ಕೇರಳದ ವ್ಯಕ್ತಿ, ಕನಕಪುರದ ಕ್ಯಾಬ್ ಚಾಲಕನ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದರು. ಅಂತೆಯೇ ಬೆಂಗಳೂರಿನಿಂದ ಕನಕಪುರ ತಾಲ್ಲೂಕಿನ ಗ್ರಾಮವೊಂದಕ್ಕೆ ವಾಪಸ್ ಆಗಿದ್ದ ಒಂದೇ ಕುಟುಂಬದ ನಾಲ್ವರ ಮಾದರಿಗಳನ್ನೂ ಪರೀಕ್ಷೆಗೆ ಕಳುಹಿಸಲಾಗಿತ್ತು. ಎಲ್ಲವೂ ನೆಗೆಟಿವ್ ಆಗಿವೆ. ಕನಕಪುರದ ಒಂದೇ ಕುಟುಂಬದವರನ್ನು ಪರೀಕ್ಷೆಗೆ ಒಳಪಡಿಸಿದ ಕಾರಣ ತಾಲ್ಲೂಕಿನ ಜನರಲ್ಲಿ ಆತಂಕ ಉಂಟಾಗಿತ್ತು. ಈ ಬಗ್ಗೆ ಸಾಕಷ್ಟು ವದಂತಿಗಳು ಹರಡಿದ್ದವು. ಈ ಎಲ್ಲಕ್ಕೂ ಆರೋಗ್ಯ ಇಲಾಖೆಯ ಅಧಿಕಾರಿಗಳು ತೆರೆ ಎಳೆದಿದ್ದಾರೆ.