ರಾಮನಗರ: ಜಿಲ್ಲೆಯಲ್ಲಿ ಶುಕ್ರವಾರ 78 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.
ಚನ್ನಪಟ್ಟಣ ತಾಲ್ಲೂಕು ಒಂದರಲ್ಲಿಯೇ 47 ಮಂದಿಯಲ್ಲಿ ಸೋಂಕು ದೃಢವಾಗಿದೆ. ಕನಕಪುರ 12, ಮಾಗಡಿ 3 ಮತ್ತು ರಾಮನಗರ 16 ಪ್ರಕರಣಗಳು ಸೇರಿವೆ. ಜಿಲ್ಲೆಯಲ್ಲಿ ಸೋಂಕಿತರಾದವರ ಸಂಖ್ಯೆ 2626ಕ್ಕೆ ಏರಿಕೆ ಆಗಿದೆ. ಈ ಪೈಕಿ ಚನ್ನಪಟ್ಟಣ 639, ಕನಕಪುರ 539, ಮಾಗಡಿ 402 ಮತ್ತು ರಾಮನಗರ 1046 ಪ್ರಕರಣಗಳು ಸೇರಿವೆ.
ಒಬ್ಬರು ಸಾವು: ರಾಮನಗರ ತಾಲ್ಲೂಕಿನಲ್ಲಿ 58 ವರ್ಷದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ಮೃತಪಟ್ಟಿದ್ದಾರೆ. ಇದರಿಂದಾಗಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆ ಆಗಿದೆ.
ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 8, ಕನಕಪುರ ತಾಲ್ಲೂಕಿನಲ್ಲಿ 12 ಹಾಗೂ ರಾಮನಗರ ತಾಲ್ಲೂಕಿನಲ್ಲಿ 8 ಜನ ಸೇರಿ ಒಟ್ಟಾರೆ 28 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 1718 ಜನರು ಗುಣಮುಖರಾಗಿದ್ದಾರೆ. ಇನ್ನೂ 878 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾದರಿ ಸಂಗ್ರಹ: ಶುಕ್ರವಾರ ಹೊಸದಾಗಿ 431 ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 24827 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 21491 ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಒಟ್ಟು 681 ಪ್ರಕರಣಗಳ ವರದಿ ಬರಬೇಕಿದೆ.