<p><strong>ರಾಮನಗರ:</strong> ಕೋವಿಡ್-19 ಸೋಂಕಿಗೆ ತುತ್ತಾಗಿರುವ ಚನ್ನಪಟ್ಟಣದ ಶಾನುಭೋಗನಹಳ್ಳಿ ನಿವಾಸಿ ಜೊತೆ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕ ಹೊಂದಿದ 24 ಮಂದಿಯನ್ನು ಆರೋಗ್ಯ ಇಲಾಖೆ ಕ್ವಾರಂಟೈನ್ ಮಾಡಿದೆ. ಈ ವ್ಯಕ್ತಿಯ ಪ್ರವಾಸದ ಹಿನ್ನೆಲೆ ಹುಡುಕುವುದೇ ಅಧಿಕಾರಿಗಳಿಗೆ ತಲೆನೋವಾಗಿದೆ.</p>.<p>ರಾಮನಗರ ಜೈಲಿನ ಸಿಬ್ಬಂದಿಯಾಗಿರುವ ಈ ಯುವಕ ಪಾದರಾಯನಪುರ ಆರೋಪಿಗಳು ಜೈಲಿನಲ್ಲಿದ್ದ ವೇಳೆ ಕಾರ್ಯ ನಿರ್ವಹಿಸಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು 28 ದಿನಗಳ ಕ್ವಾರಂಟೈನ್ನಲ್ಲಿ ಇಡಲಾಗಿತ್ತು. ಎರಡು ಬಾರಿ ಪರೀಕ್ಷೆಗೆ ಒಳಪಟ್ಟಿದ್ದು, ನೆಗೆಟಿವ್ ವರದಿ ಬಂದಿತ್ತು. ಆದರೆ ಮೂರನೇ ಬಾರಿ ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ಬಂದಿರುವುದು ಆತಂಕ ಮೂಡಿಸಿದೆ.</p>.<p>ಕೆಲ ದಿನಗಳ ಹಿಂದಷ್ಟೇ ಈ ಯುವಕ ತನ್ನ ಸ್ನೇಹಿತರೊಂದಿಗೆ ಸೇರಿ ಪಾರ್ಟಿ ಮಾಡಿದ್ದ ಎನ್ನಲಾಗಿದೆ. ಹೀಗಾಗಿ ಆ ಸ್ನೇಹಿತರನ್ನೂ ಆರೋಗ್ಯ ಇಲಾಖೆ ಕ್ವಾರಂಟೈನ್ಗೆ ಒಳಪಡಿಸಿದೆ. ಸದ್ಯ ಶ್ಯಾನುಬೋಗನಹಳ್ಳಿ ಗ್ರಾಮವನ್ನು ಜಿಲ್ಲಾಡಳಿತ ಸೀಲ್ಡೌನ್ ಮಾಡಿದ್ದು, ಜನರ ಓಡಾಟಕ್ಕೆ ನಿರ್ಬಂಧ ವಿಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಕೋವಿಡ್-19 ಸೋಂಕಿಗೆ ತುತ್ತಾಗಿರುವ ಚನ್ನಪಟ್ಟಣದ ಶಾನುಭೋಗನಹಳ್ಳಿ ನಿವಾಸಿ ಜೊತೆ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕ ಹೊಂದಿದ 24 ಮಂದಿಯನ್ನು ಆರೋಗ್ಯ ಇಲಾಖೆ ಕ್ವಾರಂಟೈನ್ ಮಾಡಿದೆ. ಈ ವ್ಯಕ್ತಿಯ ಪ್ರವಾಸದ ಹಿನ್ನೆಲೆ ಹುಡುಕುವುದೇ ಅಧಿಕಾರಿಗಳಿಗೆ ತಲೆನೋವಾಗಿದೆ.</p>.<p>ರಾಮನಗರ ಜೈಲಿನ ಸಿಬ್ಬಂದಿಯಾಗಿರುವ ಈ ಯುವಕ ಪಾದರಾಯನಪುರ ಆರೋಪಿಗಳು ಜೈಲಿನಲ್ಲಿದ್ದ ವೇಳೆ ಕಾರ್ಯ ನಿರ್ವಹಿಸಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು 28 ದಿನಗಳ ಕ್ವಾರಂಟೈನ್ನಲ್ಲಿ ಇಡಲಾಗಿತ್ತು. ಎರಡು ಬಾರಿ ಪರೀಕ್ಷೆಗೆ ಒಳಪಟ್ಟಿದ್ದು, ನೆಗೆಟಿವ್ ವರದಿ ಬಂದಿತ್ತು. ಆದರೆ ಮೂರನೇ ಬಾರಿ ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ಬಂದಿರುವುದು ಆತಂಕ ಮೂಡಿಸಿದೆ.</p>.<p>ಕೆಲ ದಿನಗಳ ಹಿಂದಷ್ಟೇ ಈ ಯುವಕ ತನ್ನ ಸ್ನೇಹಿತರೊಂದಿಗೆ ಸೇರಿ ಪಾರ್ಟಿ ಮಾಡಿದ್ದ ಎನ್ನಲಾಗಿದೆ. ಹೀಗಾಗಿ ಆ ಸ್ನೇಹಿತರನ್ನೂ ಆರೋಗ್ಯ ಇಲಾಖೆ ಕ್ವಾರಂಟೈನ್ಗೆ ಒಳಪಡಿಸಿದೆ. ಸದ್ಯ ಶ್ಯಾನುಬೋಗನಹಳ್ಳಿ ಗ್ರಾಮವನ್ನು ಜಿಲ್ಲಾಡಳಿತ ಸೀಲ್ಡೌನ್ ಮಾಡಿದ್ದು, ಜನರ ಓಡಾಟಕ್ಕೆ ನಿರ್ಬಂಧ ವಿಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>