ಇನ್ನೊಮ್ಮೆ ಪುನರಾವರ್ತನೆಯಾದರೆ ಪ್ರಕರಣ ದಾಖಲು
ಸರ್ಕಾರವು ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿದೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಇದೀಗ ಎಚ್ಚರಿಕೆ ನೀಡಿ ದಂಡ ಮಾತ್ರ ವಿಧಿಸಲಾಗುತ್ತಿದೆ. ಇನ್ನೊಮ್ಮೆ ಇದೇ ರೀತಿ ಕಂಡು ಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಜಿಲ್ಲೆಯಲ್ಲಿ ಪ್ಲಾಸ್ಟಿಕ್ ತಯಾರಿಕಾ ಘಟಕಗಳು ಕಂಡು ಬಂದರೆ ನನಗೆ ಮಾಹಿತಿ ನೀಡಿ ಯಾವುದೇ ಮುಲಾಜಿಲ್ಲದೆ ಕ್ರಮ ಜರುಗಿಸುತ್ತೇನೆ. ಮಂಜುನಾಥ್ ಜಿಲ್ಲಾ ಪರಿಸರ ಅಧಿಕಾರಿ