ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

67 ಪ್ರಕರಣ ದೃಢ: 245 ಮಂದಿ ಗುಣ

Last Updated 12 ಆಗಸ್ಟ್ 2020, 15:49 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ಬುಧವಾರ ಹೊಸತಾಗಿ 67 ಮಂದಿಯಲ್ಲಿ ಕೋವಿಡ್‌-19 ಸೋಂಕು ದೃಢವಾಗಿದೆ. ಅಲ್ಲದೆ ಒಂದೇ ದಿನ 245 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ.

ಚನ್ನಪಟ್ಟಣ 18, ಕನಕಪುರ 15, ಮಾಗಡಿ 5 ಮತ್ತು ರಾಮನಗರದಲ್ಲಿ 29 ಪ್ರಕರಣಗಳು ವರದಿಯಾಗಿವೆ. ಎಲ್ಲರನ್ನೂ ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1917ಕ್ಕೆ ಏರಿಕೆಯಾಗಿದೆ. ಈ ಪೈಕಿ ಚನ್ನಪಟ್ಟಣ 423, ಕನಕಪುರ 389, ಮಾಗಡಿ 322 ಮತ್ತು ರಾಮನಗರ 783 ಪ್ರಕರಣಗಳು ಸೇರಿವೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 56, ಕನಕಪುರ ತಾಲ್ಲೂಕಿನಲ್ಲಿ 45, ಮಾಗಡಿ ತಾಲ್ಲೂಕಿನಲ್ಲಿ 23 ಹಾಗೂ ರಾಮನಗರ ತಾಲ್ಲೂಕಿನಲ್ಲಿ 121 ಜನ ಸೇರಿ ಒಟ್ಟಾರೆ 245 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 1209 ಜನರು ಗುಣಮುಖರಾಗಿದ್ದಾರೆ. ಇನ್ನೂ 688 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT