ರಾಮನಗರ ಡಿಪೊದಿಂದ 5, ಆನೇಕಲ್ ಡಿಪೊದಿಂದ 2 ಹಾಗೂ ಹಾರೋಹಳ್ಳಿ, ಚನ್ನಪಟ್ಟಣ ಡಿಪೊದಿಂದ ತಲಾ 1 ಬಸ್ಗಳು ಕಾರ್ಯಾಚರಣೆ ನಡೆಸಿದವು. ರಾಮನಗರ ಬಸ್ ನಿಲ್ದಾಣದಿಂದ ಚನ್ನಪಟ್ಟಣ, ಮಾಗಡಿ, ಕನಕಪುರ, ಬಿಡದಿ ಹಾಗೂ ಆನೇಕಲ್ ಬಸ್ ನಿಲ್ದಾಣದಿಂದ ಹೊಸೂರು ಮಾರ್ಗದಲ್ಲಿ ಬಸ್ ಸಂಚರಿಸಿದವು. ಆದರೆ ಈ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಮಾತ್ರ ಕಡಿಮೆ ಇತ್ತು. ಬೇರೆ ಬೇರೆ ಹುದ್ದೆಯಲ್ಲಿ ಇದ್ದವರನ್ನೂ ಬಸ್ ಸೇವೆಗೆ ನಿಯೋಜನೆ ಮಾಡಲಾಗಿತ್ತು.