ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡಾನೆ ದಾಳಿಯಿಂದ ರೈತನನ್ನು ರಕ್ಷಿಸಿದ ಬೀದಿನಾಯಿಗಳು

Last Updated 22 ಏಪ್ರಿಲ್ 2021, 6:29 IST
ಅಕ್ಷರ ಗಾತ್ರ

ಕನಕಪುರ: ಕಾಡಾನೆಯೊಂದು ರೈತರೊಬ್ಬರ ಮೇಲೆ ದಾಳಿ ನಡೆಸಿ ಸೊಂಡಿಲಿನಿಂದ ಬಡಿದು ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಬಿಳಿದಾಳೆ ಗ್ರಾಮದಲ್ಲಿ ಬುಧವಾರ ನಡೆದಿದೆ.

ಗಾಯಗೊಂಡವರನ್ನು ಬಿಳಿದಾಳೆ ಗ್ರಾಮದ ರೈತ ಕೊಂಡಯ್ಯ (58) ಎಂದು ಗುರುತಿಸಲಾಗಿದೆ. ಅವರು ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಜಮೀನಿನ ಕಡೆ ಹೋದಾಗ ಆನೆಯು ಓಡಿಸಿಕೊಂಡು ಬಂದು ಸೊಂಡಲಿನಿಂದ ದಾಳಿ ನಡೆಸಿದೆ.

ಸೊಂಡಿಲು ಸ್ವಲ್ಪ ತಾಕಿ ಕೆಳಕ್ಕೆ ಬಿದ್ದಿದ್ದಾರೆ. ಗ್ರಾಮದಲ್ಲಿದ್ದ ಬೀದಿ ನಾಯಿಗಳು ಜೋರಾಗಿ ಬೊಗಳಿದ್ದರಿಂದ ಆನೆ ಓಡಿ ಹೋಗಿದೆ. ನಾಯಿಗಳೇ ಕೊಂಡಯ್ಯನನ್ನು ಕಾಪಾಡಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಅವರಿಗೆ ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್‌ಗೆ ಕಳುಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT