<p><strong>ರಾಮನಗರ: </strong>ಜಿಲ್ಲೆಯಲ್ಲಿ ಒಂದೇ ದಿನ 47 ಮಂದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 216ಕ್ಕೆ ಏರಿಕೆಯಾಗಿದೆ.</p>.<p>ಬುಧವಾರ ರಾಮನಗರದಲ್ಲಿ 8, ಮಾಗಡಿಯಲ್ಲಿ 37 ಹಾಗೂ ಕನಕಪುರದಲ್ಲಿ 2 ಮಂದಿಗೆ ಸೋಂಕು ತಗುಲಿದೆ. ಮಾಗಡಿಯ ಕಲ್ಯಾಗೇಟ್ನ ಐವರು, ರಾಜಕುಮಾರ್ ರಸ್ತೆಯ ಮೂವರು, ಹೊಸಪೇಟೆಯ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಹಾಲಶೆಟ್ಟಿಹಳ್ಳಿಯಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಆರು ಮಂದಿ ಸೋಂಕಿಗೆ ತುತ್ತಾಗಿದ್ದಾರೆ. ಈ ಮೂಲಕ ಮಾಗಡಿಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 78ಕ್ಕೆ ಏರಿಕೆ ಕಂಡಿದ್ದು, ಅಲ್ಲಿನ ಜನರ ಆತಂಕ ಹೆಚ್ಚಿಸಿದೆ. ಹೀಗಾಗಿ ಮಾಗಡಿಯಲ್ಲಿ ಸ್ವಯಂಪ್ರೇರಿತ ಲಾಕ್ಡೌನ್ ಅನ್ನು ಇದೇ 10ರವರೆಗೆ ವಿಸ್ತರಿಸಲಾಗಿದೆ.</p>.<p>ಜಿಲ್ಲೆಯಲ್ಲಿ ಈವರೆಗೆ 79 ಮಂದಿ ಗುಣಮುಖರಾಗಿದ್ದು, ಬುಧವಾರವೂ ಐದು ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 137 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p><strong>ಶಾಸಕರು ಕ್ವಾರಂಟೈನ್: </strong>ತಮ್ಮ ಆಪ್ತ ಸಹಾಯಕನಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಾಗಡಿ ಶಾಸಕ ಎ.ಮಂಜುನಾಥ್ ತಾವೂ ಪರೀಕ್ಷೆಗೆ ಮಾಡಿಸಿಕೊಂಡಿದ್ದು, ಖುದ್ದಾಗಿ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಈ ವಿಷಯವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದು, ಜನರು ಭೇಟಿ ಮಾಡಲು ಬರದಂತೆ ಕೋರಿದ್ದಾರೆ.</p>.<p><strong>ಪೊಲೀಸ್ಗೂ ಸೋಂಕು: </strong>ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಇನ್ಸ್ಪೆಕ್ಟರ್ ಒಬ್ಬರಿಗೂ ಸೋಂಕು ತಗುಲಿದೆ. ಅವರ ಸಂಪರ್ಕದಲ್ಲಿದ್ದ 12 ಮಂದಿ ಸಿಬ್ಬಂದಿ ಕ್ವಾರೆಂಟೈನ್ಗೆ ಒಳಗಾಗಿದ್ದಾರೆ. ಮಂಗಳವಾರ ಮತ್ತೊಬ್ಬರು ಪೊಲೀಸ್ ಸಿಬ್ಬಂದಿ ಸೋಂಕಿನಿಂದ ಗುಣಮುಖರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಜಿಲ್ಲೆಯಲ್ಲಿ ಒಂದೇ ದಿನ 47 ಮಂದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 216ಕ್ಕೆ ಏರಿಕೆಯಾಗಿದೆ.</p>.<p>ಬುಧವಾರ ರಾಮನಗರದಲ್ಲಿ 8, ಮಾಗಡಿಯಲ್ಲಿ 37 ಹಾಗೂ ಕನಕಪುರದಲ್ಲಿ 2 ಮಂದಿಗೆ ಸೋಂಕು ತಗುಲಿದೆ. ಮಾಗಡಿಯ ಕಲ್ಯಾಗೇಟ್ನ ಐವರು, ರಾಜಕುಮಾರ್ ರಸ್ತೆಯ ಮೂವರು, ಹೊಸಪೇಟೆಯ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಹಾಲಶೆಟ್ಟಿಹಳ್ಳಿಯಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಆರು ಮಂದಿ ಸೋಂಕಿಗೆ ತುತ್ತಾಗಿದ್ದಾರೆ. ಈ ಮೂಲಕ ಮಾಗಡಿಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 78ಕ್ಕೆ ಏರಿಕೆ ಕಂಡಿದ್ದು, ಅಲ್ಲಿನ ಜನರ ಆತಂಕ ಹೆಚ್ಚಿಸಿದೆ. ಹೀಗಾಗಿ ಮಾಗಡಿಯಲ್ಲಿ ಸ್ವಯಂಪ್ರೇರಿತ ಲಾಕ್ಡೌನ್ ಅನ್ನು ಇದೇ 10ರವರೆಗೆ ವಿಸ್ತರಿಸಲಾಗಿದೆ.</p>.<p>ಜಿಲ್ಲೆಯಲ್ಲಿ ಈವರೆಗೆ 79 ಮಂದಿ ಗುಣಮುಖರಾಗಿದ್ದು, ಬುಧವಾರವೂ ಐದು ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 137 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p><strong>ಶಾಸಕರು ಕ್ವಾರಂಟೈನ್: </strong>ತಮ್ಮ ಆಪ್ತ ಸಹಾಯಕನಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಾಗಡಿ ಶಾಸಕ ಎ.ಮಂಜುನಾಥ್ ತಾವೂ ಪರೀಕ್ಷೆಗೆ ಮಾಡಿಸಿಕೊಂಡಿದ್ದು, ಖುದ್ದಾಗಿ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಈ ವಿಷಯವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದು, ಜನರು ಭೇಟಿ ಮಾಡಲು ಬರದಂತೆ ಕೋರಿದ್ದಾರೆ.</p>.<p><strong>ಪೊಲೀಸ್ಗೂ ಸೋಂಕು: </strong>ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಇನ್ಸ್ಪೆಕ್ಟರ್ ಒಬ್ಬರಿಗೂ ಸೋಂಕು ತಗುಲಿದೆ. ಅವರ ಸಂಪರ್ಕದಲ್ಲಿದ್ದ 12 ಮಂದಿ ಸಿಬ್ಬಂದಿ ಕ್ವಾರೆಂಟೈನ್ಗೆ ಒಳಗಾಗಿದ್ದಾರೆ. ಮಂಗಳವಾರ ಮತ್ತೊಬ್ಬರು ಪೊಲೀಸ್ ಸಿಬ್ಬಂದಿ ಸೋಂಕಿನಿಂದ ಗುಣಮುಖರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>