<p><strong>ರಾಮನಗರ</strong>: ಜಿಲ್ಲೆಯಲ್ಲಿ ಭಾನುವಾರ 34 ಮಂದಿಯಲ್ಲಿ ಕೋವಿಡ್ -19 ಸೋಂಕು ದೃಢವಾಗಿದೆ. ಕನಕಪುರದಲ್ಲಿ ವ್ಯಕ್ತಿಯೊಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.</p>.<p>ರಾಮನಗರ ತಾಲ್ಲೂಕಿನಲ್ಲಿ ಒಂದೇ ದಿನ 20 ಮಂದಿಯಲ್ಲಿ ಸೋಂಕು ಕಂಡುಬಂದಿರುವುದು ಜನರ ಆತಂಕ ಹೆಚ್ಚಿಸಿದೆ. ಚನ್ನಪಟ್ಟಣದಲ್ಲಿ 4, ಕನಕಪುರ 2, ಮಾಗಡಿಯಲ್ಲಿ 8 ಹೊಸ ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ462ಕ್ಕೆ ಏರಿಕೆಯಾಗಿದೆ. ಈ ಪೈಕಿ ಕನಕಪುರ 94, ಮಾಗಡಿ 151, ಚನ್ನಪಟ್ಟಣ 87 ಮತ್ತು ರಾಮನಗರದ 130 ಪ್ರಕರಣಗಳು ಸೇರಿವೆ. 294 ಜನರು ಗುಣಮುಖರಾಗಿದ್ದರೆ, ಇನ್ನೂ 159 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಕನಕಪುರ ತಾಲ್ಲೂಕಿನ 73 ವರ್ಷದ ವ್ಯಕ್ತಿಯೊಬ್ಬರು ಮೂರು ದಿನದ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಅಸುನೀಗಿದರು. ದೇಗುಲ ಮಠದ ಬಳಿಯ ಸ್ಮಶಾನದಲ್ಲಿ ಕೋವಿಡ್-19 ನಿಯಮಾವಳಿಯಂತೆ ಅಂತ್ಯಸಂಸ್ಕಾರ ನಡೆಯಿತು. ಸಂಸದ ಡಿ.ಕೆ. ಸುರೇಶ್, ವಿಧಾನ ಪರಿಷತ್ ಸದಸ್ಯ ರವಿ ಪಿಪಿಇ ಕಿಟ್ ಧರಿಸಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಜಿಲ್ಲೆಯಲ್ಲಿ ಭಾನುವಾರ 34 ಮಂದಿಯಲ್ಲಿ ಕೋವಿಡ್ -19 ಸೋಂಕು ದೃಢವಾಗಿದೆ. ಕನಕಪುರದಲ್ಲಿ ವ್ಯಕ್ತಿಯೊಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.</p>.<p>ರಾಮನಗರ ತಾಲ್ಲೂಕಿನಲ್ಲಿ ಒಂದೇ ದಿನ 20 ಮಂದಿಯಲ್ಲಿ ಸೋಂಕು ಕಂಡುಬಂದಿರುವುದು ಜನರ ಆತಂಕ ಹೆಚ್ಚಿಸಿದೆ. ಚನ್ನಪಟ್ಟಣದಲ್ಲಿ 4, ಕನಕಪುರ 2, ಮಾಗಡಿಯಲ್ಲಿ 8 ಹೊಸ ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ462ಕ್ಕೆ ಏರಿಕೆಯಾಗಿದೆ. ಈ ಪೈಕಿ ಕನಕಪುರ 94, ಮಾಗಡಿ 151, ಚನ್ನಪಟ್ಟಣ 87 ಮತ್ತು ರಾಮನಗರದ 130 ಪ್ರಕರಣಗಳು ಸೇರಿವೆ. 294 ಜನರು ಗುಣಮುಖರಾಗಿದ್ದರೆ, ಇನ್ನೂ 159 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಕನಕಪುರ ತಾಲ್ಲೂಕಿನ 73 ವರ್ಷದ ವ್ಯಕ್ತಿಯೊಬ್ಬರು ಮೂರು ದಿನದ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಅಸುನೀಗಿದರು. ದೇಗುಲ ಮಠದ ಬಳಿಯ ಸ್ಮಶಾನದಲ್ಲಿ ಕೋವಿಡ್-19 ನಿಯಮಾವಳಿಯಂತೆ ಅಂತ್ಯಸಂಸ್ಕಾರ ನಡೆಯಿತು. ಸಂಸದ ಡಿ.ಕೆ. ಸುರೇಶ್, ವಿಧಾನ ಪರಿಷತ್ ಸದಸ್ಯ ರವಿ ಪಿಪಿಇ ಕಿಟ್ ಧರಿಸಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>