<p><strong>ರಾಮನಗರ:</strong> ಜಿಲ್ಲೆಯ ಆರು ಕೇಂದ್ರಗಳಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಆರಂಭಗೊಂಡಿತು.</p>.<p>ರಾಮನಗರದ ಬೇತೆಲ್ ಶಿಕ್ಷಣ ಸಂಸ್ಥೆಯಲ್ಲಿ ಎರಡು, ಶಾಂತಿ ನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ಎರಡು ಹಾಗೂ ಬಿಎಸ್ವಿಪಿ ಶಿಕ್ಷಣ ಸಂಸ್ಥೆ ಮತ್ತು ಐಜೂರು ಸರ್ಕಾರಿ ಪ್ರೌಢಶಾಲೆಯಲ್ಲಿ ತಲಾ ಒಂದು ಕೇಂದ್ರವನ್ನು ತೆರೆಯಲಾಗಿದೆ. ಮೊದಲ ದಿನದಂದು 1008 ಶಿಕ್ಷಕರು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.</p>.<p>"ಪ್ರತಿ ಕೇಂದ್ರವನ್ನು ಸ್ಯಾನಿಟೈಜ್ ಮಾಡಲಾಗಿದ್ದು, ಮೌಲ್ಯಮಾಪನಕ್ಕೆ ಬರುವ ಪ್ರತಿ ಶಿಕ್ಷಕರನ್ನು ಥರ್ಮಲ್ ಸ್ಕ್ಯಾನಿಂಗ್ ಮಾಡಿ ಒಳಗೆ ಬಿಡಲಾಗುತ್ತಿದೆ. ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಬರುತ್ತಿದ್ದಾರೆ. ಶಿಕ್ಷಕರೇ ತಮ್ಮ ಊಟೋಪಚಾರ ನೋಡಿಕೊಳ್ಳುತ್ತಿದ್ದಾರೆ’ ಎಂದು ಡಿಡಿಪಿಐ ಸೋಮಶೇಖರಯ್ಯ ತಿಳಿಸಿದರು.</p>.<p>"ಏಳು ದಿನಗಳಲ್ಲಿ ಮೌಲ್ಯಮಾಪನ ಮುಗಿಯಬಹುದು ಎಂದು ನಿರೀಕ್ಷಿಸಲಾಗಿದೆ. ಆದರೆ ಬೆಂಗಳೂರು ಲಾಕ್ಡೌನ್ ಆಗಿ ಬರುವ ಶಿಕ್ಷಕರ ಸಂಖ್ಯೆ ಕಡಿಮೆ ಆದಲ್ಲಿ ಇನ್ನೂ ಒಂದೆರಡು ದಿನ ಹೆಚ್ಚುವರಿಯಾಗಿ ನಡೆಯಬಹುದು’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಜಿಲ್ಲೆಯ ಆರು ಕೇಂದ್ರಗಳಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಆರಂಭಗೊಂಡಿತು.</p>.<p>ರಾಮನಗರದ ಬೇತೆಲ್ ಶಿಕ್ಷಣ ಸಂಸ್ಥೆಯಲ್ಲಿ ಎರಡು, ಶಾಂತಿ ನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ಎರಡು ಹಾಗೂ ಬಿಎಸ್ವಿಪಿ ಶಿಕ್ಷಣ ಸಂಸ್ಥೆ ಮತ್ತು ಐಜೂರು ಸರ್ಕಾರಿ ಪ್ರೌಢಶಾಲೆಯಲ್ಲಿ ತಲಾ ಒಂದು ಕೇಂದ್ರವನ್ನು ತೆರೆಯಲಾಗಿದೆ. ಮೊದಲ ದಿನದಂದು 1008 ಶಿಕ್ಷಕರು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.</p>.<p>"ಪ್ರತಿ ಕೇಂದ್ರವನ್ನು ಸ್ಯಾನಿಟೈಜ್ ಮಾಡಲಾಗಿದ್ದು, ಮೌಲ್ಯಮಾಪನಕ್ಕೆ ಬರುವ ಪ್ರತಿ ಶಿಕ್ಷಕರನ್ನು ಥರ್ಮಲ್ ಸ್ಕ್ಯಾನಿಂಗ್ ಮಾಡಿ ಒಳಗೆ ಬಿಡಲಾಗುತ್ತಿದೆ. ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಬರುತ್ತಿದ್ದಾರೆ. ಶಿಕ್ಷಕರೇ ತಮ್ಮ ಊಟೋಪಚಾರ ನೋಡಿಕೊಳ್ಳುತ್ತಿದ್ದಾರೆ’ ಎಂದು ಡಿಡಿಪಿಐ ಸೋಮಶೇಖರಯ್ಯ ತಿಳಿಸಿದರು.</p>.<p>"ಏಳು ದಿನಗಳಲ್ಲಿ ಮೌಲ್ಯಮಾಪನ ಮುಗಿಯಬಹುದು ಎಂದು ನಿರೀಕ್ಷಿಸಲಾಗಿದೆ. ಆದರೆ ಬೆಂಗಳೂರು ಲಾಕ್ಡೌನ್ ಆಗಿ ಬರುವ ಶಿಕ್ಷಕರ ಸಂಖ್ಯೆ ಕಡಿಮೆ ಆದಲ್ಲಿ ಇನ್ನೂ ಒಂದೆರಡು ದಿನ ಹೆಚ್ಚುವರಿಯಾಗಿ ನಡೆಯಬಹುದು’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>