ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಮಸೀದಿ ಸಭೆಯಲ್ಲಿ ರಾಮನಗರ ಜಿಲ್ಲೆಯ 16 ಮಂದಿ ಭಾಗಿ?

Last Updated 1 ಏಪ್ರಿಲ್ 2020, 16:49 IST
ಅಕ್ಷರ ಗಾತ್ರ

ರಾಮನಗರ: ದೆಹಲಿಯ ನಿಜಾಮುದ್ದೀನ್‌ ಪ್ರದೇಶದಲ್ಲಿ ನಡೆದ ಸಮಾವೇಶದಲ್ಲಿ ಜಿಲ್ಲೆಯ 16 ಮಂದಿ ಭಾಗಿಯಾಗಿರುವ ಸಾಧ್ಯತೆ ಕುರಿತು ಜಿಲ್ಲಾಧಿಕಾರಿಗೆ ಮಾಹಿತಿ ರವಾನೆ ಆಗಿದೆ.

‘ಆ ಹೊತ್ತಿನಲ್ಲಿ ನಿಜಾಮುದ್ದೀನ್‌ ಪ್ರದೇಶದಲ್ಲಿ ಕ್ರಿಯಾಶೀಲವಾಗಿದ್ದ ಮೊಬೈಲ್ ಸಂಖ್ಯೆಗಳ ವಿಳಾಸದ ಆಧಾರದ ಮೇಲೆ ಈ16 ಜನರ ವಿಳಾಸವನ್ನು ನೀಡಿದ್ದಾರೆ. ಈ ವಿಳಾಸದಲ್ಲಿದ್ದವರ ಕುಟುಂಬದವರನ್ನು ಸಂಪರ್ಕಿಸಲಾಗಿದೆ. ದೆಹಲಿಗೆ ಹೋದವರು ಲಾಕ್‌ಡೌನ್‌ ಕಾರಣ ಯಾರೂ ಇನ್ನೂ ಜಿಲ್ಲೆಗೆ ವಾಪಸ್‌ ಆಗಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಆದರೆ ಈವರೆಲ್ಲ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆಯೋ ಇಲ್ಲವೋ ಎಂಬುದು ಖಚಿತವಾಗಿಲ್ಲ’ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT