<p><strong>ರಾಮನಗರ</strong>: ಕಾಡಾನೆಗಳ ದಾಳಿ ತಡೆಗೆ ರಾಜ್ಯದಾದ್ಯಂತ ಸುಮಾರು 641 ಕಿ.ಮೀ. ಪ್ರದೇಶದಲ್ಲಿ ಬ್ಯಾರಿಕೇಡ್ (ರೈಲ್ವೆ ಬ್ಯಾರಿಕೇಡ್) ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈಗಾಗಲೇ 310 ಕಿ.ಮೀ. ಬ್ಯಾರಿಕೇಡ್ ನಿರ್ಮಾಣ ಪೂರ್ಣಗೊಂಡಿದೆ. ರಾಮನಗರದಲ್ಲಿ 73 ಕಿ.ಮೀ. ನಿರ್ಮಾಣವಾಗಬೇಕಿದೆ. 1 ಕಿ.ಮೀ ಬ್ಯಾರಿಕೇಡ್ಗೆ ಸುಮಾರು ₹1.50 ಕೋಟಿ ವೆಚ್ಚವಾಗಲಿದ್ದು, ಕಾಮಗಾರಿ ಪೂರ್ಣಗೊಳಿಸಲು ಅಂದಾಜು ₹500 ಕೋಟಿ ಅಗತ್ಯವಿದೆ’ ಎಂದರು.</p>.<p>‘ಅರಣ್ಯ ಪ್ರದೇಶದ ಅಂಚಿನ ಗ್ರಾಮಗಳಿಗೆ ಕಾಡಾನೆಗಳ ಬರದಂತೆ ತಡೆಯಲು ಸೋಲಾರ್ ಬೇಲಿ ನಿರ್ಮಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಆ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿ, ಕಾರ್ಯಗತಗೊಳಿಸಲಾಗುವುದು’ ಎಂದು ತಿಳಿಸಿದರು.</p>.<p>‘ವನ್ಯಜೀವಿಗಳ ದಾಳಿಯಿಂದ 2019ರಿಂದ ಇಲ್ಲಿಯವರೆಗೆ ನೂರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಅದರಲ್ಲಿ ಆನೆಗಳ ದಾಳಿಯಿಂದ ಸಾವಿಗೀಡಾದವರೇ ಹೆಚ್ಚು’ ಎಂದು ಹೇಳಿದರು.</p>.<p><strong>ಬ್ಯಾಂಕ್ ಖಾತೆಯೇ ಇಲ್ಲ:</strong> ‘ಆನೆ ದಾಳಿಯಿಂದ ಚನ್ನಪಟ್ಟಣದ ವಿರುಪಸಂದ್ರದಲ್ಲಿ ಜೂನ್ 3ರಂದು ಮೃತಪಟ್ಟ ತೋಟದ ಕಾವಲುಗಾರ, ಬುಡಕಟ್ಟು ಜನಾಂಗದ ವೀರಭದ್ರಯ್ಯ ಅವರ ಕುಟುಂಬ ಬ್ಯಾಂಕ್ ಖಾತೆಯನ್ನೇ ಹೊಂದಿಲ್ಲ. ಕುಟುಂಬದವರ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆದು ₹15 ಲಕ್ಷ ಪರಿಹಾರ ಮೊತ್ತವನ್ನು ಖಾತೆಗೆ ಜಮಾ ಮಾಡುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದರು.</p>.<p><strong>ಸಾಗುವಳಿದಾರರಿಗೆ ಪರಿಹಾರ:</strong> ‘ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡುವವರ ಒಕ್ಕಲೆಬ್ಬಿಸುತ್ತಿರುವುದಕ್ಕೆ ವಿರೋಧ ವ್ಯಕ್ತವಾಗಿದೆ. ಅದಕ್ಕೆ ಪರಿಹಾರ ನೀಡುವ ಕೆಲಸ ರಾಮನಗರದಿಂದಲೇ ಆರಂಭವಾಗಲಿದೆ. ಈ ಬಗ್ಗೆ ಸಂಸದರು ಪ್ರಸ್ತಾವ ಸಲ್ಲಿಸಿದ್ದಾರೆ. ಅದರಂತೆ, ಅರಣ್ಯ ಮತ್ತು ಕಂದಾಯ ಇಲಾಖೆಯವರು ಜಂಟಿ ಸಮೀಕ್ಷೆ ನಡೆಸಿದ್ದಾರೆ. ರಾಜ್ಯದಲ್ಲಿರುವ ಇಂತಹ ಪ್ರಕರಣಗಳನ್ನು ಒಟ್ಟಾಗಿ ಸೇರಿಸಿ ಪರಿಹಾರ ಒದಗಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಕಾಡಾನೆಗಳ ದಾಳಿ ತಡೆಗೆ ರಾಜ್ಯದಾದ್ಯಂತ ಸುಮಾರು 641 ಕಿ.ಮೀ. ಪ್ರದೇಶದಲ್ಲಿ ಬ್ಯಾರಿಕೇಡ್ (ರೈಲ್ವೆ ಬ್ಯಾರಿಕೇಡ್) ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈಗಾಗಲೇ 310 ಕಿ.ಮೀ. ಬ್ಯಾರಿಕೇಡ್ ನಿರ್ಮಾಣ ಪೂರ್ಣಗೊಂಡಿದೆ. ರಾಮನಗರದಲ್ಲಿ 73 ಕಿ.ಮೀ. ನಿರ್ಮಾಣವಾಗಬೇಕಿದೆ. 1 ಕಿ.ಮೀ ಬ್ಯಾರಿಕೇಡ್ಗೆ ಸುಮಾರು ₹1.50 ಕೋಟಿ ವೆಚ್ಚವಾಗಲಿದ್ದು, ಕಾಮಗಾರಿ ಪೂರ್ಣಗೊಳಿಸಲು ಅಂದಾಜು ₹500 ಕೋಟಿ ಅಗತ್ಯವಿದೆ’ ಎಂದರು.</p>.<p>‘ಅರಣ್ಯ ಪ್ರದೇಶದ ಅಂಚಿನ ಗ್ರಾಮಗಳಿಗೆ ಕಾಡಾನೆಗಳ ಬರದಂತೆ ತಡೆಯಲು ಸೋಲಾರ್ ಬೇಲಿ ನಿರ್ಮಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಆ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿ, ಕಾರ್ಯಗತಗೊಳಿಸಲಾಗುವುದು’ ಎಂದು ತಿಳಿಸಿದರು.</p>.<p>‘ವನ್ಯಜೀವಿಗಳ ದಾಳಿಯಿಂದ 2019ರಿಂದ ಇಲ್ಲಿಯವರೆಗೆ ನೂರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಅದರಲ್ಲಿ ಆನೆಗಳ ದಾಳಿಯಿಂದ ಸಾವಿಗೀಡಾದವರೇ ಹೆಚ್ಚು’ ಎಂದು ಹೇಳಿದರು.</p>.<p><strong>ಬ್ಯಾಂಕ್ ಖಾತೆಯೇ ಇಲ್ಲ:</strong> ‘ಆನೆ ದಾಳಿಯಿಂದ ಚನ್ನಪಟ್ಟಣದ ವಿರುಪಸಂದ್ರದಲ್ಲಿ ಜೂನ್ 3ರಂದು ಮೃತಪಟ್ಟ ತೋಟದ ಕಾವಲುಗಾರ, ಬುಡಕಟ್ಟು ಜನಾಂಗದ ವೀರಭದ್ರಯ್ಯ ಅವರ ಕುಟುಂಬ ಬ್ಯಾಂಕ್ ಖಾತೆಯನ್ನೇ ಹೊಂದಿಲ್ಲ. ಕುಟುಂಬದವರ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆದು ₹15 ಲಕ್ಷ ಪರಿಹಾರ ಮೊತ್ತವನ್ನು ಖಾತೆಗೆ ಜಮಾ ಮಾಡುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದರು.</p>.<p><strong>ಸಾಗುವಳಿದಾರರಿಗೆ ಪರಿಹಾರ:</strong> ‘ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡುವವರ ಒಕ್ಕಲೆಬ್ಬಿಸುತ್ತಿರುವುದಕ್ಕೆ ವಿರೋಧ ವ್ಯಕ್ತವಾಗಿದೆ. ಅದಕ್ಕೆ ಪರಿಹಾರ ನೀಡುವ ಕೆಲಸ ರಾಮನಗರದಿಂದಲೇ ಆರಂಭವಾಗಲಿದೆ. ಈ ಬಗ್ಗೆ ಸಂಸದರು ಪ್ರಸ್ತಾವ ಸಲ್ಲಿಸಿದ್ದಾರೆ. ಅದರಂತೆ, ಅರಣ್ಯ ಮತ್ತು ಕಂದಾಯ ಇಲಾಖೆಯವರು ಜಂಟಿ ಸಮೀಕ್ಷೆ ನಡೆಸಿದ್ದಾರೆ. ರಾಜ್ಯದಲ್ಲಿರುವ ಇಂತಹ ಪ್ರಕರಣಗಳನ್ನು ಒಟ್ಟಾಗಿ ಸೇರಿಸಿ ಪರಿಹಾರ ಒದಗಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>