿತು ಖಚಿತ ಮಾಹಿತಿ ಇದ್ದರೂ ಸಂಬಂಧಪಟ್ಟ ಇಲಾಖೆಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ. ಪೂರೈಕೆ, ಮಾರಾಟವನ್ನು ತಡೆಯಲು ಅಬಕಾರಿ, ಪೊಲೀಸ್ ಇಲಾಖೆಗೆ ಸಾಧ್ಯವಾಗದೇ ಇರುವುದು ಸಾರ್ವಜನಿಕರಲ್ಲಿ ವ್ಯಾಪಕ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.</p>.<p>ಹಳ್ಳಿಗಳಲ್ಲಿ ಕೆಲ ಆಯ್ದ ಮನೆಗಳು, ದಿನಸಿ ಅಂಗಡಿ, ಸಣ್ಣ ಪುಟ್ಟ ಹೋಟೆಲ್, ಗೂಡಂಗಡಿ, ನೆರಳೇ ಇಲ್ಲದ ನಿಗದಿತ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿದೆ. ₹ 30 ಮುಖ ಬೆಲೆಯ 90 ಮಿಲಿಯ 1 ಮದ್ಯದ ಸ್ಯಾಚೆಟ್ ಹಳ್ಳಿಗಳಲ್ಲಿ ₹ 70ರಿಂದ 80ರ ಬೆಲೆಗೆ ಗುರುವಾರ ರಾತ್ರಿ ಮಾರಾಟವಾಗಿದೆ. ದಲಿತ ಕೇರಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ನಡೆಸಲಾಗುತ್ತಿದೆ.</p>.<p>ಪರವಾನಗಿ ಪಡೆದ ವೈನ್ ಷಾಪ್, ಬಾರ್, ರೆಸ್ಟೋರೆಂಟ್ನ ಕೆಲ ಮಾಲೀಕರು ಅಕ್ರಮ ಮದ್ಯ ಪೂರೈಕೆ ಮಾಡುವುದನ್ನು ಹಳ್ಳಿಗಳಿಗೆ ವಿಸ್ತರಿಸಿಕೊಂಡಿದ್ದಾರೆ. ನಿರ್ದಿಷ್ಟ ಭಾಗಕ್ಕೆ ತಮ್ಮ ಕಡೆಯವರು ಮಾತ್ರ ಸರಬರಾಜು ಮಾಡಬೇಕು ಎಂಬ ಅಘೋಷಿತ ಒಪ್ಪಂದವನ್ನೂ ಮಾಡಿಕೊಂಡಿದ್ದಾರೆ.</p>.<p>ಅಕ್ರಮ ಮದ್ಯದ ಮೊಬೈಲ್ ಸರ್ವಿಸ್: ಕೆಲ ಪರಿಣತ ದಂಧೆಕೋರರು ಹಳ್ಳಿಗಳಿಗೆ ಸುಲಭವಾಗಿ ಬೈಕು, ಕಾರಿನ ಮೂಲಕ ಅಕ್ರಮ ಮದ್ಯ ಸರಬರಾಜು ಮಾಡುತ್ತಿದ್ದಾರೆ. ದಂಧೆಕೋರರಿಗೆ ಅಬಕಾರಿ, ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಬಂದಿ ಶಾಮೀಲಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.</p>.<p>ವೃದ್ಧರು ಕಡಿಮೆ ಬೆಲೆಯ ಅಕ್ರಮ ಮದ್ಯ ಸೇವಿಸುತ್ತಿರುವುದರ ಪ್ರಭಾವಕ್ಕೆ ಒಳಗಾದ ಯುವ ಸಮೂಹ ಕೂಡ ಮದ್ಯದ ಚಟ ಅಂಟಿಸಿಕೊಳ್ಳುವಂತಾಗಿದೆ. ಅನೇಕ ಕುಟುಂಬದಲ್ಲಿ ಹಿರಿಯರು ಕುಡಿತದ ಚಟಕ್ಕೆ ದಾಸರಾಗಿ ಹಾಸಿಗೆ ಹಿಡಿದಿದ್ದಾರೆ.</p>.<p>ಹಳ್ಳಿಯಿಂದ ಪೇಟೆಗೆ ಹೋಗುವುದಕ್ಕೆ ಹಣ ಖರ್ಚಾಗುತ್ತದೆ. ಬಸ್ಸಿನ ವ್ಯವಸ್ಥೆ ಇಲ್ಲ. ಅದಕ್ಕಾಗಿ ಸ್ಥಳೀಯವಾಗಿ ಸಿಗುವ ಮದ್ಯವನ್ನು ಹೆಚ್ಚು ಬೆಲೆ ಕೊಟ್ಟಾದರೂ ಕೊಂಡು ಸೇವಿಸುವುದಾಗಿ ಹೆಸರು ಹೇಳಲಿಚ್ಛಿಸದವರೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>