ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗೆ ಈ ವಿಷಯ ತಿಳಿಸಿದ್ದು, ಅವರು ಮರಿಯನ್ನು ರಕ್ಷಣೆ ಮಾಡಿದ್ದಾರೆ. ಬೇರೆ
ಆನೆಗಳ ಗುಂಪಿನ ಜೊತೆ ಬಿಡುವಪ್ರಯತ್ನ ಮಾಡಿದ್ದಾರೆ. ಆದರೆ ಇತರೆ ಆನೆಗಳು ಈ ಮರಿಯನ್ನು ಜೊತೆಗೆ ಸೇರಿಸಿಕೊಂಡಿಲ್ಲ. ಹೀಗಾಗಿ ಸದ್ಯ ಇದನ್ನುಭೂಹಳ್ಳಿ ಕ್ಯಾಂಪ್ನಲ್ಲಿ ತಾವೇ ಪಾಲನೆ ಮಾಡುತ್ತಿದ್ದಾರೆ. ಸುತ್ತಲಿನಗ್ರಾಮಸ್ಥರು ಮರಿಯನ್ನು ಮುದ್ದು ಮಾಡಿ ಹೋಗುತ್ತಿದ್ದಾರೆ. ‘ಸದ್ಯ ಮರಿಯನ್ನು ಭೂಹಳ್ಳಿ ಪಶು ವೈದ್ಯಾಧಿಕಾರಿ ಗಿರೀಶ್ ನೇತೃತ್ವದಲ್ಲಿ ಪಾಲನೆ ಮಾಡಲಾಗುತ್ತಿದೆ. ಮರಿಯು ಹಾಲು ಕುಡಿಯುತ್ತಿದ್ದು,ಆರೋಗ್ಯದಿಂದ ಇದೆ. ಡಿಸಿಎಫ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೊಂದು ವಾರದಲ್ಲಿ ಇದನ್ನು ಮುತ್ತತ್ತಿ ಬಳಿಯ ಭೀಮೇಶ್ವರಿ ಕ್ಯಾಂಪಿಗೆ ಬಿಡುತ್ತೇವೆ’ ಎಂದು ಕಾವೇರಿ ವನ್ಯಜೀವಿಧಾಮದ ಸಂಗಮ ವಲಯ ಅರಣ್ಯಾಧಿಕಾರಿ ದೇವರಾಜು ‘ಪ್ರಜಾವಾಣಿ’ಗೆ ತಿಳಿಸಿದರು.