ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

58 ಲೀಟರ್ ಅಕ್ರಮ ಮದ್ಯ ನಾಶ

Last Updated 8 ನವೆಂಬರ್ 2019, 14:20 IST
ಅಕ್ಷರ ಗಾತ್ರ

ಚನ್ನಪಟ್ಟಣ: ಕಳೆದ ಲೋಕಸಭಾ ಚುನಾವಣೆ ವೇಳೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ ಅಕ್ರಮ ಮದ್ಯವನ್ನು ಅಬಕಾರಿ ಪೊಲೀಸರು ಪಟ್ಟಣದ ಅಬಕಾರಿ ಇನ್‌ಸ್ಪೆಕ್ಟರ್ ಕಚೇರಿಯಲ್ಲಿ ಶುಕ್ರವಾರ ನಾಶಪಡಿಸಿದರು.

ಚನ್ನಪಟ್ಟಣ ನಗರ ಹಾಗೂ ತಾಲ್ಲೂಕಿನಾದ್ಯಾಂತ ಮದ್ಯಅಕ್ರಮ ಸಾಗಾಣಿಕೆ ಹಾಗೂ ಮಾರಾಟದ ಸುಮಾರು 8 ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 58 ಲೀಟರ್ ಮದ್ಯ, 3 ಲೀಟರ್ ಬಿಯರ್ ಅನ್ನು ನಾಶಪಡಿಸಲಾಯಿತು.

‘ಜಿಲ್ಲಾಧಿಕಾರಿಗಳ ಆದೇಶದಂತೆ ಎಲ್ಲ ಅಕ್ರಮ ಮದ್ಯವನ್ನು ನಾಶಪಡಿಸಲಾಗುತ್ತಿದೆ. ಮದ್ಯಅಕ್ರಮ ಮಾರಾಟ ಕಾನೂನು ಬಾಹಿರವಾಗಿದ್ದು, ಸಂಗ್ರಹ ಹಾಗೂ ಮಾರಾಟ ಪ್ರಕರಣಗಳು ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಅಕ್ರಮ ಮದ್ಯ ನಾಶದ ನೇತೃತ್ವ ವಹಿಸಿದ್ದ ರಾಮನಗರ ಉಪ ವಿಭಾಗದ ಅಬಕಾರಿ ಡಿವೈಎಸ್‌ಪಿ ಪ್ರಕಾಶ್ ಪಾಟೀಲ್ ತಿಳಿಸಿದರು.

ಕರ್ನಾಟಕ ರಾಜ್ಯ ಪಾನೀಯ ನಿಯಮ ನಿಗಮಿತ ವ್ಯವಸ್ಥಾಪಕ ಶಿವಲಿಂಗಯ್ಯ, ಕಂದಾಯ ಇಲಾಖೆ ಅಧಿಕಾರಿ ಗಿರೀಶ್, ಅಬಕಾರಿ ನಿರೀಕ್ಷಕ ಡಿ.ಸುನೀಲ್, ಉಪ ನಿರೀಕ್ಷಕ ಜಿ.ಕೆ.ರಾಜೇಂದ್ರ, ಪರಿಕ್ಷಾರ್ಥ ಅಬಕಾರಿ ಉಪ ನಿರೀಕ್ಷಕ ಸುರೇಶ್ ಕುಮಠೆ, ಸಿಬ್ಬಂದಿಗಳಾದ ವಸಂತಮ್ಮ, ಸುರೇಶ್ ಉಜ್ಜಿನಿ, ಮಲ್ಲಿಕಾರ್ಜುನ, ಜಯರಾಮು, ಆದಿತ್ಯ ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT