ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

40 ಮಂದಿಗೆ ಸೋಂಕು: ಒಬ್ಬರು ಸಾವು

Last Updated 7 ಸೆಪ್ಟೆಂಬರ್ 2020, 14:57 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ಸೋಮವಾರ 40 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.

ಚನ್ನಪಟ್ಟಣ 7, ಕನಕಪುರ 11, ಮಾಗಡಿ 9 ಮತ್ತು ರಾಮನಗರ 13 ಪ್ರಕರಣಗಳು ಇದರಲ್ಲಿ ಸೇರಿವೆ. ಇದುವರೆಗೆ ಜಿಲ್ಲೆಯಲ್ಲಿ 3977 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 954, ಕನಕಪುರ 818, ಮಾಗಡಿ 591 ಮತ್ತು ರಾಮನಗರ 1614 ಪ್ರಕರಣಗಳು ವರದಿ ಆಗಿವೆ. ಚನ್ನಪಟ್ಟಣ ತಾಲ್ಲೂಕಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 50 ಮಂದಿ ನಿಧನರಾಗಿದ್ದಾರೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 28, ಕನಕಪುರ ತಾಲ್ಲೂಕಿನಲ್ಲಿ 27, ಮಾಗಡಿ ತಾಲ್ಲೂಕಿನಲ್ಲಿ 16 ಹಾಗೂ ರಾಮನಗರ ತಾಲ್ಲೂಕಿನಲ್ಲಿ 74 ಜನ ಸೇರಿ ಒಟ್ಟಾರೆ 145 ಜನರು ಸೋಮವಾರ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 2947 ಜನರು ಗುಣಮುಖರಾಗಿದ್ದಾರೆ. ಇನ್ನೂ 980 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT