<p><strong>ರಾಮನಗರ: </strong>ಕೆಎಸ್ಆರ್ಟಿಸಿ ನೌಕರರ ಮುಷ್ಕರ ಮೂರನೇ ದಿನವಾದ ಶುಕ್ರವಾರವೂ ಮುಂದುವರಿಯಿತು. ಈ ನಡುವೆಯೂ ರಾಮನಗರ ಘಟಕ ವ್ಯಾಪ್ತಿಯಲ್ಲಿ 9 ಬಸ್ಗಳು ಸಂಚಾರ ನಡೆಸಿದವು.</p>.<p>ರಾಮನಗರ ಡಿಪೊದಿಂದ 5, ಆನೇಕಲ್ ಡಿಪೊದಿಂದ 2 ಹಾಗೂ ಹಾರೋಹಳ್ಳಿ, ಚನ್ನಪಟ್ಟಣ ಡಿಪೊದಿಂದ ತಲಾ 1 ಬಸ್ಗಳು ಕಾರ್ಯಾಚರಣೆ ನಡೆಸಿದವು. ರಾಮನಗರ ಬಸ್ ನಿಲ್ದಾಣದಿಂದ ಚನ್ನಪಟ್ಟಣ, ಮಾಗಡಿ, ಕನಕಪುರ, ಬಿಡದಿ ಹಾಗೂ ಆನೇಕಲ್ ಬಸ್ ನಿಲ್ದಾಣದಿಂದ ಹೊಸೂರು ಮಾರ್ಗದಲ್ಲಿ ಬಸ್ ಸಂಚರಿಸಿದವು. ಆದರೆ ಈ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಮಾತ್ರ ಕಡಿಮೆ ಇತ್ತು. ಬೇರೆ ಬೇರೆ ಹುದ್ದೆಯಲ್ಲಿ ಇದ್ದವರನ್ನೂ ಬಸ್ ಸೇವೆಗೆ ನಿಯೋಜನೆ ಮಾಡಲಾಗಿತ್ತು.</p>.<p>ವಾರಾಂತ್ಯ ಹಾಗೂ ಯುಗಾದಿ ಹಬ್ಬದ ರಜೆ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಸಂಚಾರ ದಟ್ಟಣೆ ಕಂಡುಬಂದಿತು. ಹೆಚ್ಚಿನ ಮಂದಿ ಬೆಂಗಳೂರು, ರಾಮನಗರದಿಂದ ಹೊರ ಊರುಗಳತ್ತ ಹೊರಟರು. ಹೀಗಾಗಿ ಖಾಸಗಿ ಬಸ್ಗಳಲ್ಲಿ ಸಂಜೆ ಪ್ರಯಾಣಿಕರ ಸಂಖ್ಯೆ ಹೆಚ್ಚಿತ್ತು.<br /><br /><strong>ಗ್ರಾಮೀಣ ಸಾರಿಗೆಗೆ ಹೊಡೆತ</strong></p>.<p>ಮುಷ್ಕರ ಆರಂಭವಾದ ದಿನದಿಂದ ಈವರೆಗೆ ಖಾಸಗಿ ಬಸ್, ಮ್ಯಾಕ್ಸಿಕ್ಯಾಬ್ ಮೊದಲಾದ ವಾಹನಗಳು ನಗರ ಸಾರಿಗೆಯತ್ತ ಮುಖ ಮಾಡಿವೆ. ಹೆಚ್ಚಿನ ವಾಹನಗಳು ಬೆಂಗಳೂರು–ಮೈಸೂರು ಮಾರ್ಗದಲ್ಲಿ ಸಂಚರಿಸುತ್ತಿವೆ. ಇಷ್ಟು ದಿನ ಹಳ್ಳಿಗಳಿಗೆ ಸಾರಿಗೆ ಸೇವೆ ಒದಗಿಸುತ್ತಿದ್ದ ಈ ವಾಹನಗಳ ಸೇವೆ ಇಲ್ಲದೆ ಗ್ರಾಮೀಣ ಜನರು ಪಟ್ಟಣದತ್ತ ಬರಲು ಪರದಾಟ ನಡೆಸುವಂತೆ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಕೆಎಸ್ಆರ್ಟಿಸಿ ನೌಕರರ ಮುಷ್ಕರ ಮೂರನೇ ದಿನವಾದ ಶುಕ್ರವಾರವೂ ಮುಂದುವರಿಯಿತು. ಈ ನಡುವೆಯೂ ರಾಮನಗರ ಘಟಕ ವ್ಯಾಪ್ತಿಯಲ್ಲಿ 9 ಬಸ್ಗಳು ಸಂಚಾರ ನಡೆಸಿದವು.</p>.<p>ರಾಮನಗರ ಡಿಪೊದಿಂದ 5, ಆನೇಕಲ್ ಡಿಪೊದಿಂದ 2 ಹಾಗೂ ಹಾರೋಹಳ್ಳಿ, ಚನ್ನಪಟ್ಟಣ ಡಿಪೊದಿಂದ ತಲಾ 1 ಬಸ್ಗಳು ಕಾರ್ಯಾಚರಣೆ ನಡೆಸಿದವು. ರಾಮನಗರ ಬಸ್ ನಿಲ್ದಾಣದಿಂದ ಚನ್ನಪಟ್ಟಣ, ಮಾಗಡಿ, ಕನಕಪುರ, ಬಿಡದಿ ಹಾಗೂ ಆನೇಕಲ್ ಬಸ್ ನಿಲ್ದಾಣದಿಂದ ಹೊಸೂರು ಮಾರ್ಗದಲ್ಲಿ ಬಸ್ ಸಂಚರಿಸಿದವು. ಆದರೆ ಈ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಮಾತ್ರ ಕಡಿಮೆ ಇತ್ತು. ಬೇರೆ ಬೇರೆ ಹುದ್ದೆಯಲ್ಲಿ ಇದ್ದವರನ್ನೂ ಬಸ್ ಸೇವೆಗೆ ನಿಯೋಜನೆ ಮಾಡಲಾಗಿತ್ತು.</p>.<p>ವಾರಾಂತ್ಯ ಹಾಗೂ ಯುಗಾದಿ ಹಬ್ಬದ ರಜೆ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಸಂಚಾರ ದಟ್ಟಣೆ ಕಂಡುಬಂದಿತು. ಹೆಚ್ಚಿನ ಮಂದಿ ಬೆಂಗಳೂರು, ರಾಮನಗರದಿಂದ ಹೊರ ಊರುಗಳತ್ತ ಹೊರಟರು. ಹೀಗಾಗಿ ಖಾಸಗಿ ಬಸ್ಗಳಲ್ಲಿ ಸಂಜೆ ಪ್ರಯಾಣಿಕರ ಸಂಖ್ಯೆ ಹೆಚ್ಚಿತ್ತು.<br /><br /><strong>ಗ್ರಾಮೀಣ ಸಾರಿಗೆಗೆ ಹೊಡೆತ</strong></p>.<p>ಮುಷ್ಕರ ಆರಂಭವಾದ ದಿನದಿಂದ ಈವರೆಗೆ ಖಾಸಗಿ ಬಸ್, ಮ್ಯಾಕ್ಸಿಕ್ಯಾಬ್ ಮೊದಲಾದ ವಾಹನಗಳು ನಗರ ಸಾರಿಗೆಯತ್ತ ಮುಖ ಮಾಡಿವೆ. ಹೆಚ್ಚಿನ ವಾಹನಗಳು ಬೆಂಗಳೂರು–ಮೈಸೂರು ಮಾರ್ಗದಲ್ಲಿ ಸಂಚರಿಸುತ್ತಿವೆ. ಇಷ್ಟು ದಿನ ಹಳ್ಳಿಗಳಿಗೆ ಸಾರಿಗೆ ಸೇವೆ ಒದಗಿಸುತ್ತಿದ್ದ ಈ ವಾಹನಗಳ ಸೇವೆ ಇಲ್ಲದೆ ಗ್ರಾಮೀಣ ಜನರು ಪಟ್ಟಣದತ್ತ ಬರಲು ಪರದಾಟ ನಡೆಸುವಂತೆ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>