ಮೈತ್ರಿ ಸರ್ಕಾರದ ಅವಧಿಯನ್ನು ದುರುಪಯೋಗ ಪಡಿಸಿಕೊಂಡ ಕಾಂಗ್ರೆಸ್ ಮುಖಂಡರು ಜೆಡಿಎಸ್ ಬಲಿಷ್ಠವಾಗಿದ್ದ ಕ್ಷೇತ್ರಗಳಲ್ಲಿಯೇ ತಮ್ಮ ಪ್ರಾಬಲ್ಯ ಕಂಡುಕೊಳ್ಳಲು ವೇದಿಕೆ ಸಿದ್ಧಪಡಿಸಿಕೊಂಡರು. ಇದರಿಂದಾಗಿ ಪಕ್ಷಕ್ಕೆ ಈಚಿನ ಚುನಾವಣೆಗಳಲ್ಲಿ ಹಿನ್ನಡೆ ಆಗುತ್ತಿದೆ. ನಾವುಗಳು ಮಾಡಿದ ಲೋಪಗಳಿಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ದೋಷಿಗಳಿಲ್ಲ. ನನ್ನಿಂದಾಗಿರುವ ತಪ್ಪಿನ ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದೇನೆ’ ಎಂದರು.