ಗ್ರಾಮದ ಮಾಸ್ತಮ್ಮ ತಾಯಿಯ ದೇವಸ್ಥಾನದ ಆವರಣದಲ್ಲಿ ಮೃತ ಕೋತಿಗೆ ಸಮಾಧಿ ನಿರ್ಮಾಣ ಮಾಡಿ, ಜೈ ಭಜರಂಗಿ ಎಂಬ ಕಲ್ಲನ್ನು ಪ್ರತಿಷ್ಠಾಪನೆ ಮಾಡುವ ಮೂಲಕ ಪುಟ್ಟದಾಗಿ ಗುಡಿ ನಿರ್ಮಾಣ ಮಾಡಲು ಚಿಂತನೆ ನಡೆಸಿದ್ದಾರೆ. ಪ್ರಾಣಿ, ಪಕ್ಷಿಗಳು ಸಾವನ್ನಪ್ಪಿದ ಸಂದರ್ಭದಲ್ಲಿ ಮನುಷ್ಯರಾದ ನಾವು ಅವುಗಳಿಗೆ ಅಂತ್ಯಕ್ರಿಯೆಯನ್ನು ನೆರವೇರಿಸಬೇಕು. ಅವುಗಳ ಆತ್ಮಕ್ಕೆ ಶಾಂತಿ ಕೋರಬೇಕು ಎಂದು ಶಿಕ್ಷಕ ನಾಗರಾಜು ತಿಳಿಸಿದ್ದಾರೆ.