<p>ಚನ್ನಪಟ್ಟಣ: ತಾಲ್ಲೂಕಿನ ಹರೂರು ಗ್ರಾಮದಲ್ಲಿ ಬುಧವಾರ ನಟ ಪುನೀತ್ ರಾಜ್ಕುಮಾರ್ ಅವರಿಗೆ ಗ್ರಾಮಸ್ಥರು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.</p>.<p>ಮುಖಂಡ ರವಿಶಂಕರ್ ಮಾತನಾಡಿ ‘ಅನಾಥಾಶ್ರಮ, ವೃದ್ಧಾಶ್ರಮ, ಹೆಣ್ಣು ಮಕ್ಕಳ ಶಿಕ್ಷಣ ಸೇರಿದಂತೆ ಸಮಾಜದ ನೊಂದ ವರ್ಗಗಳಿಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸಹಾಯ ಮಾಡುತ್ತಿದ್ದ ಪುನೀತ್ ನಿಜಜೀವನದಲ್ಲೂ ನಾಯಕರಾಗಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಮೆರೆದು ನಮ್ಮೆಲ್ಲರಿಗೂ ಮಾದರಿ ಆಗಿದ್ದಾರೆ’ ಎಂದು ಬಣ್ಣಿಸಿದರು.</p>.<p>ಇದೇ ಸಂದರ್ಭ ಗ್ರಾಮದ 50ಕ್ಕೂ ಹೆಚ್ಚು ಯುವಕರು ನೇತ್ರದಾನದ ಪ್ರತಿಜ್ಞೆ ಮಾಡಿದರು. ಶಾಲಾ ವಿದ್ಯಾರ್ಥಿಗಳಿಗೆ ನೋಟ್ಬುಕ್, ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಪುನೀತ್ ಅವರಿಗೆ ಪ್ರಿಯವಾದ ಮಾಂಸಾಹಾರ ಭೋಜನದ ವ್ಯವಸ್ಥೆ ಮಾಡಲಾಗಿತ್ತು.</p>.<p>ಮುಖಂಡರಾದ ಡೇರಿ ಶಿವರಾಮು, ಜೈಕುಮಾರ್, ನರಸಿಂಹ, ಅಶ್ವತ್ಥ್, ಬಿಜೆಪಿಯ ಶಿವಣ್ಣ, ರಾಜೇಶ, ಗ್ರಾಮದ ಯುವಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಪಟ್ಟಣ: ತಾಲ್ಲೂಕಿನ ಹರೂರು ಗ್ರಾಮದಲ್ಲಿ ಬುಧವಾರ ನಟ ಪುನೀತ್ ರಾಜ್ಕುಮಾರ್ ಅವರಿಗೆ ಗ್ರಾಮಸ್ಥರು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.</p>.<p>ಮುಖಂಡ ರವಿಶಂಕರ್ ಮಾತನಾಡಿ ‘ಅನಾಥಾಶ್ರಮ, ವೃದ್ಧಾಶ್ರಮ, ಹೆಣ್ಣು ಮಕ್ಕಳ ಶಿಕ್ಷಣ ಸೇರಿದಂತೆ ಸಮಾಜದ ನೊಂದ ವರ್ಗಗಳಿಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸಹಾಯ ಮಾಡುತ್ತಿದ್ದ ಪುನೀತ್ ನಿಜಜೀವನದಲ್ಲೂ ನಾಯಕರಾಗಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಮೆರೆದು ನಮ್ಮೆಲ್ಲರಿಗೂ ಮಾದರಿ ಆಗಿದ್ದಾರೆ’ ಎಂದು ಬಣ್ಣಿಸಿದರು.</p>.<p>ಇದೇ ಸಂದರ್ಭ ಗ್ರಾಮದ 50ಕ್ಕೂ ಹೆಚ್ಚು ಯುವಕರು ನೇತ್ರದಾನದ ಪ್ರತಿಜ್ಞೆ ಮಾಡಿದರು. ಶಾಲಾ ವಿದ್ಯಾರ್ಥಿಗಳಿಗೆ ನೋಟ್ಬುಕ್, ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಪುನೀತ್ ಅವರಿಗೆ ಪ್ರಿಯವಾದ ಮಾಂಸಾಹಾರ ಭೋಜನದ ವ್ಯವಸ್ಥೆ ಮಾಡಲಾಗಿತ್ತು.</p>.<p>ಮುಖಂಡರಾದ ಡೇರಿ ಶಿವರಾಮು, ಜೈಕುಮಾರ್, ನರಸಿಂಹ, ಅಶ್ವತ್ಥ್, ಬಿಜೆಪಿಯ ಶಿವಣ್ಣ, ರಾಜೇಶ, ಗ್ರಾಮದ ಯುವಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>