ರಾಮನಗರ: ಮಾಗಡಿ ತಾಲ್ಲೂಕಿನ ಸಾದಮಾರನಹಳ್ಳಿಯಲ್ಲಿ ಭಾನುವಾರ ರಾತ್ರಿ ಗಣಪತಿ ಮೂರ್ತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ ವ್ಯಕ್ತಿಯೊಬ್ಬರ ಕೊಲೆಯಾಗಿದೆ.
ಗ್ರಾಮದ ನಿವಾಸಿ ಸುಗಂಧರಾಜು (45) ಹತ್ಯೆಗೀಡಾದವರು. ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ.
ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ಇದ್ದು, ಪೊಲೀಸ್ ಕಾವಲು ಹಾಕಲಾಗಿದೆ.