‘ಆ ಹೊತ್ತಿನಲ್ಲಿ ನಿಜಾಮುದ್ದೀನ್ ಪ್ರದೇಶದಲ್ಲಿ ಕ್ರಿಯಾಶೀಲವಾಗಿದ್ದ ಮೊಬೈಲ್ ಸಂಖ್ಯೆಗಳ ವಿಳಾಸದ ಆಧಾರದ ಮೇಲೆ ಈ16 ಜನರ ವಿಳಾಸವನ್ನು ನೀಡಿದ್ದಾರೆ. ಈ ವಿಳಾಸದಲ್ಲಿದ್ದವರ ಕುಟುಂಬದವರನ್ನು ಸಂಪರ್ಕಿಸಲಾಗಿದೆ. ದೆಹಲಿಗೆ ಹೋದವರು ಲಾಕ್ಡೌನ್ ಕಾರಣ ಯಾರೂ ಇನ್ನೂ ಜಿಲ್ಲೆಗೆ ವಾಪಸ್ ಆಗಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಆದರೆ ಈವರೆಲ್ಲ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆಯೋ ಇಲ್ಲವೋ ಎಂಬುದು ಖಚಿತವಾಗಿಲ್ಲ’ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.