<p><strong>ಚನ್ನಪಟ್ಟಣ</strong>: ‘ಶರವೇಗದಲ್ಲಿ ಬೆಳೆಯುತ್ತಿರುವ ವೈಜ್ಞಾನಿಕ ಕ್ಷೇತ್ರಕ್ಕೆ ಪೂರಕವಾದ ಆವಿಷ್ಕಾರ ಮಾಡುವ ಮೂಲಕ ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮರೀಗೌಡ ಕರೆ ನೀಡಿದರು.</p>.<p>ನಗರದ ಬಾಲು ಪಬ್ಲಿಕ್ ಶಾಲೆಯಲ್ಲಿ ಬಾಲು ಆಸ್ಪತ್ರೆ, ಬಾಲು ಪಬ್ಲಿಕ್ ಶಾಲೆ ಹಾಗೂ ಅಗಸ್ತ್ಯ ಅಂತರರಾಷ್ಟ್ರೀಯ ಪ್ರತಿಷ್ಠಾನ, ಎಲ್.ಎಸ್.ಐ ವಿಜ್ಞಾನ ಕೇಂದ್ರದಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಮಂಗಳವಾರ ನಡೆದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮಕ್ಕಳಲ್ಲಿ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಅಂತಹ ಪ್ರತಿಭೆಯನ್ನು ಹೊರ ತೆಗೆಯುವುದು ಅವಶ್ಯಕ. ಅದರಲ್ಲೂ ವಿಜ್ಞಾನ ಕ್ಷೇತ್ರದ ಬಗ್ಗೆ ಮಕ್ಕಳಲ್ಲಿ ಬಹಳ ಆಸಕ್ತಿ ಇರುವುದರಿಂದ ಮಕ್ಕಳ ಜ್ಞಾನ ವಿಕಾಸಕ್ಕೆ ಸಹಕಾರಿಯಾಗುವ ಈ ರೀತಿಯ ವಿಜ್ಞಾನ ವಸ್ತು ಪ್ರದರ್ಶನಗಳ ಅಗತ್ಯವಿದೆ ಎಂದರು.</p>.<p>ಅಧ್ಯಕ್ಷತೆವಹಿಸಿದ್ದ ಬಾಲು ಆಸ್ಪತ್ರೆಯ ವೈದ್ಯೆ ಡಾ.ಕೆ.ಪಿ. ಶೈಲಜಾ ಮಾತನಾಡಿ, ದೇಶದ ವಿಜ್ಞಾನ ಕ್ಷೇತ್ರದಲ್ಲಿ ಹಲವಾರು ಮಹಾನ್ ವಿಜ್ಞಾನಿಗಳು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಜೊತೆಗೆ, ಯುವ ವಿಜ್ಞಾನಿಗಳು ಹಲವಾರು ಸಾಧನೆ ಮಾಡುತ್ತಿದ್ದಾರೆ ಎಂದು<br />ಹೇಳಿದರು.</p>.<p>ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿ ಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ಸಣ್ಣಪುಟ್ಟ ಆವಿಷ್ಕಾರಗಳನ್ನು ಮಾಡುವ ಮೂಲಕ ದೊಡ್ಡ ದೊಡ್ಡ ಆವಿಷ್ಕಾರಗಳ ಕನಸು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಭಾರತ್ ವಿಕಾಸ್ ಪರಿಷತ್ ಅಧ್ಯಕ್ಷ ವಸಂತಕುಮಾರ್, ವಿದ್ಯಾಸಂಸ್ಥೆ ಕಾರ್ಯದರ್ಶಿ ವಿ. ವೆಂಕಟಸುಬ್ಬಯ್ಯ ಚೆಟ್ಟಿ, ಜಂಟಿ ಕಾರ್ಯದರ್ಶಿ ವಿ. ಬಾಲಸುಬ್ರಮಣ್ಯಂ, ಟ್ರಸ್ಟಿ ಕವಿತಾ, ಪ್ರಾಂಶುಪಾಲೆ ಕವಿತಾ, ಉಪ ಪ್ರಾಂಶುಪಾಲೆ ಮೆಹರ್ ಸುಲ್ತಾನ್, ವಿಜ್ಞಾನ ಶಿಕ್ಷಕರಾದ ವಿನೋದ್, ಮನು, ಶಶಿಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ‘ಶರವೇಗದಲ್ಲಿ ಬೆಳೆಯುತ್ತಿರುವ ವೈಜ್ಞಾನಿಕ ಕ್ಷೇತ್ರಕ್ಕೆ ಪೂರಕವಾದ ಆವಿಷ್ಕಾರ ಮಾಡುವ ಮೂಲಕ ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮರೀಗೌಡ ಕರೆ ನೀಡಿದರು.</p>.<p>ನಗರದ ಬಾಲು ಪಬ್ಲಿಕ್ ಶಾಲೆಯಲ್ಲಿ ಬಾಲು ಆಸ್ಪತ್ರೆ, ಬಾಲು ಪಬ್ಲಿಕ್ ಶಾಲೆ ಹಾಗೂ ಅಗಸ್ತ್ಯ ಅಂತರರಾಷ್ಟ್ರೀಯ ಪ್ರತಿಷ್ಠಾನ, ಎಲ್.ಎಸ್.ಐ ವಿಜ್ಞಾನ ಕೇಂದ್ರದಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಮಂಗಳವಾರ ನಡೆದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮಕ್ಕಳಲ್ಲಿ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಅಂತಹ ಪ್ರತಿಭೆಯನ್ನು ಹೊರ ತೆಗೆಯುವುದು ಅವಶ್ಯಕ. ಅದರಲ್ಲೂ ವಿಜ್ಞಾನ ಕ್ಷೇತ್ರದ ಬಗ್ಗೆ ಮಕ್ಕಳಲ್ಲಿ ಬಹಳ ಆಸಕ್ತಿ ಇರುವುದರಿಂದ ಮಕ್ಕಳ ಜ್ಞಾನ ವಿಕಾಸಕ್ಕೆ ಸಹಕಾರಿಯಾಗುವ ಈ ರೀತಿಯ ವಿಜ್ಞಾನ ವಸ್ತು ಪ್ರದರ್ಶನಗಳ ಅಗತ್ಯವಿದೆ ಎಂದರು.</p>.<p>ಅಧ್ಯಕ್ಷತೆವಹಿಸಿದ್ದ ಬಾಲು ಆಸ್ಪತ್ರೆಯ ವೈದ್ಯೆ ಡಾ.ಕೆ.ಪಿ. ಶೈಲಜಾ ಮಾತನಾಡಿ, ದೇಶದ ವಿಜ್ಞಾನ ಕ್ಷೇತ್ರದಲ್ಲಿ ಹಲವಾರು ಮಹಾನ್ ವಿಜ್ಞಾನಿಗಳು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಜೊತೆಗೆ, ಯುವ ವಿಜ್ಞಾನಿಗಳು ಹಲವಾರು ಸಾಧನೆ ಮಾಡುತ್ತಿದ್ದಾರೆ ಎಂದು<br />ಹೇಳಿದರು.</p>.<p>ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿ ಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ಸಣ್ಣಪುಟ್ಟ ಆವಿಷ್ಕಾರಗಳನ್ನು ಮಾಡುವ ಮೂಲಕ ದೊಡ್ಡ ದೊಡ್ಡ ಆವಿಷ್ಕಾರಗಳ ಕನಸು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಭಾರತ್ ವಿಕಾಸ್ ಪರಿಷತ್ ಅಧ್ಯಕ್ಷ ವಸಂತಕುಮಾರ್, ವಿದ್ಯಾಸಂಸ್ಥೆ ಕಾರ್ಯದರ್ಶಿ ವಿ. ವೆಂಕಟಸುಬ್ಬಯ್ಯ ಚೆಟ್ಟಿ, ಜಂಟಿ ಕಾರ್ಯದರ್ಶಿ ವಿ. ಬಾಲಸುಬ್ರಮಣ್ಯಂ, ಟ್ರಸ್ಟಿ ಕವಿತಾ, ಪ್ರಾಂಶುಪಾಲೆ ಕವಿತಾ, ಉಪ ಪ್ರಾಂಶುಪಾಲೆ ಮೆಹರ್ ಸುಲ್ತಾನ್, ವಿಜ್ಞಾನ ಶಿಕ್ಷಕರಾದ ವಿನೋದ್, ಮನು, ಶಶಿಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>