ಹಾಸನ: ಸಕಲೇಶಪುರ ತಾಲ್ಲೂಕಿನಲ್ಲಿ ಭಾರಿ ಮಳೆಯಾಗುತ್ತಿದೆ.ಹಾಸನ-ಮಂಗಳೂರು ನಡುವಿನ ರೈಲು ಮಾರ್ಗದಲ್ಲಿ ಮೂರು ಕಡೆ ಭೂ ಕುಸಿತ ಉಂಟಾಗಿದೆ.
ಮಂಗಳೂರು–ಬೆಂಗಳೂರು ರೈಲು ಸಂಚಾರ ಯಡಕುಮರಿಯಲ್ಲಿ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ. ಪ್ರಯಾಣಿಕರು ಹಾಸನದಿಂದ ಬಸ್ನಲ್ಲಿ ಹೋಗಲು ವ್ಯವಸ್ಥೆ ಮಾಡಲಾಗಿದೆ. ರೈಲ್ವೆ ಸಿಬ್ಬಂದಿ ಟಿಕೆಟ್ ಮೊತ್ತವನ್ನು ಮರು ಪಾವತಿ ಮಾಡಿದ್ದಾರೆ.