ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯುಪಿಎಸ್‌ಸಿ ಪರೀಕ್ಷೆ ಕನ್ನಡದಲ್ಲಿ ನಡೆಸಿ’

Last Updated 20 ಜೂನ್ 2022, 20:48 IST
ಅಕ್ಷರ ಗಾತ್ರ

ಬೆಂಗಳೂರು: ‘ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆಯನ್ನು ಕನ್ನಡ ದಲ್ಲಿ ನಡೆಸುವ ಮೂಲಕ ಯುವಜನಾಂಗ ಉದ್ಯೋಗ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು’ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರು ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಅಗ್ನಿಪಥ ಯೋಜನೆಗೆ ದೇಶದಾದ್ಯಂತ ಯುವ ಸಮೂಹ ಆಕ್ರೋಶಗೊಂಡಿದ್ದು, ಉದ್ಯೋಗದ ಭರವಸೆಗಳನ್ನು ಈಡೇರಿಸಿಕೊಳ್ಳಲು ಕೇಂದ್ರ ಸರ್ಕಾರ ಸ್ಪಂದಿಸ
ಬೇಕಾಗಿದೆ. ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯನ್ನು ಸ್ಥಳೀಯ ಭಾಷೆಯಲ್ಲಿ ಬರೆಯಲು ಅವಕಾಶ ನೀಡಬೇಕು. ಹಿಂದಿ ಹೇರಿಕೆ ಬಗ್ಗೆ ಕನ್ನಡಿಗರು ಎತ್ತಿರುವ ಪ್ರಶ್ನೆ ವಿಷಯದಲ್ಲಿ ಪ್ರಧಾನಿ ಮೋದಿ ಅವರು
ಮೌನ ವಹಿಸಿದ್ದರೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಂದಿ ಪರ ಮಾತನಾಡು
ತ್ತಿದ್ದಾರೆ. ಹೀಗಾಗಿ, ಗೊಂದಲ ದಲ್ಲಿರುವ ಕನ್ನಡಿಗರ ಪ್ರಶ್ನೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT