32 ಪ್ರಯಾಣಿಕರಲ್ಲಿ 2 ಚಿಕ್ಕ ಮಕ್ಕಳು ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. 10 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕ ಭರತ್ ಮತ್ತು ನಿರ್ವಾಹಕ ಕೋಚಿನಾ ಪೂಜಾರಿ ಅವರು ಗಾಯಗೊಂಡಿದ್ದು, ಸೋಲೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುದೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.