<p><strong>ರಾಮನಗರ: </strong>ಇಲ್ಲಿನ ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಗುರುವಾರ ಅಧಿಕಾರಿಗಳು ದಾಳಿ ನಡೆಸಿದ್ದು, ಒಂದೇ ದಿನ ₹ 52 ಸಾವಿರ ದಂಡ ಸಂಗ್ರಹಿಸಿದರು.</p>.<p>ನಗರಸಭೆ ಪೌರಾಯುಕ್ತ ನಂದಕುಮಾರ್ ನೇತೃತ್ವದ ತಂಡವು ಪೊಲೀಸರ ಸಹಯೋಗದೊಂದಿಗೆ ನಗರದ ವಿವಿಧ ಸೂಪರ್ ಮಾರ್ಕೆಟ್, ಬಾರ್ ಮತ್ತು ರೆಸ್ಟೋರೆಂಟ್, ಆಭರಣ ಮಾರಾಟ ಮಳಿಗೆಗಳು, ಮೊಬೈಲ್ ಮಾರಾಟ ಮಳಿಗೆಗಳು ಮೊದಲಾದ ಅಂಗಡಿಗಳ ಮೇಲೆ ದಾಳಿ ನಡೆಸಿದರು. ಈ ಸಂದರ್ಭ ಮಾಸ್ಕ್ ಇಲ್ಲದೇ ಓಡಾಡುತ್ತಿದ್ದವರಿಗೆ ದಂಡ ವಿಧಿಸಲಾಯಿತು. ಜೊತೆಗೆ ಸಾಮಾಜಿಕ ಅಂತರ ಪಾಲನೆ ಮಾಡದ ಮಾಲೀಕರಿಗೂ ದಂಡ ಬಿದ್ದಿತು. ಜೊತೆಗೆ, ನಿಷೇಧಿತ ಪ್ಲಾಸ್ಟಿಕ್ ಮಾರುತ್ತಿದ್ದ ಮತ್ತು ಬಳಸುತ್ತಿದ್ದ ವರ್ತಕರಿಗೂ ದಂಡ ಹಾಕಲಾಯಿತು.</p>.<p>‘ನಗರ ವ್ಯಾಪ್ತಿಯಲ್ಲಿ ದಿನೇ ದಿನೇ ಕೋವಿಡ್ ಸೋಂಕು ಹೆಚ್ಚಳ ಆಗುತ್ತಿದೆ. ಆದಾಗ್ಯೂ ಕೆಲವರು ಮಾಸ್ಕ್ ಬಳಸದೇ ಓಡಾಡುವ ಮೂಲಕ ಎಚ್ಚರ ತಪ್ಪುತ್ತಿದ್ದಾರೆ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ದಾಳಿ ನಡೆಸಲಾಯಿತು. ಈ ಸಂದರ್ಭ ಕೋವಿಡ್ ನಿಯಮ ಪಾಲನೆ ಬಗ್ಗೆ ಸಾರ್ವಜನಿಕರಿಗೆ ತಿಳಿಹೇಳಲಾಯಿತು’ ಎಂದು ನಂದಕುಮಾರ್ ಮಾಹಿತಿ ನೀಡಿದರು.</p>.<p>‘ಮುಂದೆ ಈ ದಾಳಿ ನಿರಂತರವಾಗಿರಲಿದ್ದು, ನಿಯಮ ಪಾಲನೆ ಮಾಡದವರ ವಿರುದ್ಧ ದಂಡದ ಜೊತೆಗೆ ನ್ಯಾಯಾಲಯದ ಸೂಚನೆಯಂತೆ ಪ್ರಕರಣವನ್ನೂ ದಾಖಲಿಸಲಾಗುವುದು’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಇಲ್ಲಿನ ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಗುರುವಾರ ಅಧಿಕಾರಿಗಳು ದಾಳಿ ನಡೆಸಿದ್ದು, ಒಂದೇ ದಿನ ₹ 52 ಸಾವಿರ ದಂಡ ಸಂಗ್ರಹಿಸಿದರು.</p>.<p>ನಗರಸಭೆ ಪೌರಾಯುಕ್ತ ನಂದಕುಮಾರ್ ನೇತೃತ್ವದ ತಂಡವು ಪೊಲೀಸರ ಸಹಯೋಗದೊಂದಿಗೆ ನಗರದ ವಿವಿಧ ಸೂಪರ್ ಮಾರ್ಕೆಟ್, ಬಾರ್ ಮತ್ತು ರೆಸ್ಟೋರೆಂಟ್, ಆಭರಣ ಮಾರಾಟ ಮಳಿಗೆಗಳು, ಮೊಬೈಲ್ ಮಾರಾಟ ಮಳಿಗೆಗಳು ಮೊದಲಾದ ಅಂಗಡಿಗಳ ಮೇಲೆ ದಾಳಿ ನಡೆಸಿದರು. ಈ ಸಂದರ್ಭ ಮಾಸ್ಕ್ ಇಲ್ಲದೇ ಓಡಾಡುತ್ತಿದ್ದವರಿಗೆ ದಂಡ ವಿಧಿಸಲಾಯಿತು. ಜೊತೆಗೆ ಸಾಮಾಜಿಕ ಅಂತರ ಪಾಲನೆ ಮಾಡದ ಮಾಲೀಕರಿಗೂ ದಂಡ ಬಿದ್ದಿತು. ಜೊತೆಗೆ, ನಿಷೇಧಿತ ಪ್ಲಾಸ್ಟಿಕ್ ಮಾರುತ್ತಿದ್ದ ಮತ್ತು ಬಳಸುತ್ತಿದ್ದ ವರ್ತಕರಿಗೂ ದಂಡ ಹಾಕಲಾಯಿತು.</p>.<p>‘ನಗರ ವ್ಯಾಪ್ತಿಯಲ್ಲಿ ದಿನೇ ದಿನೇ ಕೋವಿಡ್ ಸೋಂಕು ಹೆಚ್ಚಳ ಆಗುತ್ತಿದೆ. ಆದಾಗ್ಯೂ ಕೆಲವರು ಮಾಸ್ಕ್ ಬಳಸದೇ ಓಡಾಡುವ ಮೂಲಕ ಎಚ್ಚರ ತಪ್ಪುತ್ತಿದ್ದಾರೆ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ದಾಳಿ ನಡೆಸಲಾಯಿತು. ಈ ಸಂದರ್ಭ ಕೋವಿಡ್ ನಿಯಮ ಪಾಲನೆ ಬಗ್ಗೆ ಸಾರ್ವಜನಿಕರಿಗೆ ತಿಳಿಹೇಳಲಾಯಿತು’ ಎಂದು ನಂದಕುಮಾರ್ ಮಾಹಿತಿ ನೀಡಿದರು.</p>.<p>‘ಮುಂದೆ ಈ ದಾಳಿ ನಿರಂತರವಾಗಿರಲಿದ್ದು, ನಿಯಮ ಪಾಲನೆ ಮಾಡದವರ ವಿರುದ್ಧ ದಂಡದ ಜೊತೆಗೆ ನ್ಯಾಯಾಲಯದ ಸೂಚನೆಯಂತೆ ಪ್ರಕರಣವನ್ನೂ ದಾಖಲಿಸಲಾಗುವುದು’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>