ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: 94 ಪ್ರಕರಣ ದೃಢ: ಒಂದು ಸಾವು

Last Updated 9 ಸೆಪ್ಟೆಂಬರ್ 2020, 16:26 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ಬುಧವಾರ 94 ಮಂದಿಯಲ್ಲಿ ಕೋವಿಡ್‌ ಸೋಂಕು ದೃಢವಾಗಿದೆ. ಚಿಕಿತ್ಸೆ ಫಲಿಸದೇ ಒಬ್ಬರು ಸಾವನ್ನಪ್ಪಿದ್ದಾರೆ.

ಚನ್ನಪಟ್ಟಣ 19, ಕನಕಪುರ 18, ಮಾಗಡಿ 12 ಮತ್ತು ರಾಮನಗರ 45 ಪ್ರಕರಣಗಳು ಇದರಲ್ಲಿ ಸೇರಿವೆ. ಇದರಿಂದಾಗಿ ಸೋಂಕಿತರ ಒಟ್ಟು ಸಂಖ್ಯೆಯು 4128ಕ್ಕೆ ಏರಿದೆ. ಚನ್ನಪಟ್ಟಣ 985, ಕನಕಪುರ 844, ಮಾಗಡಿ 622 ಮತ್ತು ರಾಮನಗರ 1677 ಪ್ರಕರಣಗಳು ಇದರಲ್ಲಿ ಸೇರಿವೆ. ಮಾಗಡಿ ತಾಲ್ಲೂಕಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 52 ಮಂದಿ ನಿಧನರಾಗಿದ್ದಾರೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 20, ಕನಕಪುರ ತಾಲ್ಲೂಕಿನಲ್ಲಿ 16, ಮಾಗಡಿ ತಾಲ್ಲೂಕಿನಲ್ಲಿ 12 ಹಾಗೂ ರಾಮನಗರ ತಾಲ್ಲೂಕಿನಲ್ಲಿ 33 ಜನ ಸೇರಿ ಒಟ್ಟಾರೆ 81 ಜನರು ಬುಧವಾರ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 3121 ಜನರು ಗುಣಮುಖರಾಗಿದ್ದಾರೆ. ಇನ್ನೂ 955 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT