ಚನ್ನಪಟ್ಟಣ ತಾಲೂಕಿನಲ್ಲಿ 14, ಕನಕಪುರದಲ್ಲಿ 3, ಮಾಗಡಿಯಲ್ಲಿ 9, ರಾಮನಗರ ತಾಲೂಕಿನಲ್ಲಿ 4 ಪ್ರಕರಣಗಳು ಪತ್ತೆಯಾಗಿವೆ. ಇಂದು 7 ಮಂದಿ ಗುಣಮುಖರಾಗಿ ಹೊರನಡೆದಿದ್ದಾರೆ. 191 ಸಕ್ರಿಯ ಪ್ರಕರಣಗಳಿವೆ. ಮಾಗಡಿಯ ತಾಲ್ಲೂಕು ಆಸ್ಪತ್ರೆಯಲ್ಲಿನ ಮಹಿಳಾ ವೈದ್ಯರೊಬ್ಬರಿಗೆ ಶನಿವಾರ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಒಂದು ದಿನದ ಮಟ್ಟಿಗೆ ಇಡೀ ಆಸ್ಪತ್ರೆ ಬಂದ್ ಆಗಿದ್ದು, ಫೀವರ್ ಕ್ಲಿನಿಕ್ ಹೊರತು ಪಡಿಸಿ, ತುರ್ತು ಆರೋಗ್ಯ ಸೇವೆಯಷ್ಟೇ ಲಭ್ಯವಿತ್ತು. ಆಸ್ಪತ್ರೆಗೆ ಭೇಟಿ ನೀಡಿದವರೆಲ್ಲರೂ ಸ್ವಯಂಪ್ರೇರಿತರಾಗಿ ಕೊರೊನಾ ಪರೀಕ್ಷೆಗೆ ಒಳಪಡುವಂತೆ ಹಾಗು ಗೃಹ ಕ್ವಾರೆಂಟೈನ್ನಲ್ಲಿರುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ. ಈವರೆಗೂ ಜಿಲ್ಲೆಯಲ್ಲಿ ಎಂಟು ಮಂದಿ ವೈದ್ಯಕೀಯ ಸಿಬ್ಬಂದಿಗೆ ಸೋಂಕು ತಗುಲಿರುವುದು ಆತಂಕ ಮೂಡಿಸಿದೆ.