ಬದ್ರಯ್ಯ ಕಾಲೊನಿ ಬಳಿ ಹರಿಯುವ ನಲ್ಲಿಗುಡ್ಡ ಕೆರೆಯ ದೊಡ್ಡಹಳ್ಳಕ್ಕೆ ಇತ್ತೀಚೆಗೆ ಲೋಕೋಪಯೋಗಿ ಇಲಾಖೆಯಿಂದ ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು.ಕಳಪೆ ಕಾಮಗಾರಿ ಪರಿಣಾಮ ಸೇತುವೆ ಕೊಚ್ಚಿ ಹೋಗಿದೆ ಎಂದು ನಾಗರಿಕರು ದೂರಿದ್ದಾರೆ. ಈ ಭಾಗದಲ್ಲಿ ಲೇಔಟ್ ನಿರ್ಮಾಣಕ್ಕಾಗಿ ಖಾಸಗಿ ವ್ಯಕ್ತಿಯೊಬ್ಬರು ಜಮೀನು ಖರೀದಿಸಿದ್ದಾರೆ. ಕೆಳಗೆ ಹರಿಯುತ್ತಿದ್ದ ಹಳ್ಳಕ್ಕೆ ದೊಡ್ಡ ಕಾಂಪೌಂಡ್ ನಿರ್ಮಾಣ ಮಾಡಿ ಹಳ್ಳದ ಸ್ವರೂಪವನ್ನು ಬದಲಾವಣೆ ಮಾಡಿರುವುದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ.